Tag: canaratvnews

HOME LATEST NEWS STATE

“ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಅಧಿಕೃತವಾಗಿ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದ ಮರೆಯದ ನಾಯಕ, ದಾಖಲೆಯ ಬಜೆಟ್‌ ಮಂಡಿಸಿದ ವೀರ, ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ದೀರ್ಘಕಾಲಿನ ಸಿಎಂ ಎಂಬ ಹೆಗ್ಗಳಿಕೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಎರಡು ದಿನಗಳ ಹಿಂದೆ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿ ಸಿಎಂ ಸ್ಥಾನ ತೊರೆಯುವಂತೆ ಸಲಹೆ ನೀಡಿತ್ತು. ಜೊತೆಗೆ ರಾಜ್ಯ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಸಮಯವಕಾಶ ಕೇಳಿದ್ದ ಸಿಎಂ ಇಂದು ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. […]

DAKSHINA KANNADA HOME LATEST NEWS NATIONAL

Breaking: ಪೆಟ್ರೋಲ್ – ಡೀಸೆಲ್ ಬೆಲೆ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂಧನ ಮಿತ ಬಳಕೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ ಬೆನ್ನಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ರಾಜ್ಯದಲ್ಲಿ ಪೆಟ್ರೋಲ್ ದರ ಲೀಟರ್​​ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್​​ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 […]

DAKSHINA KANNADA HOME LATEST NEWS

ವಿಟ್ಲ ಸುತ್ತಮುತ್ತ ಹಾರಾಡಿದ 2 ಪ್ಯಾಸೆಂಜರ್ ವಿಮಾನ: ಸ್ಥಳೀಯರಲ್ಲಿ ಆತಂಕ

ವಿಟ್ಲ: ಬಂಟ್ವಾಳ ತಾಲೂಕಿನ ಕಲ್ಲಡ್ಕ, ವಿಟ್ಲ ಸೇರಿದಂತೆ ಹಲವೆಡೆ ಸಂಜೆಯ ವೇಳೆಗೆ ಎರಡು ವಿಮಾನಗಳು ಕೆಳಮಟ್ಟದಲ್ಲಿ ಹಾರಾಡುತ್ತಿದ್ದುದು ಸ್ಥಳೀಯರಿಗೆ ಕೌತುಕದ ಜೊತೆಗೆ ಆತಂಕ ಸೃಷ್ಟಿ ಮಾಡಿತ್ತು. ಸದ್ಯ ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಿಂದ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಮಂಗಳೂರಿನಾದ್ಯಂತ ಹವಾಮಾನ ವೈಪರಿತ್ಯದಿಂದ ಲ್ಯಾಂಡ್‌ ಆಗಿರಲಿಲ್ಲ. ಈ ಹಿನ್ನೆಲೆ ಬಂಟ್ವಾಳ, ಕಲ್ಲಡ್ಕ, ವಿಟ್ಲ ಆಸುಪಾಸಿನಲ್ಲಿ ಕಾಣಿಸಿಕೊಂಡಿತ್ತು. ಈ ಬಗ್ಗೆ ವಿಮಾನ ನಿಲ್ಧಾಣದ ಸಾರ್ವಜನಿಕ ಸಂಪರ್ಕಾಧಿಕಾರಿ ಸ್ಪಷ್ಟನೆ ನೀಡಿ ಎರಡೂ ವಿಮಾನಗಳು […]

HOME LATEST NEWS

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ. ಪ್ರವೀಣ್ ಮಾರ್ಟಿಸ್ […]

HOME

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ವಾರ್ಷಿಕ ಹಬ್ಬ

ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲದ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಇಂದು (ಮೇ.13) ವಾರ್ಷಿಕ ಹಬ್ಬ ನಡೆಯಿತು. ಹಬ್ಬದ ದಿವ್ಯಬಲಿಪೂಜೆಯನ್ನು ನೂತನ ಧರ್ಮಗುರು ಹಾಗೂ ಮಂಗಳೂರಿನ ಬಿಜೈ ಚರ್ಚ್‌ನ ಸಹಾಯಕ ಧರ್ಮಗುರುಗಳಾದ ವಂದನೀಯ ಜೀವನ್‌ ಡಿಸೋಜಾ ಇವರು ನೆರವೇರಿಸಿದರು.ಈ ವೇಳೆ ನಡೆದ ಧಾರ್ಮಿಕ ಪ್ರವಚನದಲ್ಲಿ, ಕನ್ಯಾ ಮೇರಿ ಮಾತೆಯು 1917 ರ ಮೇ 13ರಂದು ಪೋರ್ಚುಗಲ್‌ನ ಫಾತಿಮಾ ಎಂಬಲ್ಲಿ ಲೂಸಿಯಾ, ಫ್ರಾನ್ಸಿಸ್ಕೋ ಮತ್ತು ಜೆಸಿಂತಾ ಎಂಬ ಮೂವರು ಮಕ್ಕಳಿಗೆ ಕುರಿಗಳನ್ನು ಮೇಯಿಸುತ್ತಿದ್ದಾಗ ಕನ್ಯಾ ಮೇರಿ ಕಾಣಿಸಿಕೊಂಡರು. […]

DAKSHINA KANNADA HOME LATEST NEWS

ಕಡಬ: ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವು

ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿನ ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ ಅವರು ಕಡಬ ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಮೇ 8ರಂದು ಮಧ್ಯಾಹ್ನ ಅರ್ಪಿತಾ (15), ಸುನೀತಾ (21), ಅಕ್ಷತಾ ಹಾಗೂ ನೆಟ್ಟಣ ನಿವಾಸಿ ಶ್ರೇಯಾ ಸೇರಿದಂತೆ ಕೆಲವರು ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಸಂಜೆ ಸುಮಾರು 4.30ರ […]

HOME INETRNATIONAL LATEST NEWS

ಶಾರ್ಜಾದಲ್ಲಿ ಭೀಕರ ಅಪಘಾತ: ಮೂಡಬಿದ್ರೆ ಮೂಲದ 5 ವರ್ಷದ ಬಾಲಕಿ ಕೊನೆಯುಸಿರು

ಶಾರ್ಜಾ: ಶಾರ್ಜಾ- ದುಬೈ ಬಾರ್ಡರ್ ನ ಅನ್ಸಾರ್ ಮಾಲ್ ಬಳಿ ಭಾನುವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಶಿರ್ತಾಡಿ ಮೂಲದ ಬಾಲಕಿಯೋರ್ವಳು ಮೃತಪಟ್ಟಿದ್ದಾಳೆ. ಶಿರ್ತಾಡಿಯ ದಿ.ಟಿ.ಆಲಿಯಬ್ಬ ಅವರ ಪುತ್ರ ಹಕೀಮ್ ಎಂಬವರ ಪುತ್ರಿ ಫಾತಿಮಾ ಅನಿಹಾ (5) ಈ ಅಪಘಾತದಲ್ಲಿ ಮೃತಪಟ್ಟ ಬಾಲಕಿ.< ಹಕೀಮ್ ಅವರು ಶಾರ್ಜಾದಲ್ಲಿ ಉದ್ಯೋಗದಲ್ಲಿದ್ದು ಅವರ ಕುಟುಂಬ ಕೂಡಾ ಅಲ್ಲೇ ವಾಸವಾಗಿದ್ದಾರೆ. ಭಾನುವಾರ ಶಾಪಿಂಗ್ ಮುಗಿಸಿ ವಾಪಾಸ್ ಬಂದು ತಮ್ಮ ಕಾರಲ್ಲಿ ಕೂರಲು ಸಿದ್ಧರಾದಾಗ ಹಿಂದಿನಿಂದ ಬಂದ ಮತ್ತೊಂದು ಕಾರು […]

