Tag: canaratv

HOME INETRNATIONAL

*ಶೋಷಿತರ ಸ್ವಾಭಿಮಾನದ ಬದುಕಿಗೆ ದಾರಿದೀಪ ಕುದ್ಮುಲ್ ರಂಗರಾವ್- ವೇದವ್ಯಾಸ್ ಕಾಮತ್*

ಮಂಗಳೂರು, ಜೂ.29 :- ಮೇಲ್ವರ್ಗ-ಕೆಳವರ್ಗ ಎಂಬ ಭೇದದ ನಡುವೆ ಕುದ್ಮುಲ್ ರಂಗರಾವ್ ದಲಿತರ ಏಳಿಗೆಗೆ ಮತ್ತು ದಲಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿರಂತರವಾಗಿ ಅಹರ್ನಿಶಿ ದುಡಿದು ಸಮಾಜಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ್ದಾರೆ. ರಂಗರಾವ್ ಅವರ ದಲಿತ ಪರ ಅಭಿವೃದ್ಧಿ ಕಾರ್ಯಕ್ಕೆ ಸಾಕಷ್ಟು ವಿರೋಧಗಳಿದ್ದರೂ ಕೂಡ ಅದನ್ನು ಲೆಕ್ಕಿಸದೆ, ದಲಿತರಿಗೆ ಜಿಲ್ಲೆಯಲ್ಲಿ ಅನೇಕ ಶಾಲೆಗಳನ್ನು ತೆರೆದು, ಉದ್ಯೋಗಗಳನ್ನು ಒದಗಿಸಿ ಅವರ ಬದುಕಿಗೆ ಬೆಳಕಾದವರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಅವರು ಮಂಗಳೂರು ಮಹಾನಗರಪಾಲಿಕೆ ಮತ್ತು ಸಮಾಜ ಕಲ್ಯಾಣ […]

LATEST NEWS

ರಾಜ್ಯಸಭೆ ಸದಸ್ಯರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ: ಸೋನಿಯಾ ಗಾಂಧಿ, ಮಂಜುನಾಥ ಭಂಡಾರಿ ಭಾಗಿ

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ನೂತನವಾಗಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ದೇಶದ ಸಂಸದೀಯ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ಖರ್ಗೆ ಅವರ ಈ ನೂತನ ರಾಜಕೀಯ ಹೆಜ್ಜೆಗೆ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಹಿರಿಯ ನಾಯಕರು ಸಾಕ್ಷಿಯಾದರು. ಅತ್ಯಂತ ವ್ಯವಸ್ಥಿತವಾಗಿ ನಡೆದ ಈ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು […]

LATEST NEWS

ಮತದಾನದ ಹಕ್ಕು, ಪ್ರಜಾಪ್ರಭುತ್ವದ ಮೌಲ್ಯ ಕಾಪಾಡುವುದು ನಾಗರಿಕರ ಜವಾಬ್ದಾರಿ: ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಬಿ. ರಮಾನಾಥ ರೈ ತಿಳಿಸಿದ್ದಾರೆ. ಉಳಿ ಹಾಗೂ ಬಡಕಜೆಕಾರು ವಲಯ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಜೂನ್ 27ರಂದು ಪಂಡವರಕಲ್ಲು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್.ಐ.ಆರ್. (SIR) ಜಾಗೃತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಎಸ್.ಐ.ಆರ್. ಪ್ರಕ್ರಿಯೆಯ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ ಎಂದ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು […]

LATEST NEWS

ಬಿ.ಸಿ. ರೋಡ್ ರಿಕ್ಷಾ ಚಾಲಕರ ನಿಲ್ದಾಣ ಸಮಸ್ಯೆ ಬಗೆಹರಿಸಲು ಮಾಜಿ ಸಚಿವ ಬಿ. ರಮಾನಾಥ ರೈ ಭರವಸೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖ ಕೇಂದ್ರವಾದ ಬಿ.ಸಿ. ರೋಡ್‌ನ ರಿಕ್ಷಾ ಚಾಲಕರ ನಿಲ್ದಾಣದ ಸಮಸ್ಯೆಗೆ ಸಂಬಂಧಿಸಿದಂತೆ, ರಿಕ್ಷಾ ಚಾಲಕರ ನಿಯೋಗವು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಚಾಲಕರು ತಮಗೆ ಎದುರಾಗುತ್ತಿರುವ ಪ್ರಮುಖ ಸಮಸ್ಯೆಗಳನ್ನು ಮಾಜಿ ಸಚಿವರ ಗಮನಕ್ಕೆ ತಂದರು. ಸೂಕ್ತ ರಿಕ್ಷಾ ನಿಲ್ದಾಣದ ಕೊರತೆಯಿಂದಾಗಿ ಚಾಲಕರು ದೈನಂದಿನ ವೃತ್ತಿ ನಿರ್ವಹಣೆಯಲ್ಲಿ ಪಡುತ್ತಿರುವ ಕಷ್ಟಗಳು, ಇದರಿಂದ ಪ್ರಯಾಣಿಕರಿಗೆ ಉಂಟಾಗುತ್ತಿರುವ ಅಸೌಕರ್ಯ ಹಾಗೂ […]

