Tag: canaratv

DAKSHINA KANNADA HOME LATEST NEWS

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ […]

DAKSHINA KANNADA HOME LATEST NEWS

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ರೇಡ್‌: ಸರ್ವೇಯರ್‌, ದಲ್ಲಾಳಿ ಬಂಧನ

ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್‌ನಲ್ಲಿ ಸರ್ವೆ ನಡೆಸಿ ಲಂಚಕ್ಕೆ […]

DAKSHINA KANNADA HOME LATEST NEWS

ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌ವಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

DAKSHINA KANNADA HOME LATEST NEWS STATE UDUPI

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿ ಸೇರಿ ಹಲವರ ವರ್ಗಾವಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಉಡುಪಿ ಡಿಸಿ ವಿದ್ಯಾಕುಮಾರಿ ಅವರನ್ನು ಸೇರಿ ಹಲವು  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ […]

DAKSHINA KANNADA HOME LATEST NEWS

ಪುತ್ತೂರು ಶಾಸಕ ಹಾರೆ ಹಿಡಿದ ಎಫೆಕ್ಟ್‌: ಮಾಣಿ- ಸಂಪಾಜೆ ಹೆದ್ದಾರಿ ಚರಂಡಿ ದುರಸ್ಥಿ ಆರಂಭ

ಪುತ್ತೂರು: ಭಾನುವಾರದಂದು ಪುತ್ತೂರು ಶಾಅಕ ಅಶೋಕ್ ರೈ ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಲೆಯ ಬಳಿ ಚರಂಡಿ ಇಲ್ಲದೆ ರಸ್ತೆ ಮೇಲೆ ಮಳೆ ನೀರು ಹರಿಯುತ್ತಿರುವುದನ್ನು ಗಮನಿಸಿ ಸ್ವಯಂ ಆಗಿ ಹಾರೆ ಹಿಡಿದು ಚರಂಡಿ ಬಿಡಿಸುವ ಕೆಲಸವನ್ನು ಮಾಡಿದ್ದು ಇದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ರಸ್ತೆ ಬದಿ ಯಲ್ಲಿ ಚರಂಡಿಯಲ್ಲಿ ಹೂಳು ತುಂಬಿದ್ದು ಅದನ್ನು ತೆರವು ಮಾಡದ ವಿಚಾರ ಇಂಜಿನಿಯರ್ ಗಳ ಗಮನಕ್ಕೂ ಬರುವಂತಾಗಿತ್ತು. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು. […]

DAKSHINA KANNADA HOME

17 ಬಡ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ ಯವರಿಂದ ಪುಸ್ತಕ ವಿತರಣೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕ ಸಂಕಷ್ಟದಲ್ಲಿರುವ ಒಟ್ಟು 17 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ಶಾಸಕ ಅಶೋಕ್ ರೈ ಅವರು ನೀಡಿದ್ದಾರೆ. ತೀರಾ ಬಡತನದಲ್ಲಿರುವ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಶಾಸಕರು ತನ್ನ ಸ್ವಂತ‌ನಿಧಿಯಿಂದ ಪುಸ್ತಕವನ್ನು ನೀಡಿದ್ದಾರೆ. ಈ‌ಸಂಧರ್ಭದಲ್ಲಿ‌ಮಾತನಾಡಿದ ಶಾಸಕರು ತನ್ನ ಕ್ಷೇತ್ರದಲ್ಲಿ ಅನೇಕ ಸಂಕಷ್ಟದಲದಲಿರುವ ಕುಟುಂಬಗಳು, ಅನಾರೋಗ್ಯದಿಂದ ಮನೆ ಯಜಮಾನ ಕೆಲಸಕ್ಕೂ ಹೋಗಲಾರದೆ ಕಷ್ಟದಲ್ಲಿರುವ ಕುಟುಂಬದ ಮಕ್ಕಳಿಗೆ ಬರೆಯುವ ಪುಸ್ತಕವನ್ನು ನೀಡಲಾಗಿದೆ. ಬಡವರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣಕ್ಕೆ […]

DAKSHINA KANNADA

ದ.ಕ. ಯುವಜನತೆಯ ಪ್ರತಿಭೆ, ವೃತ್ತಿಜೀವನ, ಉದ್ಯಮಶೀಲತೆ ಉತ್ತೇಜನಕ್ಕಾಗಿ ‘ಯುವ್ವಿಕಾಸ’ ಸಂಕಲ್ಪ: ಸಂಸದ ಕ್ಯಾ. ಚೌಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ ‘ಯುವ್ವಿಕಾಸ್’ ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಸುಳ್ಯದ ತಾಲೂಕು ಪಂಚಾಯತ್‌ನಲ್ಲಿ ಇಂದು ಸಂಸದರ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್‌ನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ’ಯುವ್ವಿಕಾಸ್ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ. ಜಿಲ್ಲೆಯ ಯುವ ಶಕ್ತಿಗಳನ್ನು ಜಾಗೃತಗೊಳಿಸುವ ಜೊತೆಗೆ ಅವರಿಗೆ ಉಜ್ವಲ ಭವಿಷ್ಯ ರೂಪಿಸುವ ಆಶಯದಡಿ […]

DAKSHINA KANNADA

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ […]

DAKSHINA KANNADA HOME LATEST NEWS

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣು..!

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ […]

DAKSHINA KANNADA HOME LATEST NEWS

Updated: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಪಿಯು ಕಾಲೇಜಿಗೆ ಇಂದು ರಜೆ

ಮಂಗಳೂರು: ಭಾರೀ ಮಳೆಯ ಹಿನ್ನೆಲೆ ಜೂ.16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ನಿನ್ನೆ ರಾತ್ರಿ ವೇಳೆಗೆ ನೀಡಿದ ಆದೇಶವನ್ನು ಮಾರ್ಪಡಿಸಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸುಳ್ಯ-ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಹೊರತುಪಡಿಸಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಇಂದು ಬೆಳಿಗ್ಗೆ ಈ ಆದೇಶವನ್ನು ಮಾರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678