Tag: canaratvnews

COMMUNITY NEWS HOME

ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಸಮ್ಮೇಳನಕ್ಕೆ ಚಾಲನೆ

ಮಂಗಳೂರು,ಫೆ. 27: ಮಂಗಳೂರು ಧರ್ಮಪ್ರಾಂತ್ಯದ ಕ್ಯಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಸಹಯೋಗದೊಂದಿಗೆ ಬೈಬಲ್ ಸಮ್ಮೇಳನಕ್ಕೆ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಹಿರಿಯ ಗುರು ಮೊನ್ಸಿಂಜೊರ್ ವಂ| ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಧ್ವಜಾರೋಹನ ಮಾಡುವ ಮೂಲಕ ಚಾಲನೆ ನೀಡಿ ಬಲಿಪೂಜೆ ನೆರವೇರಿಸಿದರು. ಬಲಿಪೂಜೆಯಲ್ಲಿ “ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ನೆಲೆಸಿದೆ” ಎಂಬ ಕುರಿತು ಪ್ರವಚನ ನೀಡಿದ ಅವರು, ನಾವು ದೇವರ ಮುಂದೆ ಪ್ರಾರ್ಥನೆ ಮಾಡುವಾಗ […]

DAKSHINA KANNADA HOME LATEST NEWS

ಪೆರುವಾಯಿ ಕಾಲಾವಧಿ ಜಾತ್ರೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಸಮೀಪದ ಬದಿಯಾರು ಶ್ರೀ ಮೂವರು ದೈವಂಗಳು ಪಂಜುರ್ಲಿ ಮತ್ತು ಪಿಲಿಚಾಮುಂಡಿ ದೈವಸ್ಥಾನದಲ್ಲಿ 2026ನೇ ಸಾಲಿನ ಕಾಲಾವಧಿ ಜಾತ್ರೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಬದಿಯಾರು ಕ್ಷೇತ್ರದಲ್ಲಿ ಫೆಬ್ರವರಿ 20, 2026ರ ಶುಕ್ರವಾರದಿಂದ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ 22ರ ಆದಿತ್ಯವಾರದವರೆಗೆ ವಿಜೃಂಭಣೆಯಿಂದ ನಡೆದವು. ಮೂರು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು, ದೈವಗಳ ನೇಮೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಾದಿಗಳ ಸಮ್ಮುಖದಲ್ಲಿ ಸಂಪನ್ನಗೊಂಡವು. ಪೆರುವಾಯಿ ಮತ್ತು ಸುತ್ತಮುತ್ತಲಿನ ಗ್ರಾಮಗಳ […]

DAKSHINA KANNADA HOME LATEST NEWS STATE

ಆಂಟಿ ಜೊತೆ ಜ್ಯೋತಿಷಿ ಕಮಲಾಕರ ಭಟ್ ಅಕ್ರಮ ಸಂಬಂಧ- ಗಲಾಟೆ: ಓರ್ವನ ಮರ್ಡರ್‌

ಕಾರವಾರ: ಸಿದ್ದಾಪುರ ತಾಲ್ಲೂಕಿನ ಅವರಗೊಪ್ಪ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಸೇರಿ ಏಳು ಮಂದಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಮೃತ ವ್ಯಕ್ತಿಯನ್ನು ವಸಂತ ನಾಯ್ಕ (43) ಎಂದು ಗುರುತಿಸಲಾಗಿದೆ. ಘಟನೆ ವಿವರ ದೃಶ್ಯವಾಹಿನಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಸಿದ್ದಾಪುರ ತಾಲ್ಲೂಕು ಹೆಮ್ಮನಬೈಲ್ ಗ್ರಾಮದ, ಸದ್ಯ ಶಿವಮೊಗ್ಗದಲ್ಲಿ ವಾಸವಿರುವ ಕಮಲಾಕರ ಭಟ್, ಆತನ ಮನೆಯಲ್ಲಿ ವಾಸವಿದ್ದ ಸುಚಿತ್ರಾ ನಾಯ್ಕ, ಸುಚಿತ್ರಾಳ ತಂದೆ […]

