Tag: canaratvnews

DAKSHINA KANNADA HOME LATEST NEWS

ಬಿಜೆಪಿ ಮಂ.ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು […]

COMMUNITY NEWS HOME LATEST NEWS

ಬಿಕರ್ನಕಟ್ಟೆಯಲ್ಲಿ ಏ.15 ರಿಂದ ನಿರಂತರ 40 ಗಂಟೆಗಳ ಆರಾಧನ ಸ್ತುತಿ

ಮಂಗಳೂರು: ಬಾಲಯೇಸುವಿನ ಪುಣ್ಯಕ್ಷೇತ್ರ ಬಿಕರ್ನಕಟ್ಟೆಯಲ್ಲಿ ಏ.15 ರಿಂದ ನಿರಂತರ 40 ಗಂಟೆಗಳ ಆರಾಧನ ಸ್ತುತಿ ಏರ್ಪಡಿಸಲಾಗಿದೆ. ಈ ಆರಾಧನ ಸ್ತುತಿಯು ಏ.15 ರಂದು ಮುಂಜಾನೆ 6 ಗಂಟೆಗೆ ಪವಿತ್ರ ಬಲಿಪೂಜೆಯ ಮೂಲಕ ಆರಂಭಗೊಳ್ಳಲಿದೆ. ನಂತರ 40 ಗಂಟೆಗಳ ನಿರಂತರ ಆರಾಧನ ಸ್ತುತಿ ನಡೆಯಲಿದೆ. ಇದರಲ್ಲಿ ಪೊಲೀಸ್‌ ಹಾಗೂ ಸೈನಿಕರಿಗಾಗಿ, ಶಿಕ್ಷಕರು, ದಿವ್ಯಾಂಗರು, ನನ ವಿವಾಹಿತ ಜೋಡಿ, ರೈತರು ಹೀಗೆ ಹತ್ತುವ ಹಲವರಿಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ. ಈ ಆರಾಧನೆಯ ವಿಶೇಷತೆ ಎಂದರೆ ಮಕ್ಕಳಿಂದ ಆರಾಧನೆ, ಗುಮ್ಟಾ ಹಾಗೂ […]

DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ

ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್‌ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಏ.29 ರಂದು ಬೃಹತ್‌ ಪ್ರತಿಭಟನೆ

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್‌ ಕಣ್ಣೂರಿನಲ್ಲಿ ಎ.29ರಂದು ಬೃಹತ್‌ ಪ್ರತಿಭಟನೆ ನಡೆಯಲಿದೆ. ಅಂದು ಸಂಜೆ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿ ಕೊಳ್ಳಲಾಗಿದೆ.ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಪ್ರತಿಭಟನೆಯಲ್ಲಿ ದ.ಕ- ಉಡುಪಿ ಜಿಲ್ಲೆಯ ಲಕ್ಷಾಂತರ ಜನರ ಜೊತೆಗೆ […]

DAKSHINA KANNADA HOME LATEST NEWS

ಈ ವಷ೯ದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು: DCM ಡಿಕೆಶಿ

ಮಂಗಳೂರು: ಈ ವಷ೯ದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಅವರು ಶನಿವಾರ ಮೂಳೂರು ಅಡ್ಡೂರು ಜೋಡುಕೆರೆ ಕಂಬಳ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುವುದು. ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ ಕ್ರೀಡೆಗೆ ಶಾಶ್ವತ ಪ್ರೋತ್ಸಾಹ ನೀಡಲು ಸರಕಾರ ನಿಧ೯ರಿಸಿದೆ ಎಂದು ಅವರು ಹೇಳಿದರು. ಕಂಬಳದ ಕೋಣಗಳನ್ನು ಸಾಕಿ, ಅದರೊಂದಿಗೆ ತೋರಿಸುವ ಪ್ರೀತಿ ಅನನ್ಯವಾದದ್ದು. ಜನಪದ ಸಂಸ್ಕೃತಿ ಉಳಿಸಲು ಸರಕಾರ ಸದಾ ನೆರವು ನೀಡಲಿದೆ ಎಂದು […]

