Tag: canaratv

DAKSHINA KANNADA HOME LATEST NEWS

ಮಂಗಳೂರು: ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ-40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆ

ಮಂಗಳೂರು: ಆಡಂಕುದ್ರುನಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಉರ್ಬನ್‌ ಡಿಸೋಜಾ ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 5 ಲೀಟರ್‌ ಕಳ್ಳಭಟ್ಟಿ ಸಾರಾಯಿ, ಕಳ್ಳಭಟ್ಟಿ ತಯಾರಿಸಲು ಉಪಯೋಗಿಸುತ್ತಿದ್ದ ಸಲಕರಣೆಗಳು, 40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆಯಾಗಿದೆ. ಮಂಗಳೂರು ದಕ್ಷಿಣ ವಲಯದ ಅಬಕಾರಿ ಕಮಲ ಎಚ್‌. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಹರೀಶ್‌ ಪಿ. ಕಾನ್ಸ್ಟೇಬಲ್‌ಗಳಾದ ಬಸವಾರಜ ತೊರೆ, ಆನಂದ್‌, ವಾಹನಚಾಲಕ ರಘುರಾಮ ಕಾರ್ಯಚರಣೆಯಲ್ಲಿ ಸಹಕರಿಸಿದ್ದರು.

DAKSHINA KANNADA HOME LATEST NEWS

ಮಂಗಳೂರು- ನಾಳೆಯಿಂದ ಎ.9 ರವರೆಗೆ ಜೆಇಇ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಮಂಗಳೂರು: ಎಪ್ರಿಲ್ 2 ರಿಂದ 9 ರವರೆಗೆ ನಡೆಯಲಿರುವ ಜೆಇಇ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 300 ಮೀಟರ್ ಸುತ್ತಮುತ್ತಲಿನ ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ – ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್‌ ಗೋಯಲ್ ಆದೇಶಿಸಿದ್ದಾರೆ. 1)ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, 2) ಐಓಎನ್ ಡಿಜಿಟಲ್ […]

DAKSHINA KANNADA HOME LATEST NEWS

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಆರೋಪಿ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಮಾಣಿಲ ಗ್ರಾಮದ ಮುರುವದಲ್ಲಿ ದಲಿತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ನಿವಾಸಿ ಮಹೇಶ್ ಭಟ್ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಸೆಕ್ಷನ್ ಹಾಗೂ ದಲಿತ ದೌರ್ಜನ್ಯ ಕಾಯಿದೆಯ ಅನ್ವಯ ಪ್ರಕರಣ ದಾಖಲಾಗಿದ್ದರೂ ಕೂಡ ಪೊಲೀಸ್ ಇಲಾಖೆ ಈ ಕುರಿತು ಕ್ರಮ ಜರುಗಿಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಈ ಕುರಿತು ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ […]

COMMUNITY NEWS HOME

ಕವಿ ಮೆಲ್ವಿನ್ ರೊಡ್ರಿಗಸ್ – ಹೊಸದೆಹಲಿ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ನೇಮಕ

ಮಂಗಳೂರು : ಹೊಸದಿಲ್ಲಿಯ  ಕೇಂದ್ರ ಸಾಹಿತ್ಯ ಅಕಾಡೆಮಿಯ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ಕವಿ,  ಸಾಹಿತಿ  ಮೆಲ್ವಿನ್ ರೊಡ್ರಿಗಸ್   ನೇಮಕಗೊಂಡಿದ್ದಾರೆ. 24 ರಾಷ್ಟ್ರೀಯ ಭಾಷೆಗಳ ಸಾಹಿತ್ಯದ ಶ್ರೇಯೋಭಿವೃದ್ದಿಗಾಗಿ1954 ರಿಂದ  ಭಾರತ ಸರಕಾರದ  ಸಂಸ್ಕೃತಿ  ಸಚಿವಾಲಯದಡಿ ಶ್ರಮಿಸುತ್ತಿರುವ ಸ್ವಾಯತ್ತ ಸಂಸ್ಥೆ  ಸಾಹಿತ್ಯ ಅಕಾಡೆಮಿಯಾಗಿದೆ.  ಇದರ ಪಶ್ಚಿಮ ಪ್ರಾದೇಶಿಕ ವಲಯದಲ್ಲಿ ಗುಜರಾತಿ, ಮರಾಠಿ, ಸಿಂಧಿ ಮತ್ತು ಕೊಂಕಣಿ ಭಾಷೆಗಳಿದ್ದು, ಪ್ರಸ್ತುತ  ಮೆಲ್ವಿನ್ ರೊಡ್ರಿಗಸ್ ಕೊಂಕಣಿ ಭಾಷಾ ಸಲಹಾ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಲಹಾ […]

