Tag: canaratv

DAKSHINA KANNADA HOME LATEST NEWS

ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ರಸ್ತೆ ಅಭಿವೃದ್ಧಿ: ಪರ್ಯಾಯ ಸಂಚಾರ ಸಲಹೆ

ಮಂಗಳೂರು: ನಗರದ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ದಿನಾಂಕ 15-02-2026 ರಿಂದ 15-06-2026 ರವರೆಗೆ 4 ತಿಂಗಳುಗಳ ಕಾಲ ನಡೆಯಲಿದೆ. ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು ನಡೆಯುವ ಅವಧಿಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಪಂಪುವೆಲ್ ವೃತ್ತದಿಂದ ಕಂಕನಾಡಿ ಹಳೇ ರಸ್ತೆ – ಕಂಕನಾಡಿ ಜಂಕ್ಷನ್‌ಗೆ (ಮಂಗಳೂರು ನಗರಕ್ಕೆ ಒಳಬರುವ ರಸ್ತೆ) ಮತ್ತು ಕರಾವಳಿ ಜಂಕ್ಷನ್‌ನಿಂದ – ಪಂಪುವೆಲ್ ವೃತ್ತ ದವರೆಗಿನ (ಮಂಗಳೂರು ನಗರದಿಂದ ಹೊರ ಹೋಗುವ ರಸ್ತೆ) ಬೈಪಾಸ್ […]

DAKSHINA KANNADA HOME LATEST NEWS

ಗಲ್ಫ್‌ ನಿವೃತ್ತರ ಕಲ್ಯಾಣಕ್ಕಾಗಿ ಸಮಗ್ರ ಯೋಜನೆ ರೂಪಿಸಿ: ಗಲ್ಫ್ ರಿಟಾಯರೀಸ್ ಅಸೋಸಿಯೇಶನ್‌ ಮನವಿ

ಮಂಗಳೂರು: ಗಲ್ಫ್ ದೇಶಗಳಲ್ಲಿ ದೀರ್ಘಕಾಲ ಉದ್ಯೋಗ ನಿರ್ವಹಿಸಿ ನಂತರ ಉದ್ಯೋಗ ನಷ್ಟ, ವಯೋಮಿತಿ ಹಾಗೂ ಆರೋಗ್ಯ ಸಮಸ್ಯೆಗಳ ಕಾರಣದಿಂದ ಸ್ವದೇಶಕ್ಕೆ ಮರಳಿರುವ ನಿವೃತ್ತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಸಮಗ್ರ ಯೋಜನೆ ರೂಪಿಸಬೇಕೆಂದು ಗಲ್ಫ್ ರಿಟಾಯರೀಸ್ ಅಸೋಸಿಯೇಶನ್‌ (GRA) ಮನವಿ ಮಾಡಿದೆ. ಈ ಸಂಬಂಧ ಫೆ.12ರಂದು ಸಂಘದ ಪದಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಗಲ್ಫ್ ದೇಶಗಳಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಈ ಕಾರ್ಮಿಕರು ಗಳಿಸಿದ ವಿದೇಶಿ ವಿನಿಮಯವು ದೇಶದ ಆರ್ಥಿಕ […]

DAKSHINA KANNADA HOME LATEST NEWS

ಅಪ್ರಾಪ್ತೆಯ ಅತ್ಯಾಚಾರ ಕೇಸ್‌: ಪ್ರಾಸಿಕ್ಯೂಷನ್‌ ವಿಫಲ- ಆರೋಪಿ ಖುಲಾಸೆ

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ  ಕೆ.ಎಸ್. ಮಾನು ಅವರು ಈ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದ ವಿವರ: 2025ರ ಜುಲೈ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತ ಬಾಲಕಿಯನ್ನು […]

LATEST NEWS

ಬ್ಯಾಂಕ್ ಆಫ್ ಬರೋಡಾ ಕಾರ್ ಲೋನ್ ಬಡ್ಡಿದರವನ್ನು 30 ಬೇಸಿಸ್ ಪಾಯಿಂಟ್‌ಗಳಿಂದ ಕಡಿಮೆ ಮಾಡಿ 7.60% ವಾರ್ಷಿಕಕ್ಕೆ ಇಳಿಕೆ