DAKSHINA KANNADA HOME LATEST NEWS

ಮಂಗಳೂರು: ಶಿವಭಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ ಮಾಡುವ ಕನಸಿಗೆ ರೋಹನ್ ಮೊಂತೇರೊ ನಿದರ್ಶನ. ಅವರ ಎಲ್ಲ ಕನಸುಗಳೂ ನನಸಾಗಲಿ ಎಂದು ಆಶೀರ್ವಚನ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ […]

DAKSHINA KANNADA HOME LATEST NEWS STATE UDUPI

ಉಡುಪಿ-ಮಂಗಳೂರು ಮೆಟ್ರೊ ರೈಲು ಯೋಜನೆ ವರದಿಗೆ ಸೂಚನೆ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ. ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ […]

COMMUNITY NEWS DAKSHINA KANNADA HOME LATEST NEWS

ಪೆಜಾರ್ ಸಂತ ಜೋಸಫ್‌ ಚರ್ಚ್‌ನಲ್ಲಿ ಏ.15ರಂದು 241 ನೇ “ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ”

ಮಂಗಳೂರು: ಪ್ರಭು ಏಸುವಿನ ಜನನದ ಜುಬಿಲಿ ವರ್ಷದ ಪ್ರಯುಕ್ತ ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ಕಳವಾರು ಪೆಜಾರ್ ಸಂತ ಜೋಸಫರಿಗೆ ಸಮರ್ಪಿಸಿದ ಚರ್ಚಿನಲ್ಲಿ ಈ ಬಾರಿ 241 ನೇ ಚಾರಿತ್ರಿಕ ಪವಿತ್ರ ಶಿಲುಬೆಯ ಹಾದಿ ಏ.15 ರಂದು ನಡೆಯಲಿದೆ ಎಂದು ಚರ್ಚ್‌ನ ಧರ್ಮಗುರು ವಂ.ಲಾರೆನ್ಸ್‌ ರೊನಾಲ್ಡ್‌ ಡಿಸೋಜ ಅವರು ತಿಳಿಸಿದರು. ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ಮಾಹಿತಿ ನೀಡಿದ ಅವರು, 240 ವರ್ಷಗಳ ಹಿಂದೆ ಬೂದಿ ಬುಧವಾರ (ash wednesday) ದಂದು ಪ್ರಾರಂಭಗೊಂಡು ನಿರಂತರವಾಗಿ ನಡೆಯುತ್ತಾ ಬಂದ ಪವಿತ್ರ […]

DAKSHINA KANNADA HOME LATEST NEWS

ಯೂಟ್ಯೂಬರ್‌ ಎಂ.ಡಿ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ಮೊಕದ್ದಮೆ

ಬೆಂಗಳೂರು: ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಸಂಬಂಧ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ […]

DAKSHINA KANNADA HOME LATEST NEWS

ಎ.15ರಂದು ಮಂಗಳೂರಿನ ಹಲವೆಡೆ ವಿದ್ಯುತ್ ನಿಲುಗಡೆ

ಮಂಗಳೂರು: ನಗರದ ಅತ್ತಾವರ ಉಪಕೇಂದ್ರದಿಂದ ಹೊರಡುವ ಎವರಿ ಜಂಕ್ಷನ್ ಫೀಡರ್ ವ್ಯಾಪ್ತಿಯಲ್ಲಿ ಎ.15ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ. ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಈ ಫೀಡರ್‌ನಲ್ಲಿ ಮಾದರಿ ಉಪವಿಭಾಗದ ಯೋಜನೆಯಡಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹಾಗಾಗಿ ಬಲ್ಮಠ ನ್ಯೂರೋಡ್, ಸ್ಟರಕ್ ರೋಡ್, ಮೋತಿಮಹಲ್, ಎವರಿ ಜಂಕ್ಷನ್, ಅಥೆನಾ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ. ಉರ್ವಮಾರ್ಕೆಟ್, ಹೊಯ್ಗೆಬೈಲ್ ನಗರದ ಉರ್ವಮಾರ್ಕೆಟ್ ಉಪಕೇಂದ್ರದಿಂದ ಹೊರಡುವ ಹೊಯ್ಗೆಬೈಲ್ ಫೀಡರ್ ವ್ಯಾಪ್ತಿಯಲ್ಲಿ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678