Tag: canaratv

DAKSHINA KANNADA HOME LATEST NEWS

ವಿಟ್ಲ: ಮಟ್ಕಾ ದಂಧೆಗೆ ಪೊಲೀಸರ ದಾಳಿ- ಓರ್ವ ವಶಕ್ಕೆ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ಪೊಲೀಸರು ದಾಳಿ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿಯನ್ನು ಕೇಪು ಗ್ರಾಮದ ಅಶೋಕ (45) ಎಂದು ಗುರುತಿಸಲಾಗಿದೆ. ಘಟನೆ ವಿವರ ಕೇಪು ಗ್ರಾಮದ ಅಡ್ಯನಡ್ಕ ಪೆಟ್ರೊಲ್ ಪಂಪ್ ಬಳಿ ಅಶೋಕ ಎಂಬಾತನು  ಮಟ್ಕಾ ಆಟವನ್ನು ಆಡಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸ್‌ ಉಪನಿರೀಕ್ಷಕ ಕೌಶಿಕ್‌ ಬಿ.ಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ […]

DAKSHINA KANNADA HOME LATEST NEWS

70 ರೂ.ಗೆ ಏರಿದ ಎಳನೀರು ದರ: ಮತ್ತಷ್ಟು ಏರಿಕೆಯಾಗುವ ಸಂಭವ

ಮಂಗಳೂರು: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಏರುತ್ತಿದ್ದು, ಇದರ ಜೊತೆಗೆ ಸೀಯಾಳ ದರವೂ 50 ರು.ನಿಂದ 70 ರು.ಗೆ ಏರಿಕೆಯಾಗಿದೆ. ಮತ್ತಷ್ಟು ಏರಿಕೆಯಾಗುವ ಸಂಭವವಿದೆ. ನಗರದ ಪ್ರದೇಶಗಳಲ್ಲಿ ಶರೀರ ತಂಪಾಗಿಸಿಕೊಳ್ಳಲು ಎಳನೀರು ಸೇವಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ತಿಂಗಳ ಹಿಂದಷ್ಟೇ 50 ರು. ಆಗಿದ್ದ ಎಳನೀರಿನ ಬೆಲೆ, ಕಳೆದ ತಿಂಗಳು 60 ರು. ಮತ್ತು ಈ ತಿಂಗಳು 70 ರು.ಗೆ ಏರಿಕೆಯಾಗಿದೆ. ಜೊತೆಗೆ ಕರಾವಳಿಯಲ್ಲಿ ಈ […]

DAKSHINA KANNADA HOME LATEST NEWS

ಮಾ. 28 ರಿಂದ ಮಾ. 29 ರವರೆಗೆ ಮದ್ಯದಂಗಡಿ ಬಂದ್‌ಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾ. 28 ರಿಂದ ಮಾ. 29 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಸಾವಿರಾರು ಜನ ಭಕ್ತಾಧಿಗಳು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ […]

HOME LATEST NEWS UDUPI

ಉಡುಪಿ: ಮುಸ್ಲಿಂ ಯುವಕನಿಂದ ಕ್ರೈಸ್ತ ಯುವತಿಯ ಕಿಡ್ನಾಪ್‌

ಉಡುಪಿ: ಮುಸ್ಲಿಂ ಯುವಕನೋರ್ವ ಕ್ರೈಸ್ತ ಧರ್ಮದ ಯುವತಿಯನ್ನು ಅಪಹರಿಸಿದ್ದಾನೆ ಎಂದು ಯುವತಿಯ ತಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿತ ಮುಸ್ಲಿಂ ಯುವಕ ಉಡುಪಿಯ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬಾತ ಮಾ. 20 ರಂದು ಕಾಲೇಜಿನಿಂದ ವಾಪಾಸು ಮನೆಗೆ ತೆರಳುತ್ತಿದ್ದಾಗ ಕ್ರೈಸ್ತ ಧರ್ಮಕ್ಕೆ ಸೇರಿದ ಯುವತಿಯ ಅಪಹರಣವಾಗಿದೆ ಎಂದು ತಂದೆ ಗಾಡ್ವಿನ್ ದೇವದಾಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದಾದ […]

DAKSHINA KANNADA HOME LATEST NEWS

ಮಂಗಳೂರು ಸಂಸದ ಹಾಗೂ ಶಾಸಕ ಪೂಂಜಾರಿಂದ ಸಚಿವ ನಿತಿನ್ ಗಡ್ಕರಿ ಭೇಟಿ

ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಜತೆಗೆ ಇಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿರುವ ಪ್ರಮುಖ […]

HOME LATEST NEWS STATE

BJPಯಿಂದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಉಚ್ಛಾಟನೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಕೊನೆಗೂ ಪಕ್ಷದಿಂದ ಉಚ್ಛಾಟಿಸಿದೆ. ಯತ್ನಾಳ್‌ ಅವರು ಉಚ್ಛಾಟನೆಯಾಗುತ್ತಿರುವುದು ಇದು ಎರಡನೇ ಬಾರಿ. ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಪಕ್ಷದ ಕೇಂದ್ರ […]