DAKSHINA KANNADA HOME LATEST NEWS

ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಕಮೆಂಟ್‌: ವಿಟ್ಲದಲ್ಲಿ ಓರ್ವನ ಬಂಧನ

ವಿಟ್ಲ: ಫೇಸ್ ಬುಕ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ.ಎ ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿದ್ದ ಬಗ್ಗೆ ವಿಟ್ಲ ಠಾಣೆಯಲ್ಲಿ 2025 ರಲ್ಲಿ ಅ.ಕ್ರ: 131/2025, ಕಲಂ: 353(2) BNS 20233ರಂತೆ ಪ್ರಕರಣ ದಾಖಲಾಗಿದೆ.

HOME LATEST NEWS

ವಿಟ್ಲದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ-ವಿದ್ಯುತ್ ಕಂಬ

ವಿಟ್ಲ: ಇಲ್ಲಿನ ಪಡೀಬಾಗಿಲು ಸಮೀಪ ಚಲಿಸುತ್ತಿದ್ದ ಸ್ವಿಫ್ಟ್ ಕಾರೊಂದರ ಮೇಲೆ ಮರ ಹಾಗೂ ವಿದ್ಯುತ್ ಕಂಬ ಉರುಳಿ ಬಿದ್ದ ಭೀಕರ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಪಡೀಬಾಗಿಲು ತಲುಪುತ್ತಿದ್ದಂತೆ ಪಕ್ಕದಲ್ಲಿದ್ದ ದೊಡ್ಡ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಪರಿಣಾಮ ಮರ ಮತ್ತು ವಿದ್ಯುತ್ ಕಂಬ ಎರಡೂ ನೇರವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಅಪ್ಪಳಿಸಿವೆ. ಘಟನೆಯ ಸಮಯದಲ್ಲಿ ಕಾರಿನಲ್ಲಿ ಗಂಡ-ಹೆಂಡತಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. […]

LATEST NEWS

ಕರಾವಳಿ ಕರ್ನಾಟಕದ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು: ಸ್ವಾಮಿ ಜಿತಕಾಮಾನಂದಜಿ

ಮಂಗಳೂರು, ಜೂನ್ 28: ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಎಂಬ ತಪ್ಪು ಭಾವನೆಯನ್ನು ಬಿಟ್ಟು, ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಪರೀಕ್ಷೆಗಳನ್ನು ಎದುರಿಸಬೇಕು ಎಂದು ಮಂಗಳೂರು ರಾಮಕೃಷ್ಣ ಮಿಷನ್‌ನ ಸ್ವಾಮಿ ಜಿತಕಾಮಾನಂದಜಿ ಕರೆ ನೀಡಿದ್ದಾರೆ. ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ಮಂಗಳೂರು ಐಎಎಸ್ ಸಂಸ್ಥೆಯು ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ಮಂಗಳಾದೇವಿಯ ರಾಮಕೃಷ್ಣ ಮಿಷನ್‌ನಲ್ಲಿ ಆಯೋಜಿಸಿದ್ದ “ಮಾರ್ಗದರ್ಶಿ – ಕ್ರ್ಯಾಕಿಂಗ್ ದಿ ಯುಪಿಎಸ್ಸಿ ಎಕ್ಸಾಮಿನೇಷನ್” ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೃಢ […]

DAKSHINA KANNADA HOME LATEST NEWS

ಅಳಿಕೆ ಗ್ರಾಮದ 2.07 ಕೋಟಿಯ ವಿವಿಧ ಕಾಮಗಾರಿ ಶಂಕುಸ್ಥಾಪನೆಗೈದ ಶಾಸಕ ಅಶೋಕ್‌ ರೈ

ವಿಟ್ಲ: ಬಂಟ್ವಾಳ ತಾಲೂಕಿನ ಪುತ್ತೂರು ವಿಧಾನಸಭಾ ಕ್ಷೇತ್ರದ ಅಳಿಕೆ ಗ್ರಾಮದ ಒಟ್ಟು 22 ಕಾಮಗಾರಿಗಳಿಗೆ ಪುತ್ತೂರು ಶಾಸಕ ಅಶೋಕ್‌ ರೈ  ಶಂಕುಸ್ಥಾಪನೆ ಮಾಡಿದರು. ಅದೇ ರೀತಿ 2.45 ಲಕ್ಷ ರೂ. ಅನುದಾನದ ಕಾಮಾಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ಅಳಿಕೆ ಗ್ರಾಮದ ನಿಕಟಪೂರ್ವ ಅಧ್ಯಕ್ಷ ಹಾಗೂ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಎಸ್‌.ಎಸ್‌. ಮಹಮ್ಮದ್‌, ಡಾ.ರಾಜಾರಾಮ್‌  ಸೇರಿ ಹಲವು ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು. ಅಳಿಕೆ ಗ್ರಾಮದ ಕಾನತ್ತಡ್ಕ- ಗೋಳಿದಡಿ ರಸ್ತೆ ಅಭಿವೃದ್ದಿಗೆ 10 ಲಕ್ಣ ಅನುದಾನ […]

LATEST NEWS

ನಿಡ್ಡೋಡಿ ಸಂತ ತೆರೆಜಮ್ಮನವರ ಚರ್ಚ್‌ನಲ್ಲಿ ಪರಿಸರ ದಿನಾಚರಣೆ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ವಂ| ಲಿಯೋ ವಿಲಿಯಂ ಲೋಬೊ

ಮೂಡಬಿದ್ರೆ, ಜೂನ್ 28:ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಭಾನುವಾರ ದಂದು ಬೆಳಗಿನ ಪೂಜೆಯ ನಂತರ ಪರಿಸರ ಸಂರಕ್ಷಣಾ ದಿನಾಚರಣೆ ಹಾಗೂ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ, ಪರಿಸರ ಆಯೋಗ ಹಾಗೂ ಐ.ಸಿ.ವೈ.ಎಂ (ICYM) ನಿಡ್ಡೋಡಿ ಘಟಕದ ಜಂಟಿ ಆಶ್ರಯದಲ್ಲಿ ಈ ಸಮಾಜಮುಖಿ ಕಾರ್ಯಕ್ರಮ ವನ್ನು ಆಯೋಜಿಸಲಾಯಿತು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಚರ್ಚಿನ ಧರ್ಮಗುರುಗಳಾದ ವಂದನೀಯ ಲಿಯೋ ವಿಲಿಯಂ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ […]

LATEST NEWS

ರಾಜ್ಯ ಮಟ್ಟದ ಸಿಮೆಂಟ್‌ ಶಿಲ್ಪಕಲಾ ಶಿಬಿರ ಸಮಾರೋಪ; ಸಾಂಪ್ರದಾಯಿಕ ಕಲೆಗಳ ರಕ್ಷಣೆಗೆ ವಿನ್ಸೆಂಟ್‌ ಕುಟಿನ್ಹಾ ಕರೆ

ಮಂಗಳೂರು: “ನೂರಾರು ವರ್ಷಗಳ ಹಿಂದೆ ನಿರ್ಮಿಸಲಾದ ಪ್ರಾಚೀನ ಶಿಲ್ಪಗಳು ಮತ್ತು ಗುಹಾಚಿತ್ರಗಳು ಇಂದಿಗೂ ಜನರೊಂದಿಗೆ ಸಂವಹನ ನಡೆಸುತ್ತಿವೆ. ಇದು ನಮ್ಮ ಕರಕುಶಲತೆಯ ಅಜರಾಮರ ಮೌಲ್ಯವನ್ನು ಸಾಬೀತುಪಡಿಸುತ್ತದೆ. ಆಧುನಿಕ ಜಗತ್ತಿನಲ್ಲಿ ಕಲೆಯ ಸ್ವರೂಪ ಬದಲಾಗುತ್ತಿದ್ದರೂ, ಕಲಾವಿದರನ್ನು ಪ್ರೋತ್ಸಾಹಿಸುವ ಮತ್ತು ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ರಕ್ಷಿಸುವ ತುರ್ತು ಅಗತ್ಯವಿದೆ” ಎಂದು ಪ್ರೊವಿಟ್‌ ಫುಡ್ಸ್‌ ಪ್ರೈ.ಲಿ. ಮಾಲಕ ಹಾಗೂ ಕಲಾಭಿಮಾನಿ ವಿನ್ಸೆಂಟ್ ಕುಟಿನ್ಹಾ ಕರೆ ನೀಡಿದರು. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮತ್ತು […]