Tag: canaratv news

HOME INETRNATIONAL LATEST NEWS

ಯುದ್ಧ ಮಾಡುವರ ಪ್ರಾರ್ಥನೆಯನ್ನು ದೇವರು ಆಲಿಸುವುದಿಲ್ಲ: ಪೋಪ್‌ ಲೀಯೋ ಸಂದೇಶ

ರೋಮ್‌: ‘ಜೀಸಸ್‌ ಶಾಂತಿಯ ಸಂಕೇತ. ಅವರು ಯಾವ ಯುದ್ಧವನ್ನೂ ಬೆಂಬಲಿಸುವುದಿಲ್ಲ. ಯೇಸು ಬೆಂಬಲದ ಹೆಸರಿನಲ್ಲಿ ಯಾರೂ ಯುದ್ಧವನ್ನು ಸಮರ್ಥಿಸಲಾಗದು’. “ಮಾನವೀಯತೆಯು ಇಂದು ಶಿಲುಬೆಗೇರಿಸಲ್ಪಟ್ಟಿದೆ. ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಮಾತುಕತೆಯ ಮೂಲಕ ಶಾಂತಿ ಕಂಡುಕೊಳ್ಳಿ” ಎಂದು ಪಶ್ಚಿಮ ಏಷ್ಯಾದ ದೇಶಗಳಿಗೆ ಪೋಪ್‌ 14ನೇ ಲಿಯೊ ಕರೆ ನೀಡಿದ್ದಾರೆ.  ‘ಗರಿಗಳ ಭಾನುವಾರ’ ಆಚರಣೆಯ ಅಂಗವಾಗಿ ವ್ಯಾಟಿಕನ್‌ ಸೇಂಟ್‌ ಪೀಟರ್ಸ್‌ ಸ್ಕ್ವೇರ್‌ನಲ್ಲಿ ಸೇರಿದ್ದ ಅಪಾರ ಸಂಖ್ಯೆಯ ಜನರನ್ನು ಉದ್ದೇಶಿಸಿ ಸಂದೇಶ ನೀಡಿದ ಅವರು, ‘ದೇವರು ಹಿಂಸೆಯನ್ನು ಒಪ್ಪುವುದಿಲ್ಲ, ಯುದ್ಧ ಮಾಡುವರ ಪ್ರಾರ್ಥನೆಯನ್ನೂ ಅವರು […]

DAKSHINA KANNADA HOME LATEST NEWS

ರಸ್ತೆ ಡಿವೈಡರ್‌ಗೆ ಬೈಕ್ ಢಿಕ್ಕಿ: 19ರ ಯುವಕ ಸಾವು-ಮತ್ತೋರ್ವ ಗಂಭೀರ

ಬೆಳ್ತಂಗಡಿ: ಸವಾರನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಮಾರ್ಚ್ 28ರ ತಡರಾತ್ರಿ ಸಂಭವಿಸಿದೆ. ಲಾಯಿಲ ಗ್ರಾಮದ ಅಮ್ಮಣ್ಣಂಗಡಿ ನಿವಾಸಿ ಚಂದ್ರಶೇಖರ್ ಅವರ ಪುತ್ರ ನಿತೇಶ್ (19) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಬೈಕ್ ಚಲಾಯಿಸುತ್ತಿದ್ದ ಪುತ್ತೂರು ನಿವಾಸಿ ಲಿಖಿತ್ (20) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಉಜಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಎಂದು […]

DAKSHINA KANNADA HOME LATEST NEWS

ಪ್ರತಿ ತಾಲೂಕಿನಲ್ಲಿ ಬೀದಿನಾಯಿಗಳ ಆಶ್ರಯ ಕೇಂದ್ರ: ಜಿಲ್ಲಾಧಿಕಾರಿ

ಮಂಗಳೂರು:- ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಇಂತಹ ಆಶ್ರಯ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‍ಗಳಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳ ಜನನ ನಿಯಂತ್ರಣ […]