ಮಂಗಳೂರು: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಕಾರ್ ಲೋನ್ ಬಡ್ಡಿದರವನ್ನು ತಕ್ಷಣದಿಂದಲೇ 30 ಬೇಸಿಸ್ ಪಾಯಿಂಟ್‌ಗಳಿಂದ ಕಡಿಮೆ ಮಾಡಿರುವುದಾಗಿ ಪ್ರಕಟಿಸಿದೆ. ಬ್ಯಾಂಕ್‌ನ ಫ್ಲೋಟಿಂಗ್ ಬಡ್ಡಿದರ ಈಗ 7.60%* ವಾರ್ಷಿಕದಿಂದ ಆರಂಭವಾಗುತ್ತದೆ (ಹಿಂದೆ 7.90% ವಾರ್ಷಿಕ). ಬ್ಯಾಂಕ್ ಆಫ್ ಬರೋಡಾ ಕಾರ್ ಲೋನ್‌ಗಳಿಗೆ 8.50%* ವಾರ್ಷಿಕದಿಂದ ಆರಂಭವಾಗುವ ಆಕರ್ಷಕ ಸ್ಥಿರ ಬಡ್ಡಿದರವನ್ನೂ ಬ್ಯಾಂಕ್ ನೀಡುತ್ತದೆ. 7.60% ವಾರ್ಷಿಕದಿಂದ ಆರಂಭವಾಗುವ ಹೊಸ ದರವು ಹೊಸ ಕಾರ್ ಖರೀದಿಗೆ ಅನ್ವಯವಾಗಿದ್ದು, ಸಾಲಗಾರರ ಕ್ರೆಡಿಟ್ ಪ್ರೊಫೈಲ್‌ಗೆ ಅನುಗುಣವಾಗಿರುತ್ತದೆ. ಕಡಿತಗೊಂಡ […]

LATEST NEWS

ಸೇಂಟ್ ಅಲೋಶಿಯಸ್ ಎಐಎಂಐಟಿ ಕ್ಯಾಂಪಸ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026

ಮಂಗಳೂರು: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್‌ನ ಆರ್ಥರ್ ಶೆನಾಯ್ ಸ್ಮಾರಕ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಬೆಳಿಗ್ಗೆ 9:00 ರಿಂದ ಸಂಜೆ 4:15 ರವರೆಗೆ ನಡೆದ ಈ ದಿನಪೂರ್ತಿ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮ ಮುಖಂಡರು, ಅಧ್ಯಾಪಕರು ಹಾಗೂ ಉದ್ಯಮಿಯಾಗಬಯಸುವ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಿ ವಿಚಾರ ವಿನಿಮಯ ನಡೆಸಿದರು. […]

DAKSHINA KANNADA HOME LATEST NEWS

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಇಬ್ಬರಿಗೆ ಗಾಯ

ವಿಟ್ಲ: ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಇರಿತಗೊಂಡ ಘಟನೆ ವಿಟ್ಲದ ಐಟಿಐ ತರಗತಿ ಒಳಗಡೆ ಸಂಭವಿಸಿದೆ. ಚೂರಿ ಇರಿತದಿಂದ ಇಬ್ಬರು ಅಪ್ರಾಪ್ತರು ಗಾಯೊಂಡಿದ್ದಾರೆ, ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಥಮ ವರ್ಷದ ಎಲೆಕ್ಟಿಷಿಯನ್ ಐಟಿಐ ಕಲಿಯುತ್ತಿರುವ ಅಪ್ರಾಪ್ತ ಮತ್ತು ವಿಟ್ಲ ನಿವಾಸಿ ಹೇಮಂತ್ ಎಂಬವರ ನಡುವೆ ಜಗಳ ಉಂಟಾಗಿತ್ತು. ಬಳಿಕ ಹೇಮಂತ್ ಚೂರಿ ತಂದಿದ್ದು, ಅದರಿಂದ ಅಪ್ರಾಪ್ತನಿಗೆ ಇರಿದಿದ್ದಾನೆ. ಅದನ್ನು ತಡೆಯಲು ಬಂದ ಮತ್ತೋರ್ವ ವಿದ್ಯಾರ್ಥಿಗೂ ಗಾಯವಾಗಿದೆ. […]

