Tag: canaratv

HOME LATEST NEWS

ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ: ಮಾಜಿ ಸಚಿವ ಬಿ. ರಮಾನಾಥ ರೈ ಭಾಗಿ

ಮಂಗಳೂರು: ಏಪ್ರಿಲ್ 14: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಮಂಗಳೂರಿನ ಮಲ್ಲಿಕಟ್ಟೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ ಅವರು, “ಕೇಂದ್ರ ಸರ್ಕಾರವು ಗ್ಯಾಸ್ ಬೆಲೆಯನ್ನು ಮನಬಂದಂತೆ ಏರಿಸುವ ಮೂಲಕ ಕೋಟ್ಯಂತರ ಭಾರತೀಯರನ್ನು ಸಂಕಷ್ಟಕ್ಕೆ ತಳ್ಳಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ […]

LATEST NEWS

ಕದ್ರಿ ದಕ್ಷಿಣ ವಾರ್ಡ್‌ನಲ್ಲಿ 1 ಕೋಟಿ ರೂ. ವೆಚ್ಚದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನ ಮೈದಾನದಿಂದ ಕದ್ರಿ ಕಂಬಳ ಜಂಕ್ಷನ್ ವರೆಗಿನ ರಸ್ತೆಯನ್ನು ಸುಮಾರು 1 ಕೋಟಿ ರೂ. ಅನುದಾನದಲ್ಲಿ ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, “ಈ ಭಾಗದ ರಸ್ತೆ ಅಭಿವೃದ್ಧಿಯು ಬಹಳ ಕಾಲದ ಬೇಡಿಕೆಯಾಗಿತ್ತು. ಪ್ರತಿ ಮಳೆಗಾಲದಲ್ಲಿ ರಸ್ತೆ ಹಾಳಾಗಿ ಸ್ಥಳೀಯರು ಮತ್ತು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಪಾಲಿಕೆಯ ಬಿಜೆಪಿ ಆಡಳಿತದ ಅವಧಿಯಲ್ಲಿ […]

COMMUNITY NEWS LATEST NEWS

ಫಾ. ಮೆಲ್ವಿನ್ ಪಿಂಟೋ ಅವರ ನಿಧನಕ್ಕೆ ಮಾಜಿ ಸಚಿವ ಬಿ. ರಾಮನಾಥ ರೈ ತೀವ್ರ ಸಂತಾಪ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾ. ಮೆಲ್ವಿನ್ ಪಿಂಟೋ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ ಎಂದು ಮಾಜಿ ಸಚಿವ ಬಿ.ರಾಮನಾಥ ರೈ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾ ರೆ .ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಶಿಕ್ಷಣ ಕ್ಷೇತ್ರಕ್ಕೆ ಫಾ. ಮೆಲ್ವಿನ್ ಪಿಂಟೋ ಅವರು ನೀಡಿದ ಸೇವೆ ಅಪಾರ ಹಾಗೂ ಅಮೂಲ್ಯವಾದುದು. ಅವರ ಸರಳತೆ, ಸಜ್ಜನಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ ಅಪಾರ ಕಾಳಜಿ ಎಂದಿಗೂ ಮರೆಯಲಾಗದು. ಸಾವಿರಾರು […]