DAKSHINA KANNADA HOME LATEST NEWS STATE

ಕೊನೆಗೂ ಹಾಜಬ್ಬರಿಗೆ ಗೌರವ ಡಾಕ್ಟರೇಟ್‌ ಕೊಡಲು ಮನಸ್ಸು ಮಾಡಿದ ಮಂಗಳೂರು ವಿವಿ

ಮಂಗಳೂರು: ವಿವಿಯ ಕೂಗಳತೆ ದೂರದಲ್ಲಿದ್ದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಕೊನೆಗೂ ಮಂಗಳೂರು ವಿಶ್ವವಿದ್ಯಾಲಯ ಈ ಬಾರಿಯ ಮಂಗಳೂರು ವಿವಿಯ ಗೌರವ ಡಾಕ್ಟರೇಟ್‌ ನೀಡಲು ನಿರ್ಧರಿಸಿದೆ. ತನ್ನ ಒಡಲಲ್ಲೇ ಇದ್ದ ಒಬ್ಬ ಸಾಧಕನನ್ನು ಬಿಟ್ಟು ಊರ-ಪರವೂರ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್‌ ನೀಡುತ್ತಿದ್ದ ಮಂಗಳೂರು ವಿವಿ ಕೊನೆಗೂ ಹರೇಕಳ ಹಾಜಬ್ಬರಿಗೆ ಈ ಬಾರಿ ಡಾಕ್ಟರೇಟ್‌ ಪ್ರದಾನ ಮಾಡಲು ಮನಸ್ಸು ಮಾಡಿದೆ. ಹರೇಕಳ ಹಾಜಬ್ಬ ಮೂರು ದಶಕಗಳ ಹಿಂದೆಯೇ ತನ್ನೂರಿಗೆ ಶಾಲೆ ಬೇಕೆಂದು ಕನಸು ಕಂಡಿದ್ದವರು.  ಅದರಕ್ಕಾಗಿ ರಾಜಕೀಯ ನೇತರಾರು, […]

DAKSHINA KANNADA HOME LATEST NEWS

ತೊಕ್ಕೊಟ್ಟು: ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಓರ್ವನ ಮರ್ಡರ್‌

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಈತ ಓರ್ವ ರೌಡಿಶೀಟರ್‌ ಆಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, […]

DAKSHINA KANNADA HOME LATEST NEWS

1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಬೆಂಗಳೂರು: ಒಂದನೇ ತರಗತಿಯ ಮಕ್ಕಳಿಗೆ ಶಾಲೆ ಸೇರ್ಪಡೆಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ  ಪೋಷಕರು ನಿರಾಳರಾಗಿದ್ದಾರೆ. ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಪ್ರಸಕ್ತ ವರ್ಷಕ್ಕೆ ಅನ್ವಯವಾಗುವಂತೆ ಮಕ್ಕಳ ಶಾಲಾ ಪ್ರವೇಶಕ್ಕೆ […]

DAKSHINA KANNADA HOME LATEST NEWS

ಮಂಗಳೂರು ಪೊಲೀಸರ ಹೆಸರಲ್ಲೇ ನಕಲಿ ವೆಬ್‌ಸೈಟ್….!

ಮಂಗಳೂರು: ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ವೆಬ್‌ಸೈಟ್ ಸೃಷ್ಟಿಸಿ ಆನ್‌ಲೈನ್ ಜೂಜಾಟ ನಡೆಸುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಸಂಬಂಧ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ಅವರು ನೀಡಿದ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಿನಾಂಕ 25-03-2026ರಂದು ಸಂಜೆ ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ನಕಲಿ […]

COMMUNITY NEWS DAKSHINA KANNADA HOME

ರೊಸಾರಿಯೊ ಕ್ಯಾಥೆಡ್ರೆಲ್‌ನಲ್ಲಿ ಬಿಷಪ್‌ರಿಂದ ‘ಕ್ರಿಸಮ್ ಬಲಿಪೂಜೆ’

