Tag: canaratv

DAKSHINA KANNADA HOME LATEST NEWS

ಮಹೇಶ್ ಭಟ್ ವಿರುದ್ಧ ಸ್ವಪಕ್ಷದಿಂದಲೇ ನಡೆಯಿತಾ ಷಡ್ಯಂತ್ರ? ಆತನ ಆಪ್ತರಿಂದಲೇ ಸ್ಪೋಟಕ ಮಾಹಿತಿ!

ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ಅಪ್ರಾಪ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಮಹೇಶ್ ಭಟ್ ಗೆ ಜಾಮೀನು ಮಂಜೂರಾಗಿದೆ. ಕದ್ದುಮುಚ್ಚಿ ಓಡಾಡುತ್ತಿದ್ದ ಭಟ್ ಜಾಮೀನು ಮಂಜೂರಾಗುತ್ತಿದ್ದಂತೆ ಊರಲ್ಲಿ ಮತ್ತೆ ಪ್ರತ್ಯಕ್ಷವಾಗಿದ್ದಾನೆ. ಈ ನಡುವೆ ಮಹೇಶ್ ಭಟ್ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎನ್ನುವ ಚರ್ಚೆಗಳು ಆತನ ಆಪ್ತ ವಲಯದಿಂದಲೇ ಕೇಳಿಬಂದಿದೆ. ರಾಜಕೀಯವಾಗಿ ಮುನ್ನಲೆಗೆ ಬರುತ್ತಿರುವ ಮಹೇಶ್ ಭಟ್ ವಿರುದ್ಧ ಸ್ಥಳೀಯ ನಾಯಕರೇ ಷಡ್ಯಂತ್ರ ಮಾಡಿದ್ದಾರೆ ಎಂಬ ಮಾತು ವಿಟ್ಲದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದಲಿತ ಬಾಲಕಿಯನ್ನು ಮುಂದಿಟ್ಟುಕೊಂಡು ಅವರದ್ದೇ ಪಕ್ಷದವರು […]

HOME INETRNATIONAL LATEST NEWS

ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ಸ್ಥಗಿತಗೊಳಿಸಿದ ಸೌದಿ ಅರೇಬಿಯಾ

ರಿಯಾದ್: ಸೌದಿ ಅರೇಬಿಯಾವು ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್ ಯಾತ್ರೆ ಹಿನ್ನೆಲೆ ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸೌದಿ ಸರ್ಕಾರ ತಿಳಿಸಿದೆ. ಈ ನಿಷೇಧವು ಹಜ್ ಯಾತ್ರೆಯು ಮುಕ್ತಾಯಗೊಳ್ಳುವವರೆಗೆ ಅಂದರೆ ಜೂನ್ ಮಧ್ಯದವರೆಗೆ ನಿಷೇಧವು ಜಾರಿಯಲ್ಲಿರಲಿದೆ. ಸೌದಿ ಅರೇಬಿಯಾ ಉಮ್ರಾ, ವ್ಯಾಪಾರ ಮತ್ತು ಕೌಟುಂಬಿಕ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನೋಂದಣಿ ಇಲ್ಲದ ವ್ಯಕ್ತಿಗಳು ಹಜ್ ನಿರ್ವಹಿಸಲು ಪ್ರಯತ್ನಿಸುವುದನ್ನು ತಡೆಯಲು, ಜನಸಂದಣಿಯನ್ನು ನಿಯಂತ್ರಿಸಲು, […]

DAKSHINA KANNADA HOME LATEST NEWS

ಅಪ್ರಾಪ್ತೆಗೆ ಕಿರುಕುಳ ನೀಡಿದ ಪ್ರಕರಣ: ಅರೋಪಿ ಮಹೇಶ್ ಭಟ್‌ಗೆ ಜಾಮೀನು

ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ದಲಿತ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಸ್.ಟಿ.ಎಸ್.ಸಿ.-1 (ಪೊಕ್ಸೊ ನ್ಯಾಯಾಲಯ) ಸೋಮವಾರ ಶರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. ಆರೋಪಿ ಮಹೇಶ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ವಿಶೇಷ ಸರಕಾರಿ ಅಭಯೋಜಕರ, ಅರ್ಜಿದಾರ ಪರ ವಕೀಲರ ಮತ್ತು ಪಿರ್ಯಾದಿದರಾರರು ಮತ್ತಾಕೆಯ ಹೆತ್ತವರನ್ನು ನ್ಯಾಯಾಧೀಶರು ವಿಚಾರಣೆಗೊಳಪಡಿಸಿದ್ದರು. ಕೃತ್ಯ ನಡೆಸಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ, ಆತನನ್ನು ಬಂಧಿಸುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ […]