DAKSHINA KANNADA HOME LATEST NEWS

ವಿಟ್ಲ: ದ್ವಿಚಕ್ರ ವಾಹನಕ್ಕೆ ಗುದ್ದಿ ಓಮ್ನಿ ಪರಾರಿ- ಮಹಿಳೆಯರಿಬ್ಬರು ಗಂಭೀರ

ವಿಟ್ಲ: ದ್ವಿಚಕ್ರ ವಾಹನಕ್ಕೆ ಅತೀ ವೇಗದಿಂದ ಓಮ್ನಿಯೊಂದು ಹಿಂದಿನಿಂದ ಗುದ್ದಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಳಿಕೆ ಗ್ರಾಮದ ನಿವಾಸಿ ಜೆಸಿಂತಾ (31) ಹಾಗೂ ಪೆರುವಾಯಿ ಗ್ರಾಮದ ನಿವಾಸಿ ರೇಷ್ಮಾ ಎಂದು ಗುರುತಿಸಲಾಗಿದೆ. ಘಟನೆ ವಿವರ ಫೆ.1 ರಂದು ಕಾರ್ಯನಿಮಿತ್ತ ಇವರಿಬ್ಬರೂ ಹೋಂಡಾ ಡೀಯೋ ದ್ವಿಚಕ್ರ ವಾಹನದಲ್ಲಿ ಮುಡಿಪು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದರು. ಕಡಂಬು ಎಂಬಲ್ಲಿ ತಲುಪುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ಓಮ್ನಿಯೊಂದು […]

DAKSHINA KANNADA HOME LATEST NEWS NATIONAL STATE

ದಾಖಲೆ ಏರಿಕೆ ಕಂಡಿದ್ದ ಚಿನ್ನದ ದರ ಇಂದು ದಿಢೀರ್‌ ಕುಸಿತ…! ಕಾರಣವೇನು?

ನವದೆಹಲಿ: ಕಳೆದ ಕೆಲ ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿಯ ದರಗಳು ಶುಕ್ರವಾರ ದಿಢೀರ್ ಕುಸಿತ ಕಂಡಿವೆ. ಮಲ್ಟಿ ಕಮೋಡಿಟಿ ಎಕ್ಸ್ ಚೆಂಜ್ (MCX)ನಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಶೇ.15 ರಷ್ಟು ಕುಸಿತ ಕಂಡಿದೆ. ಚಿನ್ನದ ಬೆಲೆ ಶೇ.6.5 ರಷ್ಟು ಅಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ರೂ. 12,000 ಕಡಿಮೆಯಾಗಿದೆ. ಗುರುವಾರ 10 ಗ್ರಾಂ ಚಿನ್ನದ ಬೆಲೆ ರೂ. 1,93,096 ಆಗಿತ್ತು. MCX ನಲ್ಲಿ ಚಿನ್ನದ ದರ ಈಗ […]

DAKSHINA KANNADA HOME LATEST NEWS STATE

‘ಭಜರಂಗಿ ಗೋ ಕಳ್ಳರು’ ವಾಟ್ಸಾಪ್‌ ಗ್ರೂಪ್‌ನಲ್ಲಿ ಧಾರ್ಮಿಕ ಭಾವನೆ ಕೆರಳಿಸಿದ ಪ್ರಕರಣ: ಹೈಕೋರ್ಟ್‌ ಕಿಡಿ

ಬೆಂಗಳೂರು: ‘ಭಜರಂಗಿ ಗೋ ಕಳ್ಳರು’ ಹೆಸರಿನಲ್ಲಿ ವಾಟ್ಸ್‌ ಆ್ಯಪ್‌ ಗ್ರೂಪ್‌ ರಚಿಸಿ ಅದರಲ್ಲಿ, ಹಿಂದೂ ದೇವತೆಗಳನ್ನು ಮತ್ತು ರಾಜಕೀಯ ನಾಯಕರನ್ನು ಅಶ್ಲೀಲವಾಗಿ ಬಿಂಬಿಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪವಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ. ತನ್ನ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಕುಪ್ಪೆಟ್ಟಿ ಕರಾಯ ಗ್ರಾಮದ ಸಿರಾಜುದ್ದೀನ್‌ ಬಿನ್‌ ಮೊಹಮದ್‌ ಇಸ್ಮಾಯಿಲ್‌ (30) ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ […]

HOME LATEST NEWS STATE

ಬರೋಬ್ಬರಿ 12 ರೋಲ್ಸ್ ರಾಯ್ಸ್ ಕಾರು ಹೊಂದಿದ್ದ ಸಿ.ಜೆ. ರಾಯ್ ಯಾರು…?

