ಮರಣ ಹೊಂದಿದವರ ‘ಗೃಹಲಕ್ಷ್ಮಿ’ ಹಣ ಸರ್ಕಾರಕ್ಕೆ ವಾಪಸ್ ಮಾಡಿ: ಭರತ್ ಮುಂಡೋಡಿ ಸೂಚನೆ
ಮಂಗಳೂರು, ಜೂನ್.16: ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿ, ಆ ಬಳಿಕ ಮೃತಪಟ್ಟ ಮಹಿಳೆಯರ ಖಾತೆಗೆ ಜಮೆಯಾಗಿರುವ ಹಣವನ್ನು ತಕ್ಷಣವೇ ಸರ್ಕಾರಕ್ಕೆ ಮರಳಿ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಅವರು ಸೂಚಿಸಿದ್ದಾರೆ. ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು 3.34ಕೋಟಿ ರೂಪಾಯಿ ಪತ್ತೆ: ರಾಜ್ಯ ಸರ್ಕಾರದ ದೊಡ್ಡ ಯೋಜನೆಯಾದ […]











