Tag: canaratv

HOME LATEST NEWS STATE

ನಾಳೆಯಿಂದ ರಾಜ್ಯದಲ್ಲಿ ಡೀಸೆಲ್‌ ದರ ಹೆಚ್ಚಳ: ಮಧ್ಯರಾತ್ರಿಯಿಂದಲೇ ಜಾರಿ!

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಹಾಲು ಮತ್ತು ಕರೆಂಟ್ ದರ ಹೆಚ್ಚಳವಾಗಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರಿಂದ 3 ರೂಪಾಯಿಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44ರಷ್ಟು ಇದ್ದ ತೆರಿಗೆ, ಇದೀಗ ಶೇಕಡ 21.17ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಡಿಸೇಲ್​ 88.99 ರೂಪಾಯಿಗೆ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್​ ಮತ್ತು ಡೀಸೆಲ್​ […]

Breaking News DAKSHINA KANNADA HOME LATEST NEWS

ಉಪ್ಪಿನಂಗಡಿ: ಗುಡ್ಡೆಯಲ್ಲಿ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧ ಪತ್ತೆ..!

ಉಪ್ಪಿನಂಗಡಿ: ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಗುಡ್ಡೆಯಲ್ಲಿ ಪತ್ತೆಯಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ. ಉಪ್ಪಿನಂಗಡಿಯ ಇಳಂತಿಲ ಸಮೀಪ ಹಿಂದೂ ಮಹಿಳೆಯೊಂದಿಗೆ ಓರ್ವ ವೃದ್ಧ ಇರುವುದನ್ನು ಗಮನಿಸಿದ ಸ್ಥಳೀಯರು ವಿಚಾರಿಸಿದ್ದಾರೆ. ವೃದ್ಧ ಅಲ್ಲೇ ಸಮೀಪದ ಕರ್ವೇಲ್‌ ನಿವಾಸಿಯಾಗಿದ್ದು, ವೃದ್ದ ಮತ್ತು ಮಹಿಳೆ ಜೊತೆಯಾಗಿದ್ದುದ್ದನ್ನು ಕಂಡು ಇಬ್ಬರನ್ನೂ ಸ್ಥಳೀಯರು ಬೆನ್ನಟ್ಟಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.  

HOME LATEST NEWS STATE

ನಾಳೆಯಿಂದ ದುಬಾರಿ ದುನಿಯಾ: ಹಾಲು, ವಿದ್ಯುತ್‌, ಟೋಲ್‌ ಸೇರಿ ಹಲವು ಬೆಲೆ ಹೆಚ್ಚಳ

ಬೆಂಗಳೂರು: ನಾಳೆ ಬೆಳಗಾದರೆ ಹಾಲು, ವಿದ್ಯುತ್, ಟೋಲ್‌ ಸೇರಿದಂತೆ ಹಲವು ದರಗಳು ಏರಿಕೆಯಾಗಿ ಜನಸಾಮಾನ್ಯರ ಜೋಬಿಗೆ ಕತ್ತರಿ ಹಾಕಲಿವೆ. ಹಾಗಾದರೆ ಏನೆಲ್ಲಾ ಬದಲಾಗಲಿದೆ ನಾಳೆಯಿಂದ. ನಾಳೆಯಿಂದ ದೇಶಾದ್ಯಂತ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಬದಲಾವಣೆಗಳು ಆಗಲಿವೆ. ಅದರ ಒಂದಷ್ಟು ಮಾಹಿತಿ ಇಲ್ಲಿದೆ. ಏನೆಲ್ಲಾ ಬದಲಾವಣೆಯಾಗಲಿದೆ ಹಾಲಿನ ದರ ಪ್ರತೀ ಲೀ.ಗೆ 4 ರೂಪಾಯಿ ಹೆಚ್ಚಳ ವಿದ್ಯುತ್ ದರ ಹೆಚ್ಚಳ ಟೋಲ್ ದರ ಹೆಚ್ಚಳ ಎಟಿಎಂ ವಿತ್‌ಡ್ರಾಗೆ ಹೆಚ್ಚಿನ ಶುಲ್ಕ ಎಲ್‌ಪಿಜಿ ಸಿಲಿಂಡರ್‌ ಬೆಲೆ ಹೆಚ್ಚಳ. […]

DAKSHINA KANNADA HOME LATEST NEWS

ವಿಟ್ಲ: ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಮನೆಗೆ ಸಂಘಟನೆಗಳ ಭೇಟಿ

ಮಂಗಳೂರು: ಇತ್ತೀಚೆಗೆ ವಿಟ್ಲದ ಮುರುವ ಪ್ರದೇಶದಲ್ಲಿ ಭೂಮಾಲಕ ಮಹೇಶ್ ಭಟ್ ಎಂಬವನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ದಲಿತ ವರ್ಗದ ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಗೆ ಡಿಎಚ್ಎಸ್, ಡಿವೈಎಫ್ಐ ಸಂಘಟನೆಯ ನಾಯಕರುಗಳ ನಿಯೋಗ  ಭೇಟಿ ನೀಡಿ ಘಟನೆಗೆ ಸಂಬಂಧಿಸಿ ಹಲವು ಅಂಶಗಳ ಬಗ್ಗೆ ಚರ್ಚಿಸಿದೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ಧೈರ್ಯವನ್ನು ತುಂಬಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಐದಾರು ದಿನ ಕಳೆದರೂ ಆರೋಪಿ ಮಹೇಶ್ ಭಟ್ ನನ್ನು ಈವರೆಗೂ ಬಂಧಿಸಲು ಸಾಧ್ಯವಾಗದಿರುವ ಪೊಲೀಸ್ ಇಲಾಖೆಯ ಕ್ರಮ ಖಂಡನೀಯ. ಸದ್ಯ […]