DAKSHINA KANNADA HOME LATEST NEWS

ಬೆಳ್ತಂಗಡಿ: 3 ತಿಂಗಳ ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ಅಂದಾಜು 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.                                             […]

HOME LATEST NEWS STATE

ನಾಳೆಯಿಂದ ರಾಜ್ಯದಲ್ಲಿ ಡೀಸೆಲ್‌ ದರ ಹೆಚ್ಚಳ: ಮಧ್ಯರಾತ್ರಿಯಿಂದಲೇ ಜಾರಿ!

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಹಾಲು ಮತ್ತು ಕರೆಂಟ್ ದರ ಹೆಚ್ಚಳವಾಗಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರಿಂದ 3 ರೂಪಾಯಿಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44ರಷ್ಟು ಇದ್ದ ತೆರಿಗೆ, ಇದೀಗ ಶೇಕಡ 21.17ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಡಿಸೇಲ್​ 88.99 ರೂಪಾಯಿಗೆ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್​ ಮತ್ತು ಡೀಸೆಲ್​ […]

Breaking News DAKSHINA KANNADA HOME LATEST NEWS

ಉಪ್ಪಿನಂಗಡಿ: ಗುಡ್ಡೆಯಲ್ಲಿ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧ ಪತ್ತೆ..!

ಉಪ್ಪಿನಂಗಡಿ: ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಗುಡ್ಡೆಯಲ್ಲಿ ಪತ್ತೆಯಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ. ಉಪ್ಪಿನಂಗಡಿಯ ಇಳಂತಿಲ ಸಮೀಪ ಹಿಂದೂ ಮಹಿಳೆಯೊಂದಿಗೆ ಓರ್ವ ವೃದ್ಧ ಇರುವುದನ್ನು ಗಮನಿಸಿದ ಸ್ಥಳೀಯರು ವಿಚಾರಿಸಿದ್ದಾರೆ. ವೃದ್ಧ ಅಲ್ಲೇ ಸಮೀಪದ ಕರ್ವೇಲ್‌ ನಿವಾಸಿಯಾಗಿದ್ದು, ವೃದ್ದ ಮತ್ತು ಮಹಿಳೆ ಜೊತೆಯಾಗಿದ್ದುದ್ದನ್ನು ಕಂಡು ಇಬ್ಬರನ್ನೂ ಸ್ಥಳೀಯರು ಬೆನ್ನಟ್ಟಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.  