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ. ರಾಯ್ ಅವರು ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ತಮ್ಮ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಟಿ ದಾಳಿ ನಡೆದಾಗ ಸ್ವತಃ ತಾವೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಈ ಸುದ್ದಿ ಈಗ ಉದ್ಯಮ ವಲಯಕ್ಕೆ ಬರ ಸಿಡಿಲಿನಂತೆ ಎರಗಿ ಬಂದಿದೆ. Big Breaking: ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಡಾ ಸಿ.ಜೆ ರಾಯ್‌ ಆತ್ಮಹತ್ಯೆ ಯಾರು ಈ ರಾಯ್‌? ಮೂಲತಃ ಕೇರಳದವರಾಗಿದ್ದರೂ ಸಹ ಬೆಂಗಳೂರಿನಲ್ಲೇ ಬೆಳೆದಿದ್ದರು.  ಕೊಚ್ಚಿ ಕ್ರೈಸ್ತ ಧರ್ಮಕ್ಕೆ […]

DAKSHINA KANNADA HOME LATEST NEWS STATE

Big Breaking: ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಡಾ ಸಿ.ಜೆ ರಾಯ್‌ ಆತ್ಮಹತ್ಯೆ

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಆಸ್ತಿಯ ಒಡೆಯ,  ಕಾನ್ಫಿಡೆಂಟ್‌ ಗ್ರೂಫನ್‌ ಸಾಮ್ರಾಟ ಡಾ ಸಿ.ಜೆ ರಾಯ್‌ ದುರಂತ ಅಂತ್ಯ ಕಂಡಿದ್ದಾರೆ. ಐಟಿ ದಾಳಿ ವೇಳೆ ಅಧಿಕಾರಿಗಳ ಎದುರೇ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ರಿಚ್ಮಂಡ್ ಸರ್ಕಲ್ ಬಳಿಯ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಈ ದುರಂತ ಸಂಭವಿಸಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಿ.ಜೆ. ರಾಯ್ ಅವರು ತಮ್ಮ ಕಚೇರಿಯ ಒಳಗೆ ಇದ್ದಕ್ಕಿದ್ದಂತೆ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಐಟಿ ದಾಳಿಯ ವೇಳೆ ಅಧಿಕಾರಿಗಳಿಗೆ […]

HOME LATEST NEWS NATIONAL STATE

ಗಗನದತ್ತ ಚಿನ್ನದ ಬೆಲೆ..!: 17,000 ರೂ. ಗಡಿ  ದಾಟಿದ ಚಿನ್ನ- ಬೆಳ್ಳಿಯೂ ದುಬಾರಿ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ನಿನ್ನೆ ಅಕ್ಷರಶಃ ಗಗನ ಮುಟ್ಟಿದೆ. ಇತ್ತೀಚಿನ ವರ್ಷಗಳಲ್ಲೇ ಒಂದೇ ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆ ಇದು. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 16,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ  ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ ಜಿಗಿತ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,63,950 ರುಪಾಯಿ ಇದೆ. 24 ಕ್ಯಾರಟ್​ನ […]

DAKSHINA KANNADA HOME LATEST NEWS

ಸುರತ್ಕಲ್‌: ಮನೆಗೆ ನುಗ್ಗಿ ದೈವದ ಮೂರ್ತಿ & ಪರಿಕರ ಕಳವು- ಇಬ್ಬರ ಬಂಧನ

ಮಂಗಳೂರು: ಕುಳಾಯಿಯ ಮನೆಯೊಂದರಿಂದ ದೈವಗಳ ಮೂರ್ತಿಗಳು ಮತ್ತು ಟಿವಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ವಾಜೀದ್ ಜೆ ಯಾನೆ ವಾಜಿ (27) ಮತ್ತು ಜೋಕಟ್ಟೆಯ ಸಯ್ಯದ್ ಆಲಿ (40) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ ಕುಳಾಯಿ ಗ್ರಾಮದ ಯಶೋಧ ಕ್ಲಿನಿಕ್ ಬಳಿಯ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧ ಪಟ್ಟ ಪೂಜಾ ಪರಿಕರಗಳು ಮತ್ತು ಟಿವಿ […]