DAKSHINA KANNADA HOME LATEST NEWS

ವಿಟ್ಲ: ಮಟ್ಕಾ ದಂಧೆಗೆ ಪೊಲೀಸರ ದಾಳಿ- ಓರ್ವ ವಶಕ್ಕೆ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ಪೊಲೀಸರು ದಾಳಿ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿಯನ್ನು ಕೇಪು ಗ್ರಾಮದ ಅಶೋಕ (45) ಎಂದು ಗುರುತಿಸಲಾಗಿದೆ. ಘಟನೆ ವಿವರ ಕೇಪು ಗ್ರಾಮದ ಅಡ್ಯನಡ್ಕ ಪೆಟ್ರೊಲ್ ಪಂಪ್ ಬಳಿ ಅಶೋಕ ಎಂಬಾತನು  ಮಟ್ಕಾ ಆಟವನ್ನು ಆಡಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್‌ ಉಪನಿರೀಕ್ಷಕ ಕೌಶಿಕ್‌ ಬಿ.ಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ […]

DAKSHINA KANNADA HOME LATEST NEWS

70 ರೂ.ಗೆ ಏರಿದ ಎಳನೀರು ದರ: ಮತ್ತಷ್ಟು ಏರಿಕೆಯಾಗುವ ಸಂಭವ

ಮಂಗಳೂರು: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಏರುತ್ತಿದ್ದು, ಇದರ ಜೊತೆಗೆ ಸೀಯಾಳ ದರವೂ 50 ರು.ನಿಂದ 70 ರು.ಗೆ ಏರಿಕೆಯಾಗಿದೆ. ಮತ್ತಷ್ಟು ಏರಿಕೆಯಾಗುವ ಸಂಭವವಿದೆ. ನಗರದ ಪ್ರದೇಶಗಳಲ್ಲಿ ಶರೀರ ತಂಪಾಗಿಸಿಕೊಳ್ಳಲು ಎಳನೀರು ಸೇವಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ತಿಂಗಳ ಹಿಂದಷ್ಟೇ 50 ರು. ಆಗಿದ್ದ ಎಳನೀರಿನ ಬೆಲೆ, ಕಳೆದ ತಿಂಗಳು 60 ರು. ಮತ್ತು ಈ ತಿಂಗಳು 70 ರು.ಗೆ ಏರಿಕೆಯಾಗಿದೆ. ಜೊತೆಗೆ ಕರಾವಳಿಯಲ್ಲಿ ಈ […]

DAKSHINA KANNADA HOME LATEST NEWS

ಮಾ. 28 ರಿಂದ ಮಾ. 29 ರವರೆಗೆ ಮದ್ಯದಂಗಡಿ ಬಂದ್‌ಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾ. 28 ರಿಂದ ಮಾ. 29 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಸಾವಿರಾರು ಜನ ಭಕ್ತಾಧಿಗಳು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ […]

HOME LATEST NEWS UDUPI

ಉಡುಪಿ: ಮುಸ್ಲಿಂ ಯುವಕನಿಂದ ಕ್ರೈಸ್ತ ಯುವತಿಯ ಕಿಡ್ನಾಪ್‌

ಉಡುಪಿ: ಮುಸ್ಲಿಂ ಯುವಕನೋರ್ವ ಕ್ರೈಸ್ತ ಧರ್ಮದ ಯುವತಿಯನ್ನು ಅಪಹರಿಸಿದ್ದಾನೆ ಎಂದು ಯುವತಿಯ ತಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿತ ಮುಸ್ಲಿಂ ಯುವಕ ಉಡುಪಿಯ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬಾತ ಮಾ. 20 ರಂದು ಕಾಲೇಜಿನಿಂದ ವಾಪಾಸು ಮನೆಗೆ ತೆರಳುತ್ತಿದ್ದಾಗ ಕ್ರೈಸ್ತ ಧರ್ಮಕ್ಕೆ ಸೇರಿದ ಯುವತಿಯ ಅಪಹರಣವಾಗಿದೆ ಎಂದು ತಂದೆ ಗಾಡ್ವಿನ್ ದೇವದಾಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದಾದ […]

DAKSHINA KANNADA HOME LATEST NEWS

ಮಂಗಳೂರು ಸಂಸದ ಹಾಗೂ ಶಾಸಕ ಪೂಂಜಾರಿಂದ ಸಚಿವ ನಿತಿನ್ ಗಡ್ಕರಿ ಭೇಟಿ

ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಜತೆಗೆ ಇಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿರುವ ಪ್ರಮುಖ […]

HOME LATEST NEWS STATE

BJPಯಿಂದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಉಚ್ಛಾಟನೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಕೊನೆಗೂ ಪಕ್ಷದಿಂದ ಉಚ್ಛಾಟಿಸಿದೆ. ಯತ್ನಾಳ್‌ ಅವರು ಉಚ್ಛಾಟನೆಯಾಗುತ್ತಿರುವುದು ಇದು ಎರಡನೇ ಬಾರಿ. ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಪಕ್ಷದ ಕೇಂದ್ರ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678