Tag: canaratv

DAKSHINA KANNADA HOME LATEST NEWS

ದ.ಕ. ಜಿಲ್ಲೆಯಲ್ಲಿ ಜು. 8ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಸುರಕ್ಷತೆಗಾಗಿ ತುರ್ತು ಆದೇಶಗಳನ್ನು ಹೊರಡಿಸಿದೆ. 12ನೇ ತರಗತಿವರೆಗೆ ರಜೆ ಘೋಷಣೆ:ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ […]

DAKSHINA KANNADA HOME LATEST NEWS

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22ಕೋಟಿ ರೂ ವಿಶೇಷ ಅನುದಾನ ಮಂಜೂರು: ಸಂಸದ ಕ್ಯಾ.ಬ್ರಿಜೇಶ್‌ ಚೌಟ

ಮಂಗಳೂರು,: ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು 49.22 ಕೋಟಿ ರೂ.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿ ಸಚಿವಾಲಯದ […]

LATEST NEWS

*ರೈತರಿಂದಲೇ ಮುಂಗಾರು ಬೆಳೆ ಸಮೀಕ್ಷೆ*

ಮಂಗಳೂರು: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ತಾವೇ ಖುದ್ದಾಗಿ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಆಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಇಲಾಖೆಯ ಫ್ರೂಟ್ಸ್ (FRUITS) ತಂತ್ರಾಂಶದ ಎಫ್.ಐ.ಡಿ (FID) ಸಂಖ್ಯೆ ಮತ್ತು ಆಧಾರ್ ಇ-ಕೆವೈಸಿ (OTP) ಬಳಸಿ ಮೊಬೈಲ್‌ನಲ್ಲಿ ಲಾಗಿನ್ ಆಗಬೇಕು. ನಂತರ ತಮ್ಮ […]

HOME LATEST NEWS STATE

ಗಿರೀಶ್ ಭಾರದ್ವಾಜ್ ನಿಧನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ

ಬೆಂಗಳೂರು: ‘ತೂಗುಸೇತುವೆಗಳ ಸರದಾರ’, ‘ಸುಳ್ಯದ ವಿಶ್ವೇಶ್ವರಯ್ಯ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಕಳವಳ ಮತ್ತು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮುಖ್ಯಮಂತ್ರಿಯವರು, “ಡಾ. ಗಿರೀಶ್ ಭಾರದ್ವಾಜ್ ಅವರ ಅಗಲಿಕೆಯಿಂದ ರಾಜ್ಯವು ಅಪರೂಪದ ತಾಂತ್ರಿಕ ಸಾಧಕನೊಬ್ಬನನ್ನು ಕಳೆದುಕೊಂಡಂತಾಗಿದೆ. ದೇಶದಾದ್ಯಂತ 140ಕ್ಕೂ ಹೆಚ್ಚು ತೂಗುಸೇತುವೆ ಗಳನ್ನು ನಿರ್ಮಿಸಿದ್ದ ಅವರು, ಕಡಿದಾದ ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಮೂಲಕ ಜನರ ಬದುಕನ್ನು […]

HOME LATEST NEWS

ನಮ್ಮ ಕುಡ್ಲ ‘ನೃತ್ಯ ಭಜನೆ ಸೀಸನ್ 4’: ಉಜಿರೆ ಶ್ರೀ ಜನಾರ್ದನ ಸ್ವಾಮಿ ಭಜನಾ ಮಂಡಳಿಗೆ ಪ್ರಥಮ ಬಹುಮಾನ

ಮಂಗಳೂರು: ನಮ್ಮ ಕುಡ್ಲ ವಾಹಿನಿಯ ವತಿಯಿಂದ ನೃತ್ಯ ಭಜನಾ ಸ್ಪರ್ಧೆಯ ಸೀಸನ್‌ -4 ಜುಲೈ 5 ರಂದು ಭಾನುವಾರ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಿತು. ದೀಪಕ್ಕೆ ಎಣ್ಣೆ ಎರೆದು, ದೀಪ ಬೆಳಗಿಸುವ ಮೂಲಕ ಮಾಣಿಲ ಶ್ರೀ ಧಾಮದ ಮೋಹನದಾಸ ಪರಮ ಹಂಸ ಸ್ವಾಮೀಜಿ ಮತ್ತು ಒಡಿಯೂರು ಕ್ಷೇತ್ರದ ಸಾಧ್ವಿ ಶ್ರೀ ಮಾತಾನಂದಮಯಿ ಹಾಗೂ ಗಣ್ಯರು ಸ್ಪರ್ಧೆಗೆ ಚಾಲನೆ ನೀಡಿದರು. ಬಳಿಕ ಆಶೀರ್ವಾದ ನೀಡಿದ ಮಾಣಿಲಶ್ರೀಗಳು, ಹರಿನಾಮ ಸಂಕೀರ್ತನೆಯಿಂದ ಜಗತ್ತಿಗೆ ವಿಶ್ವಶಾಂತಿ ಕರುಣಿಸಲಿ. ಚೆನ್ನಾಗಿ ಮಳೆ […]

HOME LATEST NEWS STATE

‘ತೂಗುಸೇತುವೆಗಳ ಸರದಾರ’ ಡಾ.ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕøತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಭಾರದ್ವಾಜ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ತಮ್ಮ ಅಪಾರ ತಾಂತ್ರಿಕ ಜ್ಞಾನ ಮತ್ತು ಜನಪರ ಕಾಳಜಿಯಿಂದ ನೂರಾರು ತೂಗುಸೇತುವೆಗಳನ್ನು ನಿರ್ಮಿಸಿದ್ದರು. ಗ್ರಾಮೀಣ ಪ್ರದೇಶದ ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿದ್ದ ಅವರ ಸಾಧನೆ ಮತ್ತು ಸರಳತೆ ಎಂದಿಗೂ ಮರೆಯಲಾಗದು. ಕನ್ನಡ ನಾಡಿನ ಈ ಸಾಧಕ ದೇಶ […]

