Tag: canaratv

DAKSHINA KANNADA HOME LATEST NEWS

ಮಂಗಳೂರು: ಟ್ರಾಫಿಕ್‌ ಫೈನ್‌ ಮೇಲೆ 50% ರಿಯಾಯಿತಿ- ಸೆ.12ರವರೆಗೆ ಮಾತ್ರ

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದ ವಾಹನಿಗರಿಗೆ ಪ್ರಕರಣಗಳ ಇತ್ಯರ್ಥ ಪಡಿಸಿಕೊಳ್ಳುವುದಕ್ಕಾಗಿ ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಲು ಆ.23ರಿಂದ ಸೆ.12ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ (ಎಎಸ್‌ಐ-ಪಿಐ ಡಿವೈಸ್) ಲಾಲ್‌ಬಾಗ್‌ನಲ್ಲಿರುವ ಮನಪಾ ಕಮಾಂಡ್ ಕಂಟ್ರೋಲ್ ಸೆಂಟರ್‌ಗಳಲ್ಲಿ ಪಾವತಿಸಬಹುದು. ಉಳಿದಂತೆ ಕದ್ರಿಯ ಪೂರ್ವ ಸಂಚಾರ ಠಾಣೆ, ಪಾಂಡೇಶ್ವರದ ಪಶ್ಚಿಮ ಸಂಚಾರ ಠಾಣೆ, ಬೈಕಂಪಾಡಿಯ ಮಂಗಳೂರು ಉತ್ತರ ಠಾಣೆ, ಜಪ್ಪಿನಮೊಗರಿನ ದಕ್ಷಿಣ ಸಂಚಾರ ಠಾಣೆ […]

DAKSHINA KANNADA LATEST NEWS

ಲಕ್ಕಿ ಸ್ಕೀಂ- 13 ಸಾವಿರ ಮಂದಿಗೆ 15 ಕೋ.ರೂ ವಂಚನೆ: ನಾಲ್ವರ ಬಂಧನ

ಮಂಗಳೂರು: ಸುರತ್ಕಲ್‌ ವ್ಯಾಪ್ತಿಯಲ್ಲಿ ಲಕ್ಕಿ ಸ್ಕೀಮ್‌ಗಳ ಮೂಲಕ ಗ್ರಾಹಕರಿಗೆ ನಾನಾ ರೀತಿಯ ಬಹುಮಾನಗಳ ಆಮಿಷ ತೋರಿಸಿ 15ಸಾವಿರ ಮಂದಿಗೆ 15ಕೋಟಿ ರೂ.ಗೂ ಮಿಕ್ಕಿ ಹಣ ಸಂಗ್ರಹ ಮಾಡಿ ಬಳಿಕ ವಂಚನೆಗೈದ ಪ್ರತ್ಯೇಕ ಎರಡು ಪ್ರಕರಣದಲ್ಲಿ ನಾಲ್ವರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈನ್‌ ಎಂಟರ್‌ ಪ್ರೈಸಸ್‌ ಎಂಬ ಲಕ್ಕಿ ಸ್ಕೀಮ್‌ನಲ್ಲಿವಂಚನೆ ಮಾಡಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನದ ಬಳಿಯ ನಿವಾಸಿ ಅಹಮ್ಮದ್‌ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ನಝೀರ್‌ ನಾಸೀರ್‌ (39) ಹಾಗೂ […]

DAKSHINA KANNADA HOME LATEST NEWS

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆ ಮಗುಚಿ ಬಿದ್ದು ಸಾವು

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆಯೇ ಮಗುಚಿ ಬಿದ್ದ ಪರಿಣಾಮ ತಂದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದಲ್ಲಿ ಆ.7 ರಂದು ನಡೆದಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ದಿನೇಶ್ ಎಂಬುವವರು ಕೆಎ- 19-ಎಂ-8745 ನೋಂದಣಿಯ ಜೀಪು ಚಲಾಯಿಸುತ್ತಿದ್ದಾಗ ಹತ್ತದೇ ಅರ್ಧದಲ್ಲಿ ನಿಂತಿದೆ. ಆಗ ಜೀಪಲ್ಲಿ ಇದ್ದ ಅವರ ದಿನೇಶ್  ಅವರ ತಂದೆ ಧರ್ಮಪಾಲ […]