HOME LATEST NEWS

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್ ಮೆಲ್ವಿನ್ ಜೆ. ಪಿಂಟೋ ನಿಧನ

ಮಂಗಳೂರು: ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್, ಸೈಂಟ್ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿಯ ಉಪಾಧ್ಯಕ್ಷರಾಗಿದ್ದ ಮೆಲ್ವಿನ್ ಜೆ. ಪಿಂಟೋ ಅವರು ನಿಧನರಾಗಿದ್ದಾರೆ. ೧೯೬೩ರಲ್ಲಿ ಜನಿಸಿದ ಫಾದರ್ ಮೆಲ್ವಿನ್ ಪಿಂಟೋ ಅವರು ಸೇಂಟ್ ಅಲೋಶಿಯಸ್‌ನಲ್ಲಿ ತಮ್ಮ ಶಾಲಾ ಮತ್ತು ಕಾಲೇಜು ಶಿಕ್ಷಣವನ್ನು ಪೂರ್ಣಗೊಳಿಸಿದರು. 1981 ರಲ್ಲಿ ಜೆಸ್ಯೂಟ್ ಸಭೆಯನ್ನು ಸೇರಿದ ಇವರು, 1997 ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದಿದ್ದರು. ಇಂಗ್ಲಿಷ್‌ನಲ್ಲಿ ಎಂ.ಎ, ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸೈಕಾಲಜಿ ಮತ್ತು ಕೌನ್ಸೆಲಿಂಗ್‌ನಲ್ಲಿ […]

HOME LATEST NEWS

90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಏ. 10: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ ಸದಭಿರುಚಿಯ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾ ತುಳು ಪ್ರೇಕ್ಷಕರ ಮನೆ ಮನ […]

DAKSHINA KANNADA HOME LATEST NEWS

ಕೇರಳ ಸೇರಿ ಮೂರು ರಾಜ್ಯಗಳಲ್ಲಿ ಇಂದು ಮತದಾನ

ಮಂಗಳೂರು: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್‌ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ ಪ್ರಬಲ ಪೈಪೋಟಿ ನೀಡುತ್ತಿದೆ. ಅಸ್ಸಾಂ: ಅಸ್ಸಾಂನಲ್ಲಿ […]

DAKSHINA KANNADA HOME LATEST NEWS

ಸುಳ್ಯದಲ್ಲಿ ರಸ್ತೆಯ ಬದಿ ಕಸ: ಅಂಗಡಿ ಮಾಲೀಕನ ವಿರುದ್ಧ FIR ದಾಖಲು

ಮಂಗಳೂರು:- ಸುಳ್ಯ ತಾಲೂಕು ಐವರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಬೆಳ್ಳಾರೆ-ಸುಳ್ಯ ರಸ್ತೆಯ ಬೆಂಗಮಲೆ ಎಂಬಲ್ಲಿ ರಸ್ತೆಯ ಬದಿ ತ್ಯಾಜ್ಯ ಎಸೆದಿರುವ ಅಂಗಡಿ ಮಾಲಿಕರ ಮೇಲೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸಾಂದರ್ಭಿಕ ಚಿತ್ರ ಬೇಂಗಮಲೆಯ 3 ಕಡೆಗಳಲ್ಲಿ ತ್ಯಾಜ್ಯದ ಚೀಲಗಳನ್ನು ಎಸೆದಿರುವುದು ಕಂಡು ಬಂದಿದ್ದು, ತೆರೆದು ಪರಿಶೀಲಿಸಿದಾಗ ಎಲ್ಲಾ ಮೂರೂ ತ್ಯಾಜ್ಯದ ಚೀಲಗಳಲ್ಲಿ ಸುಳ್ಯ ಗಾಂಧಿನಗರದ ಅಯೋಧ್ಯಾ ಮೆನ್ಸ್ ಡ್ರೆಸ್ & ಸ್ಪೋಟ್ರ್ಸ್ ಜೆರ್ಸಿ ಶಾಪ್ ಎಂಬ ವಸ್ತ್ರ ಮಳಿಗೆಗೆ ಸೇರಿದ ತ್ಯಾಜ್ಯಗಳಿರುವುದು ಕಂಡುಬಂದಿರುತ್ತದೆ. ಚೀಲಗಳಲ್ಲಿ ವಸ್ತ್ರ […]

DAKSHINA KANNADA HOME LATEST NEWS

ಆರಿಫ್ ಹತ್ಯೆ ಪ್ರಕರಣ: ಏಳು ಪ್ರಮುಖ ಆರೋಪಿಗಳ ಬಂಧನ- ವಿದೇಶದಿಂದ ಫಂಡಿಂಗ್‌

ಮಂಗಳೂರು: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ನಡೆದ ರೌಡಿಶೀಟರ್‌ ಆರಿಫ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಪ್ರಗತಿ ಕಂಡುಬಂದಿದ್ದು, ಪೊಲೀಸರು ಏಳು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಮತ್ತು ವಿಚಾರಣೆ ವೇಳೆ ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರಿಫ್  ಪ್ರಾಥಮಿಕ ತನಿಖೆಯಲ್ಲಿ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕೀರ್, ಇರ್ಫಾನ್ ಮತ್ತು ರಿಜ್ವಾನ್ ಸಹಿತ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಈ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದು […]