DAKSHINA KANNADA HOME LATEST NEWS

ಮೇ 4 ರಂದು ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 9080 ವಿದ್ಯಾರ್ಥಿಗಳು

ಮಂಗಳೂರು: ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಯಲಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಸಭೆಯಲ್ಲಿ ಮಾತನಾಡಿ, ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಮಾತ್ರ ನೀಟ್ ಪರೀಕ್ಷಾ ಕೇಂದ್ರಗಳಿವೆ. ಮೇ 4 ರಂದು ನೀಟ್ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ತಯಾರಿಸಿ ಪರೀಕ್ಷಾ ಕೇಂದ್ರಗಳ ಕೊಠಡಿಯಲ್ಲಿ ಸಿ.ಸಿ ಕ್ಯಾಮೆರಾದ ವ್ಯವಸ್ಥೆ ಹಾಗೂ ಪೀಠೋಪಕರಣದ ವ್ಯವಸ್ಥೆಯನ್ನು ಕಾಲೇಜಿಗೆ ಭೇಟಿ […]

DAKSHINA KANNADA HOME LATEST NEWS

ಮಂಗಳೂರು: ವಾರ್ತಾ ಇಲಾಖೆಗೆ ಸಿಎಂ ಮಾಧ್ಯಮ ಸಲಹೆಗಾರರ ಭೇಟಿ

ಮಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಅವರು ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಭೇಟಿ ನೀಡಿದರು. ಕಚೇರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಇಲಾಖಾ ಪ್ರಗತಿ ಮಾಹಿತಿ ಪಡೆದರು. ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಪತ್ರಕರ್ತರ ಪ್ರವಾಸಕ್ಕೆ ಹೊಸ ಬಸ್ ಒದಗಿಸುವ ಬಗ್ಗೆ ಶೀಘ್ರದಲ್ಲಿ ಸರಕಾರ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು. ಗ್ರಾಮಾಂತರ ಪತ್ರಕರ್ತರ ಬಸ್ ಪಾಸ್ ಹಾಗೂ ಪತ್ರಕರ್ತರ ಪಿಂಚಣಿ ಯೋಜನೆ ಕುರಿತು ಅವರು ಚರ್ಚಿಸಿದರು. ಈ ಸಂದರ್ಭದಲ್ಲಿ […]

HOME INETRNATIONAL LATEST NEWS

ಪೋಪ್ ಫ್ರಾನ್ಸಿಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್:‌ 2 ತಿಂಗಳು ವಿಶ್ರಾಂತಿ

ವ್ಯಾಟಿಕನ್‌: ತೀವ್ರ ಉಸಿರಾಟದ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕ್ರೈಸ್ತರ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್‌ ಈಗ ಗುಣಮುಖರಾಗಿದ್ದ, 5 ವಾರಗಳ ಬಳಿಕ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾದರು. ಬಿಡುಗಡೆಗೂ ಮುನ್ನ ಕ್ಷಣ ಹೊತ್ತು ಆಸ್ಪತ್ರೆಯ ಬಾಲ್ಕನಿಯಿಂದ ನೆರೆದಿದ್ದ ಜನರಿಗೆ ಧನ್ಯವಾದ ಸಲ್ಲಿಸಿದರು. ರೋಮ್‌ನ ಆಸ್ಪತ್ರೆಯಿಂದ ಗಾಲಿ ಕುರ್ಚಿ ಸಹಾಯದಿಂದ ವಿಶೇಷ ವಾಹನಗಳ ಮೂಲಕ ಪೋಪ್‌ರನ್ನು ವ್ಯಾಟಿಕನ್‌ಗೆ ಕರೆತರಲಾಯಿತು. ಈ ವೇಳೆ ಸಾವಿರಾರು ಭಕ್ತರು ‘ಫ್ರಾನ್ಸಿಸ್‌, ಫ್ರಾನ್ಸಿಸ್‌’ ಎಂದು ಘೋಷಣೆ ಕೂಗಿದರು. ಪೋಪ್‌ ಶ್ವಾಸಕೋಶದ ಸೋಂಕು ಮತ್ತು […]

HOME LATEST NEWS STATE

ಶೀಘ್ರದಲ್ಲಿ ಮತ್ತೆ ಹಾಲಿನ ದರ ಹೆಚ್ಚಳ…!

ಬೆಂಗಳೂರು: ಹಾಲಿನ ದರ 5 ರೂ. ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಹಾಲು ಒಕ್ಕೂಟಗಳ ಜೊತೆಗಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸುದೀರ್ಘ ಸಭೆ ನಡೆಸಿದರು. ಈ ವೇಳೆ ಹಾಲಿನ ದರವನ್ನು ಲೀಟರ್​​ಗೆ 5 ರೂ. ಏರಿಕೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ […]