ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ’ ಕಾರ್ಯಕ್ರಮ
ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ ’ಯೋಗ ವಿದ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ ರಮಣೀಯ ಪ್ರದೇಶ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 21ರ ಭಾನುವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ 3ನೇ […]