ಮಂಗಳೂರು: ಮುಂಬರುವ ಪವಿತ್ರ ವಾರದ ಆಚರಣೆಗಳಿಗೆ ಮುನ್ನುಡಿಯಾಗಿ ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ‘ಕ್ರಿಸಮ್ ಬಲಿಪೂಜೆ’(ತೈಲ ಪವಿತ್ರಿಕರಿಸುವ ಪೂಜೆ) ಗುರುವಾರ ಸಂಜೆ ನಗರದ ರೊಸಾರಿಯೊ ಕ್ಯಾಥೆಡ್ರೆಲ್‌ನಲ್ಲಿ ಭಕ್ತಿಪೂರ್ವಕವಾಗಿ ನೆರವೇರಿತು.ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಈ ಪವಿತ್ರ ಬಲಿಪೂಜೆಯ ನೇತೃತ್ವ ವಹಿಸಿದ್ದರು. ಈ ಪ್ರಧಾನ ಧಾರ್ಮಿಕ ವಿಧಿಯಲ್ಲಿ, ಮುಂಬರುವ ವರ್ಷದಲ್ಲಿ ಧರ್ಮಕ್ಷೇತ್ರದಾದ್ಯಂತ ಎಲ್ಲಾ ಚರ್ಚ್‌ಗಳಲ್ಲಿ ವಿವಿಧ ಸಂಸ್ಕಾರಗಳನ್ನು ನೀಡಲು ಬಳಸುವ ಪವಿತ್ರ ತೈಲಗಳನ್ನು ಧರ್ಮಾಧ್ಯಕ್ಷರು ಆಶೀರ್ವದಿಸಿದರು. ಇದೇ ವೇಳೆ ಧರ್ಮಕ್ಷೇತ್ರದ ಎಲ್ಲಾ […]

DAKSHINA KANNADA HOME LATEST NEWS

ಉಪ್ಪಿನಂಗಡಿ: ಯುವತಿ ಸ್ನಾನದ ವೀಡಿಯೋ ವಾಟ್ಸ್‌ಆ್ಯಪ್‌ನಲ್ಲಿ ಹಂಚಿದ ಆರೋಪ- FIR

ಉಪ್ಪಿನಂಗಡಿ: ಪ್ರೀತಿಸುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಸ್ನಾನ ಮಾಡುವ ಖಾಸಗಿ ವಿಡಿಯೊವನ್ನು ಚಿತ್ರೀಕರಿಸಿ ವಾಟ್ಸ್‌ ಆ್ಯಪ್‌ನಲ್ಲಿ ಹಂಚಿದ ಆರೋಪದ ಮೇಲೆ ಯುವಕ ಹಾಗೂ ಆತನ ತಂಗಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಇನ್‌ಸ್ಟಾಗ್ರಾಂಲ್ಲಿ ಆರು ತಿಂಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಪ್ರಸ್ತುತ ಊರಿನಲ್ಲಿದ್ದೇನೆ ಎಂಬುದಾಗಿ ಆತ ತಿಳಿಸಿದ್ದ. ನಾವು ಪರಸ್ಪರ ಪ್ರೀತಿಸಿದ್ದು, ಮದುವೆಯಾಗಲು ನಿರ್ಧರಿಸಿದ್ದೆವು. ಈ ಮಧ್ಯೆ ಆತ ಖಾಸಗಿ ವಿಡಿಯೊ ಕಳುಹಿಸುವಂತೆ ಅಥವಾ ನಗ್ನವಾಗಿ ವಿಡಿಯೊ […]

HOME

ಸಾಮಾಜಿಕ ಮಾಧ್ಯಮದಲ್ಲಿ ಕೋಮು ಪ್ರಚೋದನಕಾರಿ ಸಂದೇಶ: ಓರ್ವನ ಬಂಧನ

ಮಂಗಳೂರು: ಬಜಪೆಯಲ್ಲಿ 2025ರಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಕೋಮು ಪ್ರಚೋದನಕಾರಿ ಸಂದೇಶ ಹಂಚಿಕೊಂಡ ಆರೋಪಿ ಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಬುಧವಾರ ಹಾಜರು ಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22) ಬಂಧಿತ ಆರೋಪಿ. ಆತ ಸಾಮಾಜಿಕ ಮಾಧ್ಯಮ ದಲ್ಲಿ ಕೋಮು ಪ್ರಚೋದಕ ಸಂದೇಶ ಹಂಚಿಕೊಂಡ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 353 (1) (ಸಾರ್ವಜನಿಕ […]