Tag: canaratv

LATEST NEWS

ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಅತ್ಯಾಧುನಿಕ ವಿಡಿಯೋ ಕಾನ್ಫರೆನ್ಸ್ ಹಾಲ್ ಸೇರ್ಪಡೆ

ಮಂಗಳೂರು: ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವ್ಯವಸ್ಥೆಯ ಸೊಬಗಿಗೆ ಇಂದು ಮತ್ತೊಂದು ಆಕರ್ಷಣೀಯ ಆಧುನಿಕ ಸೌಲಭ್ಯದ ಸೇರ್ಪಡೆ.ಈಗಾಗಲೇ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ವತಿಯಿಂದ ಅಂದಿನ ಲಯನ್ಸ್ ಗವರ್ನರ್ ಆಗಿದ್ದ ಲಯನ್ ವಸಂತ್ ಶೆಟ್ಟಿಯವರಿಂದ ಅನುದಾನಿತಗೊಳಿಸಲ್ಪಟ್ಟು ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಕೊಡುಗೆಯಾಗಿ ಬಂದಂತಹ ವಿಡಿಯೋ ಕಾನ್ಫರೆನ್ಸ್ ಹಾಲ್ ಮತ್ತೊಂದಿಷ್ಟು ಬೆಳವಣಿಗೆಯೊಂದಿಗೆ ಅಂದದ ಸ್ವರೂಪವನ್ನು ಪಡೆದುಕೊಂಡ ರಮಣೀಯ ದೃಶ್ಯ. ಉನ್ನತ ಮಟ್ಟದ ಸಭೆಗಳನ್ನು ನಡೆಸಲು ಅನುಕೂಲವಾಗುವಂತೆ ಸುಮಾರು ಹದಿಮೂರು ಮೈಕ್ರೋಫೋನ್ ಗಳ ಅಳವಡಿಕೆ,ಹೈ ಸ್ಟ್ಯಾಂಡರ್ಡ್ amplifier ಹಾಗೂ ಪೂರಕ ವ್ಯವಸ್ಥೆಗಳನ್ನು […]

LATEST NEWS

ಕಸ ವಿಂಗಡಣೆ ಪ್ರತಿ ನಾಗರಿಕನ ಜವಾಬ್ದಾರಿ: ಬಜಾಲ್‌ನಲ್ಲಿ ಸ್ವಚ್ಛತಾ ಜಾಗೃತಿ ಜಾಥಾ ಉದ್ಘಾಟಿಸಿ ಅಬ್ದುಲ್ ರವೂಫ್ ಕರೆ

ಮಂಗಳೂರು: ಸ್ವಚ್ಛ ಪರಿಸರ ನಿರ್ಮಾಣವು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಸಿಕಸ ಮತ್ತು ಒಣಕಸವನ್ನು ಸಮರ್ಪಕವಾಗಿ ವಿಂಗಡಿಸಿ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವ ಮೂಲಕ ಸ್ವಚ್ಛ ನಗರ ನಿರ್ಮಾಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಬದ್ರಿ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರವೂಫ್ ಕರೆ ನೀಡಿದ್ದಾರೆ. ಅವರು ಬಜಾಲ್ ನಂತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಬಜಾಲ್ ನಂತೂರ್ ಫೈಸಲ್ ನಗರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ಸ್ವಚ್ಛತಾ ಹಿ […]

HOME LATEST NEWS

ಮೈಸೂರು ದಸರಾದಲ್ಲಿ ಕಂಬಳ ಸಂಭ್ರಮ: ಅಕ್ಟೋಬರ್ 18, 19 ರಂದು ಐತಿಹಾಸಿಕ ಕ್ರೀಡೆಗೆ ಮುಹೂರ್ತ ನಿಗದಿ

ಮೈಸೂರು : ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಅದ್ಧೂರಿ ಕಂಬಳ ಕ್ರೀಡೆಯನ್ನು ಆಯೋಜಿಸಲು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಅಕ್ಟೋಬರ್ 18 ಮತ್ತು 19 ರಂದು (ಭಾನುವಾರ ಮತ್ತು ಸೋಮವಾರ) ಎರಡು ದಿನಗಳ ಕಾಲ ಮೈಸೂರಿನಲ್ಲಿ ಕಂಬಳ ಜರುಗಲಿದೆ ಎಂದು ಕಂಬಳದ ರುವಾರಿ ಹಾಗೂ ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಥಮ ಪೂರ್ವಭಾವಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ […]

