ಬಜ್ಜೋಡಿಯಲ್ಲಿ ‘ಮಾಣ್ಕಾಂ ಮೊತಿಯಾಂ-2’ ಮಕ್ಕಳ ಕೊಂಕಣಿ ರಜಾ ಶಿಬಿರಕ್ಕೆ ಚಾಲನೆ
ಮಂಗಳೂರು. ಎಪ್ರಿಲ್ 20: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್ ಬಜ್ಜೋಡಿ ಇವರ ಸಹಯೋಗದೊಂದಿಗೆ ಮಾಂಡ್ ಸೊಭಾಣ್ ಸಂಸ್ಥೆಯ ಸಹಕಾರದೊಂದಿಗೆ ನಡೆಸುವ ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರದ ಉದ್ಘಾಟನಾ ಸಮಾರಂಭ ಇನ್ಫೆಂಟ್ ಮೇರಿ ಸಭಾಭವನ ಬಜ್ಜೋಡಿ ಇಲ್ಲಿ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿದ್ದರು.ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಕೊಂಕಣಿ ಮಕ್ಕಳು ಕೊಂಕಣಿ ಭಾಷೆಯನ್ನು ಕಲಿಯುವ ಅವಶ್ಯಕತೆ ಇದೆ. ಅಕಾಡೆಮಿಯು ಇಂತಹ ಶಿಬಿರಗಳಿಗೆ ಪ್ರೋತ್ಸಾಹವನ್ನು […]