LATEST NEWS

*ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ*

ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಮುಕ್ತವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ ಕರೆ ನೀಡಿದ್ದಾರೆ. ಅವರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ, ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿಬಿ-ಜಿ […]

LATEST NEWS

ಮುಡಾ ವತಿಯಿಂದಲೇ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ನಡೆಯಲಿ :- ಕಾಮತ್

ಮಂಗಳೂರು,: ನಗರದ ಅತ್ತಾವರ ಬಾಬುಗುಡ್ಡೆ ಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಮೀಸಲಿಟ್ಟಿದ್ದ 3 ಕೋಟಿ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದರಿಂದ, ಮುಡಾ ವತಿಯಿಂದಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಈ ಬಗ್ಗೆ ಮುಡಾ ಅಧ್ಯಕ್ಷರಿಗೆ, ಆಯುಕ್ತರಿಗೆ ಪತ್ರ ಬರೆದ ಶಾಸಕರು, ದಲಿತೋದ್ದಾರಕ, ಪೂಜನೀಯ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮಾ ಗಾಂಧಿ ನಗರ […]

HOME LATEST NEWS

ನಾಗುರಿ ಮನೆ ಕುಸಿತ ದುರಂತ: ಜೀವ ರಕ್ಷಿಸಿದ ಅಗ್ನಿಶಾಮಕ ಅಧಿಕಾರಿ ಮಹಮ್ಮದ್ ಝುಲ್ಫಿಕರ್ ನವಾಜ್‌ಗೆ ಜಿಲ್ಲಾ ಪ್ರಾಧಿಕಾರದಿಂದ ಕೃತಜ್ಞತಾ ಪತ್ರ ಸಲ್ಲಿಕೆ

ಮಂಗಳೂರು, :ಕಂಕನಾಡಿಯ ನಾಗುರಿಯಲ್ಲಿ ಜುಲೈ 1 ರಂದು ನಡೆದಿದ್ದ ಭೀಕರ ಮನೆ ಕುಸಿತ ದುರಂತದ ಸಂದರ್ಭದಲ್ಲಿ ಸಮಯಪ್ರಜ್ಞೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ, ಅಮೂಲ್ಯ ಜೀವಗಳನ್ನು ರಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀ ಮಹಮ್ಮದ್ ಝುಲ್ಫಿಕರ್ ನವಾಜ್ ಕೆ.ಪಿ. ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಶ್ಲಾಘನೀಯ ಮತ್ತು ಕೃತಜ್ಞತಾ ಪತ್ರವನ್ನು ಸಲ್ಲಿಸಿ ಗೌರವಿಸಲಾಯಿತು. ಭಾನುವಾರ ನಡೆದ ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಗೌರವ ಸಮರ್ಪಣೆ ನಡೆಯಿತು. ದುರಂತದ ಸಮಯದಲ್ಲಿ ಅಧಿಕಾರಿ ಮಹಮ್ಮದ್ […]

COMMUNITY NEWS LATEST NEWS

ಮಿಲಾಗ್ರಿಸ್‌ನ ಅವರ್ ಲೇಡಿ ಆಫ್ ಮಿರಾಕಲ್ಸ್ ಚರ್ಚ್‌ನಲ್ಲಿ ವಾರ್ಷಿಕ ಹಬ್ಬದ ಸಡಗರ

ಮಂಗಳೂರು: ಮಿಲಾಗ್ರಿಸ್‌ನ ಅವರ್ ಲೇಡಿ ಆಫ್ ಮಿರಾಕಲ್ಸ್ ಚರ್ಚ್‌ನ ವಾರ್ಷಿಕ ಹಬ್ಬವನ್ನು ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಸಡಗರದಿಂದ ಆಚರಿಸಲಾಯಿತು. ಮಾತೆ ಮೇರಿ ದೇವರ ಪ್ರೀತಿಯ ಪ್ರೇರಣೆ: ಫಾ. ವಾಲ್ಟರ್ ಡಿ’ಸೋಜಾ ಬೆಳಿಗ್ಗೆ 7.00 ಗಂಟೆಗೆ ಕೊಂಕಣಿ ಭಾಷೆಯ ಮೊದಲ ಪವಿತ್ರ ಬಲಿಪೂಜೆಯನ್ನು ಬೆಂದೂರ್ ಚರ್ಚ್‌ನ ಧರ್ಮಗುರು ಹಾಗೂ ಎಪಿಸ್ಕೋಪಲ್ ಡೀನರಿಯ ವಿಕಾರ್ ಫೊರೇನ್ ರೆವರೆಂಡ್ ಫಾದರ್ ವಾಲ್ಟರ್ ಡಿ’ಸೋಜಾ ಅವರು ನೆರವೇರಿಸಿದರು. ಅವರು ತಮ್ಮ ಧರ್ಮೋಪದೇಶದಲ್ಲಿ, “ಮಾತೆ ಮೇರಿಯು ತನ್ನ ಮಕ್ಕಳನ್ನು ನಿರಂತರವಾಗಿ ರಕ್ಷಿಸುತ್ತಾಳೆ ಮತ್ತು […]