DAKSHINA KANNADA HOME LATEST NEWS

ಮಂಗಳೂರು: 7 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ

ಮಂಗಳೂರು: ತನ್ನ 7 ತಿಂಗಳ ಮಗುವಿನೊಂದಿಗೆ ತಾಯಿಯು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಸೆಲ್ವಿನ್‌ ಮಾಚಾದೋ ಅವರು ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಕಳೆದೆರಡು ವರ್ಷಗಳಿಂದ   ಹೆಂಡತಿ ಬೆಲಿಂಡ ರೋಡ್ರಿಗಸ್ (30) ಮತ್ತು 7 ತಿಂಗಳ ಮಗ ಬ್ರೂಸ್ ಮಚಾಡೋ ಎಂಬುವವರ ಜೊತೆ ನಗರದ ಸೂಟರ್ ಪೇಟೆಯಲ್ಲಿ  ವಾಸವಾಗಿದ್ದರು. ಆ.7 ರಂದು ಸೆಲ್ವಿನ್‌ ಮಾಚಾದೋ ಕೆಲಸ ನಿಮಿತ್ತ ಹೊರಹೋಗಿದ್ದರು. ಅದೇ ದಿನ ಸಂಜೆ 7 ಗಂಟೆಗೆ ಮನೆಗೆ […]

DAKSHINA KANNADA HOME LATEST NEWS

ಸ್ನೇಹಿತರೊಂದಿಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದ 23ರ ಯುವತಿ ನಾಪತ್ತೆ

ಮಂಗಳೂರು: 23 ವರ್ಷದ ಯುವತಿಯೋರ್ವಳು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೋದವಳು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖೈರುನ್ನಿಸ ಮಹಮ್ಮದ್ ನಾಸೀರ ಎಂಬುವವರ ಮಗಳಾದ ಶಾಹಿನ ಬಾನು  ಆ.7 ರಂದು ನಾನು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದಾರೆ. ತಡರಾತ್ರಿಯಾದರೂ ಮನೆಗೆ ಬಾರದೆ ಇರುವುದರಿಂದ, ಗಾಬರಿಗೊಂಡ ಮನೆಯವರು ನೆರೆಕರೆ ಮನೆಯವರಲ್ಲಿ ವಿಚಾರಿಸಿ ಸುತ್ತ ಮುತ್ತ ಪ್ರದೇಶಗಳಲ್ಲಿ ಹುಡುಕಾಡಿದರೂ ಆಕೆಯ ಬಗ್ಗೆ […]

DAKSHINA KANNADA HOME LATEST NEWS

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್‌ಫೋರ್ಸ್‌ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]

DAKSHINA KANNADA HOME LATEST NEWS

ಫೇಸ್‌ಬುಕ್‌ನಲ್ಲಿ ಕೋಮುದ್ವೇಷ & ಸುಳ್ಳು ಸುದ್ದಿ ಪ್ರಸಾರ: SDPI ಅಧ್ಯಕ್ಷನ ಮೇಲೆ FIR

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮುದ್ವೇಷ ಹಾಗೂ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪಕ್ಷದ ಅಧ್ಯಕ್ಷನ ಮೇಲೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ವಿವರ ಜು. 14 ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಧ್ಯಕ್ಷ ಆಶ್ರಪ್ ಬಾವು ಎಂಬಾತ ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ […]

HOME LATEST NEWS NATIONAL

ಉತ್ತರಕಾಂಡ ಭಾರೀ ಮೇಘಸ್ಪೋಟ: 59ಕ್ಕೂ ಅಧಿಕ ಮಂದಿ ಕಣ್ಮರೆ

ಉತ್ತರಕಾಶಿ: ಉತ್ತರಕಾಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಮಾತನಾಡಿದ ರಕ್ಷಣಾ (PRO) ಲೆಫ್ಟಿನೆಂಟ್ ಕರ್ನಲ್ ಮನೀಶ್ ಶ್ರೀವಾಸ್ತವ, ಡೆಹ್ರಾಡೂನ್ ದುರಂತದ ಪ್ರಮಾಣ ಮತ್ತು ಸೇನೆಯ ತಕ್ಷಣದ ಕಾರ್ಯಾಚರಣೆಯನ್ನು ದೃಢಪಡಿಸಿದರು. […]

DAKSHINA KANNADA HOME

ಪಿಲಿಕುಳದಲ್ಲಿ ಭತ್ತದ ಕೃಷಿ ಪ್ರಾತ್ಯಕ್ಷಿಕೆ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು; ಕೃಷಿ ಇಲಾಖೆ, ಮಂಗಳೂರು ಮತ್ತು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.), ಬಜಪೆ ಇದರ ಸಂಯುಕ್ತ ಆಶ್ರಯದಲ್ಲಿ ಭತ್ತದ ಕೃಷಿಯ ಪ್ರಾತ್ಯಕ್ಷಿಕೆಯ ಕಾರ್ಯಕ್ರಮ ಮಂಗಳವಾರರಂದು ಪಿಲಿಕುಳದ ಗುತ್ತುಮನೆಯ ಎದುರಿನ ಬಾಕಿಮಾರು ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಹೊನ್ನಪ್ಪ ಗೌಡ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡುತ್ತ ನಮ್ಮ ಇಲಾಖೆಯು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಇಂತಹ ಅನೇಕ […]

HOME UDUPI

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಉಡುಪಿ: ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು. ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್’ನ ಧರ್ಮಗುರುಗಳಾದ ರೆವರೆಂಡ್ ಫಾದರ್ […]