HOME LATEST NEWS STATE

ನಾಳೆಯಿಂದ ದುಬಾರಿ ದುನಿಯಾ: ಹಾಲು, ವಿದ್ಯುತ್‌, ಟೋಲ್‌ ಸೇರಿ ಹಲವು ಬೆಲೆ ಹೆಚ್ಚಳ

ಬೆಂಗಳೂರು: ನಾಳೆ ಬೆಳಗಾದರೆ ಹಾಲು, ವಿದ್ಯುತ್, ಟೋಲ್‌ ಸೇರಿದಂತೆ ಹಲವು ದರಗಳು ಏರಿಕೆಯಾಗಿ ಜನಸಾಮಾನ್ಯರ ಜೋಬಿಗೆ ಕತ್ತರಿ ಹಾಕಲಿವೆ. ಹಾಗಾದರೆ ಏನೆಲ್ಲಾ ಬದಲಾಗಲಿದೆ ನಾಳೆಯಿಂದ. ನಾಳೆಯಿಂದ ದೇಶಾದ್ಯಂತ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಬದಲಾವಣೆಗಳು ಆಗಲಿವೆ. ಅದರ ಒಂದಷ್ಟು ಮಾಹಿತಿ ಇಲ್ಲಿದೆ. ಏನೆಲ್ಲಾ ಬದಲಾವಣೆಯಾಗಲಿದೆ ಹಾಲಿನ ದರ ಪ್ರತೀ ಲೀ.ಗೆ 4 ರೂಪಾಯಿ ಹೆಚ್ಚಳ ವಿದ್ಯುತ್ ದರ ಹೆಚ್ಚಳ ಟೋಲ್ ದರ ಹೆಚ್ಚಳ ಎಟಿಎಂ ವಿತ್‌ಡ್ರಾಗೆ ಹೆಚ್ಚಿನ ಶುಲ್ಕ ಎಲ್‌ಪಿಜಿ ಸಿಲಿಂಡರ್‌ ಬೆಲೆ ಹೆಚ್ಚಳ. […]

DAKSHINA KANNADA HOME LATEST NEWS

ವಿಟ್ಲ: ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಮನೆಗೆ ಸಂಘಟನೆಗಳ ಭೇಟಿ

ಮಂಗಳೂರು: ಇತ್ತೀಚೆಗೆ ವಿಟ್ಲದ ಮುರುವ ಪ್ರದೇಶದಲ್ಲಿ ಭೂಮಾಲಕ ಮಹೇಶ್ ಭಟ್ ಎಂಬವನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ದಲಿತ ವರ್ಗದ ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಗೆ ಡಿಎಚ್ಎಸ್, ಡಿವೈಎಫ್ಐ ಸಂಘಟನೆಯ ನಾಯಕರುಗಳ ನಿಯೋಗ  ಭೇಟಿ ನೀಡಿ ಘಟನೆಗೆ ಸಂಬಂಧಿಸಿ ಹಲವು ಅಂಶಗಳ ಬಗ್ಗೆ ಚರ್ಚಿಸಿದೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ಧೈರ್ಯವನ್ನು ತುಂಬಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಐದಾರು ದಿನ ಕಳೆದರೂ ಆರೋಪಿ ಮಹೇಶ್ ಭಟ್ ನನ್ನು ಈವರೆಗೂ ಬಂಧಿಸಲು ಸಾಧ್ಯವಾಗದಿರುವ ಪೊಲೀಸ್ ಇಲಾಖೆಯ ಕ್ರಮ ಖಂಡನೀಯ. ಸದ್ಯ […]

DAKSHINA KANNADA HOME LATEST NEWS

ವಿಟ್ಲ: ಮಟ್ಕಾ ದಂಧೆಗೆ ಪೊಲೀಸರ ದಾಳಿ- ಓರ್ವ ವಶಕ್ಕೆ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ಪೊಲೀಸರು ದಾಳಿ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿಯನ್ನು ಕೇಪು ಗ್ರಾಮದ ಅಶೋಕ (45) ಎಂದು ಗುರುತಿಸಲಾಗಿದೆ. ಘಟನೆ ವಿವರ ಕೇಪು ಗ್ರಾಮದ ಅಡ್ಯನಡ್ಕ ಪೆಟ್ರೊಲ್ ಪಂಪ್ ಬಳಿ ಅಶೋಕ ಎಂಬಾತನು  ಮಟ್ಕಾ ಆಟವನ್ನು ಆಡಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್‌ ಉಪನಿರೀಕ್ಷಕ ಕೌಶಿಕ್‌ ಬಿ.ಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678