DAKSHINA KANNADA HOME LATEST NEWS

9 ಯುವತಿಯರಿಗೆ ವಂಚನೆ: ಇಬ್ಬರ ಜೊತೆ ಮದುವೆಯಾದ ‘ಮ್ಯಾಟ್ರಿಮೋನಿ’ ಮಾವ-ಅಳಿಯನ ಬಂಧನ

ಮಂಗಳೂರು: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್ ತನ್ನ ಅಳಿಯ ಎಂದು ಹೇಳಿ ಸಂತ್ರಸ್ತೆಯ ಕುಟುಂಬದವರಿಗೆ ನಂಬಿಕೆ ಮೂಡಿಸಲು ಭಾಸ್ಕರ್ ಧಾರ್ಮಿಕ ವಿಧಿವಿಧಾನಗಳಲ್ಲೂ ಭಾಗವಹಿಸಿದ್ದಾನೆ […]

DAKSHINA KANNADA HOME LATEST NEWS STATE

ಬೆಳ್ತಂಗಡಿ: ವಿದ್ಯಾರ್ಥಿನಿ ಕಿಡ್ನ್ಯಾಪ್​​ ಕೇಸ್​​ಗೆ ಬಿಗ್​​ ಟ್ವಿಸ್ಟ್- ಹೆತ್ತವರ ಮೇಲೆಯೇ ಕೇಸ್‌….!

ಬೆಳ್ತಂಗಡಿ: ಫೆ.9 ರಂದು ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಅಪ್ರಾಪ್ತೆಯ ಕಿಡ್ನಾಪ್‌ ಪ್ರಕರಣವೊಂದು ಒಂದೇ ದಿನದಲ್ಲಿ ಟ್ವಿಸ್ಟ್‌ ನೀಡಿದ್ದು, ವಿದ್ಯಾರ್ಥಿನಿಯ ಡ್ರಾಮಾ ಬಯಲಾಗಿದೆ. ಜೊತೆಗೆ ಅಪ್ರಾಪ್ತೆಗೆ ವಾಹನ ಚಲಾಯಿಸಲು ಕೊಟ್ಟಿದ್ದಕ್ಕೆ ಹೆತ್ತವರ ಮೇಲೆಯೇ ಕೇಸ್‌ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಫೆ.9 ರಂದು ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಮೂವರು ಮುಸುಕುಧಾರಿಗಳು ಓಮಿನಿ ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲು ಯತ್ನಿಸಿ ವಿಫಲವಾದಾಗ ಆಕೆಯ ಕೈಗೆ  ಚೂರಿ ಇರಿದು ಪರಾರಿಯಾಗಿದ್ದರು ಎಂದು ವಿದ್ಯಾರ್ಥಿನಿ ಆರೋಪಿಸಿದ್ದಳು. ಘಟನೆಯಲ್ಲಿ ಗಾಯಗೊಂಡಿದ್ದರಿಂದ […]

DAKSHINA KANNADA HOME LATEST NEWS

ಹಿಂದೂ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು: ವಿಚಾರಣೆಗೆ ಹಾಜರಾಗುವಂತೆ ಆದೇಶ

ಪುತ್ತೂರು: ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆಬ್ರವರಿ […]

HOME LATEST NEWS STATE

ವೃದ್ಧ ತಂದೆಯನ್ನು ನೋಡಿಕೊಳ್ಳದ ಮಕ್ಕಳು: ಆಸ್ತಿ ಮತ್ತೆ ತಂದೆಗೆ ವರ್ಗಾಯಿಸಿದ ಹೈಕೋರ್ಟ್‌

ಬೆಂಗಳೂರು: ಆಸ್ತಿ ಭಾಗವಾದ ಮೇಲೆ ವೃದ್ಧ ತಂದೆಯೋರ್ವರನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ಹೆಸರಿಗೆ ವರ್ಗಾವಣೆಯಾದ ಗಿಫ್ಟ್‌ ಡೀಡ್‌ ಅನ್ನು ಮತ್ತೆ ತಂದೆಯ ಹೆಸರಿಗೆ ವರ್ಗಾವಣೆ ಮಾಡಿ ಹೈಕೋರ್ಟ್‌ ಆದೇಶ ನೀಡಿದೆ. ತುಮಕೂರಿನ ಹೆಬ್ಬೂರು ಹೋಬಳಿಯ ದೊಡ್ಡ ಗೊಲ್ಲಹಳ್ಳಿಯ ವೆಂಕಟಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ. 2007ರ ಹಿರಿಯ ನಾಗರಿಕರ ಮತ್ತು ಪೋಷಕರ ನಿರ್ವಹಣಾ ಮತ್ತು ಕಲ್ಯಾಣ ಕಾಯಿದೆ ಅನ್ವಯ ಕೃಷಿ ಭೂಮಿಯನ್ನು ಪುತ್ರಿಯರ ಹೆಸರಿಗೆ […]