LATEST NEWS

ಜನರ ಸೇವೆಗಾಗಿ ಅಧಿಕಾರದ ಬಳಕೆ ಅಭಿನಂದನೆ ಸ್ವೀಕರಿಸಿ ನೂತನ ವಿ.ಪ. ಸದಸ್ಯ ಪಿ.ವಿ. ಮೋಹನ್

ಮಂಗಳೂರು,: ಜನಸೇವೆಗೆ ಅಧಿಕಾರ ಅತ್ಯಗತ್ಯ. ನನಗೆ ದೊರೆತಿರುವ ಈ ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಮತ್ತು ಅವರ ಕೆಲಸಗಳಿಗಾಗಿ ಬಳಸುತ್ತೇನೆಯೇ ಹೊರತು ವೈಯಕ್ತಿಕ ಹಿತಾಸಕ್ತಿಗಲ್ಲ” ಎಂದು ನೂತನ ವಿಧಾನಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರಾಜಕೀಯ ಆದರ್ಶಗಳ ಹಾದಿ: “ನಾನು ಆಸ್ಕರ್ ಫರ್ನಾಂಡಿಸ್, ಜನಾರ್ದನ ಪೂಜಾರಿ ಮತ್ತು ವೀರಪ್ಪ ಮೊಯ್ಲಿ ಅವರಂತಹ ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ರಾಜಕೀಯ ಆದರ್ಶಗಳನ್ನು ಪಾಲಿಸುತ್ತಾ […]

LATEST NEWS

ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಸ್ಮರಣಾರ್ಥ ದತ್ತಿನಿಧಿ ವಿತರಣೆ: ಎಜು ಕಾರುಣ್ಯ ಟ್ರಸ್ಟ್ ಕಾರ್ಯ ಶ್ಲಾಘನೀಯ – ಪ್ರಶಾಂತ್ ಕಾಜವ

ಮಂಗಳೂರು: ಜೂನ್,26 :ಪ್ರಾಮಾಣಿಕ, ನೇರ ಮತ್ತು ನಿಷ್ಠುರ ಪತ್ರಕರ್ತರಾಗಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೇಪುಣಿಯವರ ಸ್ಮರಣಾರ್ಥ ದತ್ತಿ ನಿಧಿ ಯೋಜನೆ ಆರಂಭಿಸಿರುವ ಎಜು ಕಾರುಣ್ಯ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಸಮಾಜಕ್ಕೆ ಪ್ರೇರಣಾದಾಯಿ ಎಂದು ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕಾಜವ ಶ್ಲಾಘಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಶುಕ್ರವಾರ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ಆಯೋಜಿಸಿದ್ದ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]

HOME LATEST NEWS STATE

ನನಗೂ‌ ಡಿಕೆಶಿಗೂ ಯಾವುದೇ ವ್ಯವಹಾರಿಕ ಸಂಬಂಧವಿಲ್ಲ ಧರ್ಮಸ್ಥಳದಲ್ಲಿ ಬಿ.ವೈ. ವಿಜಯೇಂದ್ರ

ಮಂಗಳೂರು, ಧರ್ಮಸ್ಥಳ ಜೂನ್ 26: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಮತದಾನದ ಹಿಂದೆ ತಾವಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ವ್ಯವಹಾರಿಕ ಅಥವಾ ಆತ್ಮೀಯ ಸಂಬಂಧವಿದೆ ಎಂಬ ಆರೋಪವನ್ನು ವಿಜಯೇಂದ್ರ ಇದೇ ವೇಳೆ ತಳ್ಳಿಹಾಕಿದರು. ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದೇನೆ. ಅಲ್ಲಿಂದ ಮಂಗಳೂರಿಗೆ ಆಗಮಿಸಿ ಧರ್ಮಸ್ಥಳದಲ್ಲಿ ದೇವರ […]

DAKSHINA KANNADA HOME LATEST NEWS NATIONAL

ಮಂಗಳೂರಿನಲ್ಲಿ ಆನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್: ರೋಹನ್ ಕಾರ್ಪೊರೇಶನ್ ‘ರೋಹನ್ ಮರೀನಾ ವನ್’ ಅನಾವರಣ

ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ “ಆನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್” ಎಂಬ ವಿಶೇಷ ಕಾರ್ಯಕ್ರಮ ಅದ್ದೂರಿಯಾಗಿ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಗುರುವಾರ ಸಂಜೆ ನಡೆಯಿತು. ಈ ಸಮಾರಂಭದಲ್ಲಿ ರೋಹನ್ ಕಾರ್ಪೊರೇಶನ್ ಐಷಾರಾಮಿ ಸಮುದ್ರತೀರ ವಸತಿ ಯೋಜನೆಯಾದ “ರೋಹನ್ ಮರೀನಾ ವನ್’ ಅನ್ನು ನಟ ಶಾರುಖ್ ಅನಾವರಣಗೊಳಿಸಿದರು. ನಂತರ ಮಾತನಾಡಿ ಮಂಗಳೂರು ನಗರದ ಆತಿಥ್ಯ, ಸಂಸ್ಕೃತಿ ಹಾಗೂ ವೇಗವಾಗಿ ಬೆಳೆಯುತ್ತಿರುವ ಅಭಿವೃದ್ಧಿಯನ್ನು ಶ್ಲಾಘಿಸಿದರು. ಜೊತೆಗೆ ರೋಹನ್‌ ಮರಿನಾ ಒನ್‌ ಉತ್ತಮ ರೀತಿಯಲ್ಲಿ ನಿರ್ಮಾಣಗೊಂಡಿದ್ದು, ಎಲ್ಲಾ ಸೌಕರ್ಯಗಳೊಂದಿಗೆ ಆಕರ್ಷಕವಾಗಿದೆ […]

LATEST NEWS

ಮೆಸ್ಕಾಂ ಖಾಸಗೀಕರಣ ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್‌ಗೆ ವಿದ್ಯುತ್ ನೌಕರರ ಒಕ್ಕೂಟದಿಂದ ಮನವಿ

ಮಂಗಳೂರು:ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ಪರವಾನಿಗೆಗಾಗಿ ಟಾಟಾ ಪವರ್ ಕಾರ್ಪೊರೇಷನ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಲು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗೀಕರಣ ತಡೆಗಟ್ಟಲು ಕೋರಿ ವಿದ್ಯುತ್ ನೌಕರರ ಒಕ್ಕೂಟದ ಪದಾಧಿಕಾರಿಗಳು ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಅವರಿಗೆ ಮನವಿ ಸಲ್ಲಿಸಿದರು. ಟಾಟಾ ಪವರ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯು ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದು, ನಗರವನ್ನು ಕೇಂದ್ರವಾಗಿಟ್ಟುಕೊಂಡು […]

LATEST NEWS

ಮಾಣಿಲ ಕಾಮಜಲು ಫ್ರೆಂಡ್ಸ್ ಕ್ಲಬ್ (KFC) ದಶಮಾನೋತ್ಸವ: ಜೂನ್ 28ಕ್ಕೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ

ವಿಟ್ಲ: ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಚಿಂತನೆಗಳೊಂದಿಗೆ ಮುನ್ನಡೆಯುತ್ತಿರುವ ಮಾಣಿಲದ ಪ್ರತಿಷ್ಠಿತ ಸಂಘಟನೆ ಕಾಮಜಲು ಫ್ರೆಂಡ್ಸ್ ಕ್ಲಬ್ (KFC) (ರಿ.) ಇದರ ಹತ್ತನೇ ವರ್ಷದ ದಶಮಾನೋತ್ಸವದ ಸವಿನೆನಪಿಗಾಗಿ, ಸಂಸ್ಥೆಯ ಕನಸಿನ ಯೋಜನೆಯಾದ ಉಚಿತ/ತುರ್ತು “ಆಂಬುಲೆನ್ಸ್ ಲೋಕಾರ್ಪಣೆ” ಹಾಗೂ ಬೃಹತ್ ಸಭಾ ಸಮಾರಂಭವು ಜೂನ್ 28ರ ಭಾನುವಾರದಂದು ಶ್ರೀ ಕ್ಷೇತ್ರ ಕುಕ್ಕಾಜೆಯಲ್ಲಿ ಅತ್ಯಂತ ವೈಭವದಿಂದ ಜರುಗಲಿದೆ. ಕಳೆದ ಹತ್ತು ವರ್ಷಗಳಿಂದ ಮಾಣಿಲ ಪರಿಸರದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಕಾಮಜಲು ಫ್ರೆಂಡ್ಸ್ ಕ್ಲಬ್, ಇದೀಗ ಸ್ಥಳೀಯ ಸಾರ್ವಜನಿಕರ […]

LATEST NEWS

ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲ ಪದಗ್ರಹಣ

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲ ಪದಗ್ರಹಣ ಸಮಾರಂಭವು ಜೂನ್ 25ರಂದು ಶಾಲಾ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಅಶೋಕ್ ರಾಯನ್ ಕ್ರಾಸ್ತಾ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ, ಸೇವಾ ಮನೋಭಾವ ಹಾಗೂ ಜವಾಬ್ದಾರಿಯ ಮಹತ್ವವನ್ನು ಅರಿತುಕೊಳ್ಳುವುದು ಅಗತ್ಯ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಶಾಲಾ ಸಂಚಾಲಕರಾದ ವಂದನೀಯ ಮೈಕೆಲ್ ಲೋಬೊ ಅವರು […]