“ಕಾಮಿಡಿ ಕಿಲಾಡಿಗಳು” ಶೋನಲ್ಲಿ ಹಿಂದೂ ದೇವರುಗಳ ಅಪಹಾಸ್ಯ: ಹೈಕೋರ್ಟ್ ತರಾಟೆ
ಬೆಂಗಳೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು’ ಸಂಚಿಕೆಯೊಂದರಲ್ಲಿ ಹಿಂದು ದೇವತೆಗಳನ್ನು ಅಪಹಾಸ್ಯ ಮಾಡಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ವಾಕ್ ಸ್ವಾತಂತ್ರ್ಯದ ನೆಪದಲ್ಲಿ ನೀವು ಏನಾದರೂ ಮಾಡಬಹುದೇ? ಎಂದು ಝೀ ವಾಹಿನಿ ಹಾಗೂ ಕಾರ್ಯಕ್ರಮದ ನಿರ್ದೇಶಕರನ್ನು ಕಟುವಾಗಿ ಪ್ರಶ್ನಿಸಿದೆ. ಇದೇ ವೇಳೆ ವಾಹಿನಿ, ಕಾರ್ಯಕ್ರಮದ ನಿರ್ದೇಶಕರು ಹಾಗೂ ಕಲಾವಿದರ ವಿರುದ್ಧ ಮುಂದಿನ ವಿಚಾರಣೆವರೆಗೆ ಬಲವಂತದ ಕ್ರಮ ಜರುಗಿಸದಂತೆ ಪ್ರಾಸಿಕ್ಯೂಷನ್ಗೆ ನಿರ್ದೇಶಿಸಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಕೋರಿ […]