HOME LATEST NEWS NATIONAL

ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ: ಬಿಜೆಪಿ ನಾಯಕನ ಮನೆಗೆ ಬೆಂಕಿ

ಇಂಫಾಲ್‌: ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲಿಸಿದ ಆರೋಪದ ಮೇಲೆ, ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷನ ಮನೆಗೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಸ್ಕರ್‌ ಅಲಿ ಮನೆಗೆ ಗುಂಪೊಂದು ಭಾನುವಾರ ರಾತ್ರಿ ದಾಳಿ ಮಾಡಿ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯು ಥೌಬಾಲ್‌ ಜಿಲ್ಲೆಯ ಲಿಲೊಂಗ್ ಎಂಬಲ್ಲಿ ನಡೆದಿದೆ. ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿ ಅಸ್ಕರ್‌ ಅಲಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ […]

DAKSHINA KANNADA HOME LATEST NEWS

ಕಡಬ, ನೆಲ್ಯಾಡಿ ಗಾಳಿ- ಸಿಡಿಲು ಸಹಿತ ಭಾರೀ ಮಳೆ: ವಿದ್ಯುತ್‌ ಸಂಪರ್ಕ ಕಡಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸಂಜೆ ವೇಳೆಗೆ ವರುಣ ತಂಪೆರೆದಿದ್ದಾನೆ. ಸಂಜೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ನೆಲ್ಯಾಡಿ, ಪುತ್ತೂರಿನಲ್ಲಿ ಗಾಳಿ, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಭಾರೀ ಗಾಳಿಯ ಪರಿಣಾಮ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಮಂಗಳೂರು ನಗರದ ಸುತ್ತಮುತ್ತ ಸಾಧಾರಣ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ.  

DAKSHINA KANNADA HOME LATEST NEWS

ಕಾಲೇಜಿಗೆ ಹೋಗುತ್ತಿದ್ದ ಯುವಕ ನಾಪತ್ತೆ

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕಾಲೇಜಿನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಬಿಹಾರ ಮೂಲದ ಸುಧಾಂಶುಕುಮಾರ (21 ) ಎಂಬವರು ಕಾಣೆಯಾಗಿದ್ದಾರೆ. `ಕಾಣೆಯಾದವರ ಚಹರೆ : ಸುಮಾರು 5.6 ಅಡಿ, ಸಾಧಾರಣ ಶರೀರ, ಗೋದಿ ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಕೆಂಪು ಬಣ್ಣದ ಟಿ ಶರ್ಟ್, ಬರ್ಮುಡ ಪ್ಯಾಂಟ್ ಧರಿಸಿದ್ದರು. ಹಿಂದಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪಣಂಬೂರು ಪೆÇಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

HOME LATEST NEWS NATIONAL STATE

ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ವಿಮಾನ ಯಾನ ಖಾತೆ ಸಚಿವರ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಪತ್ರದ ವಿವರ ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) […]

DAKSHINA KANNADA HOME LATEST NEWS

ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿಟ್ಲದಲ್ಲಿ ಬೃಹತ್‌ ಪ್ರತಿಭಟನೆ

ವಿಟ್ಲ: ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ  ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಹಾಗೂ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಇದರ ಸಹಭಾಗಿತ್ವದಲ್ಲಿ ವಿಟ್ಲದಲ್ಲಿ ಪ್ರತಿಭಟನಾ ಸಭೆ ನಡೆಯಿತು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ […]

DAKSHINA KANNADA HOME LATEST NEWS UDUPI

ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ..!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ  ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆ (ಗುರುವಾರ) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 […]

HOME LATEST NEWS STATE

Uber, Rapido ಸೇರಿದಂತೆ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌ ಆದೇಶ

ಬೆಂಗಳೂರು: ಉಬರ್, ರ್ಯಾಪಿಡೋ ಸಹಿತ ಹಲವು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಮೋಟಾರ್ ಸೈಕಲ್‌ಗಳನ್ನು […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678