LATEST NEWS

ಗೋ ಗ್ಯಾಸ್ ನಿಂದ ಆಟೋಗಳಿಗೆ 100 ರೂ ದರ ನಿಗಧಿ ಶಾಸಕ ಅಶೋಕ್ ರೈ ಮಾತುಕತೆ ಎಫೆಕ್ಟ್

ಪುತ್ತೂರು: ಪುತ್ತೂರಿನಲ್ಲಿರುವ ಗೋ ಗ್ಯಾಸ್ ಸಂಸ್ಥೆಯವರು ಆಟೋ ಗ್ಯಾಸ್ ಅಧಿಕ ಧರದಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಪುತ್ತೂರಿನಲ್ಲಿ ಆಟೋ ಚಾಲಕರು ಪ್ರತಿಭಟನೆ ನಡೆಸಿ ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದರು. ಮಧ್ಯಾಹ್ನ ಎ ಸಿ ಕಚೇರಿಯಲ್ಲಿ ಗ್ಯಾಸ್ ವಿತರಕರ ಸಭೆ ನಡೆಸಿದ ಶಾಸಕರು ಹೆಚ್ಚು ದರ ವಸೂಲಿ ಮಾಡದಂತೆ ಸೂಚನೆ ನೀಡಿದ್ದು ಇದರ ಫಲವಾಗಿ ಇಂದು ಗೋ ಗ್ಯಾಸ್ ಸಂಸ್ಥೆಯವರು 120 ರ ಬದಲಾಗಿ 100 ರೂಗೆ […]

HOME INETRNATIONAL LATEST NEWS NATIONAL

Breaking: ಇರಾನ್ ನಲ್ಲಿರುವ ಭಾರತೀಯರಿಗೆ ತುರ್ತು ಸೂಚನೆ

ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಏಪ್ರಿಲ್ 7, 2026 ರಂದು ತುರ್ತು ಸೂಚನೆಯನ್ನು ಹೊರಡಿಸಿದೆ. ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಮುಂದಿನ 48 ಗಂಟೆಗಳ ಕಾಲ ತಾವಿರುವ ಸ್ಥಳದಲ್ಲೇ ಇರುವಂತೆ ಸೂಚಿಸಲಾಗಿದೆ. ಪ್ರಮುಖ ಮಾರ್ಗಸೂಚಿಗಳು ಇದ್ದಲ್ಲೇ ಇರಿ: ಮುಂದಿನ 48 ಗಂಟೆಗಳ ಕಾಲ ಮನೆಯಿಂದ ಹೊರಬರಬೇಡಿ. ಅಪಾಯಕಾರಿ ಸ್ಥಳಗಳಿಂದ ದೂರವಿರಿ: ವಿದ್ಯುತ್ ಸ್ಥಾವರಗಳು, ಮಿಲಿಟರಿ ನೆಲೆಗಳು ಮತ್ತು ಬಹುಮಹಡಿ ಕಟ್ಟಡಗಳ ಮೇಲಿನ ಮಹಡಿಗಳಿಗೆ ಹೋಗಬೇಡಿ. ಹೋಟೆಲ್‌ನಲ್ಲಿರುವವರು: ರಾಯಭಾರ ಕಚೇರಿ ಗೊತ್ತುಪಡಿಸಿದ ಹೋಟೆಲ್‌ಗಳಲ್ಲಿ ಇರುವವರು ಒಳಾಂಗಣದಲ್ಲೇ ಇರಬೇಕು ಮತ್ತು ಅಲ್ಲಿನ […]