DAKSHINA KANNADA HOME LATEST NEWS

ಕರ್ನಾಟಕ-ಕೇರಳ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕೊಟ್ಟ ಮಾತು ಉಳಿಸಿದ ಶಾಸಕ ರೈ

ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಶೋಕ್ ರೈ ಕೂಡಾ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಅಶೋಕ್ ರೈ ಮಾತುಕೊಟ್ಟು ೨ ವರ್ಷದಲ್ಲೇ ಅದನ್ನು ಪೂರ್ಣಗೊಳಿಸಿದ್ದಾರೆ. ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ೨೦ ಕೋಟಿ ಅನುದಾನ ಮಂಜೂರಾಗಿದೆ. ಸಂಪರ್ಕ ಸೇತುವೆಯಾಗಲಿದೆ ಸಿರಿಯ […]

HOME LATEST NEWS

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್ ಮೆಲ್ವಿನ್ ಜೆ. ಪಿಂಟೋ ನಿಧನ

ಮಂಗಳೂರು: ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್, ಸೈಂಟ್ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿಯ ಉಪಾಧ್ಯಕ್ಷರಾಗಿದ್ದ ಮೆಲ್ವಿನ್ ಜೆ. ಪಿಂಟೋ ಅವರು ನಿಧನರಾಗಿದ್ದಾರೆ. ೧೯೬೩ರಲ್ಲಿ ಜನಿಸಿದ ಫಾದರ್ ಮೆಲ್ವಿನ್ ಪಿಂಟೋ ಅವರು ಸೇಂಟ್ ಅಲೋಶಿಯಸ್‌ನಲ್ಲಿ ತಮ್ಮ ಶಾಲಾ ಮತ್ತು ಕಾಲೇಜು ಶಿಕ್ಷಣವನ್ನು ಪೂರ್ಣಗೊಳಿಸಿದರು. 1981 ರಲ್ಲಿ ಜೆಸ್ಯೂಟ್ ಸಭೆಯನ್ನು ಸೇರಿದ ಇವರು, 1997 ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದಿದ್ದರು. ಇಂಗ್ಲಿಷ್‌ನಲ್ಲಿ ಎಂ.ಎ, ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸೈಕಾಲಜಿ ಮತ್ತು ಕೌನ್ಸೆಲಿಂಗ್‌ನಲ್ಲಿ […]

COMMUNITY NEWS DAKSHINA KANNADA HOME LATEST NEWS

ಮಂಗಳೂರು ಬಿಷಪ್ ಈಸ್ಟರ್ ಸಂದೇಶ: ಶಾಂತಿ ಮತ್ತು ಸಂಧಾನಕ್ಕೆ ಕರೆ

ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು 2026ರ ಈಸ್ಟರ್ ಹಬ್ಬದ ಸಂದರ್ಭದಲ್ಲಿ ನಾಡಿನ ಜನತೆಗೆ ಹಾಗೂ ಕ್ರೈಸ್ತ ಬಾಂಧವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಯೇಸು ಕ್ರಿಸ್ತರ ಪುನರುತ್ಥಾನವು ಕೇವಲ ಒಂದು ಐತಿಹಾಸಿಕ ಘಟನೆಯಲ್ಲ ಅದು ಜಗತ್ತಿಗೆ ಭರವಸೆ ಮತ್ತು ಶಾಂತಿಯ ಸಂಕೇತವಾಗಿದೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಜಗತ್ತಿನಾದ್ಯಂತ ಸಂಘರ್ಷ ಮತ್ತು ಹಿಂಸಾಚಾರಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಷಪ್ ಅವರು, ಇಂದಿನ ಅಶಾಂತಿಯ ವಾತಾವರಣಕ್ಕೆ ಕ್ರಿಸ್ತರ ಪುನರುತ್ಥಾನದ […]