Tag: canaratvnews

DAKSHINA KANNADA HOME LATEST NEWS

ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಕಮೆಂಟ್‌: ವಿಟ್ಲದಲ್ಲಿ ಓರ್ವನ ಬಂಧನ

ವಿಟ್ಲ: ಫೇಸ್ ಬುಕ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೋಲೀಸರು ಬಂಧಿಸಿದ್ದಾರೆ. ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ.ಎ ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿದ್ದ ಬಗ್ಗೆ ವಿಟ್ಲ ಠಾಣೆಯಲ್ಲಿ 2025 ರಲ್ಲಿ ಅ.ಕ್ರ: 131/2025, ಕಲಂ: 353(2) BNS 20233ರಂತೆ ಪ್ರಕರಣ ದಾಖಲಾಗಿದೆ.

HOME LATEST NEWS

ವಿಟ್ಲದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ-ವಿದ್ಯುತ್ ಕಂಬ

ವಿಟ್ಲ: ಇಲ್ಲಿನ ಪಡೀಬಾಗಿಲು ಸಮೀಪ ಚಲಿಸುತ್ತಿದ್ದ ಸ್ವಿಫ್ಟ್ ಕಾರೊಂದರ ಮೇಲೆ ಮರ ಹಾಗೂ ವಿದ್ಯುತ್ ಕಂಬ ಉರುಳಿ ಬಿದ್ದ ಭೀಕರ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಪಡೀಬಾಗಿಲು ತಲುಪುತ್ತಿದ್ದಂತೆ ಪಕ್ಕದಲ್ಲಿದ್ದ ದೊಡ್ಡ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಪರಿಣಾಮ ಮರ ಮತ್ತು ವಿದ್ಯುತ್ ಕಂಬ ಎರಡೂ ನೇರವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಅಪ್ಪಳಿಸಿವೆ. ಘಟನೆಯ ಸಮಯದಲ್ಲಿ ಕಾರಿನಲ್ಲಿ ಗಂಡ-ಹೆಂಡತಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. […]

DAKSHINA KANNADA HOME LATEST NEWS

ಅಳಿಕೆ ಗ್ರಾಮದ 2.07 ಕೋಟಿಯ ವಿವಿಧ ಕಾಮಗಾರಿ ಶಂಕುಸ್ಥಾಪನೆಗೈದ ಶಾಸಕ ಅಶೋಕ್‌ ರೈ

ವಿಟ್ಲ: ಬಂಟ್ವಾಳ ತಾಲೂಕಿನ ಪುತ್ತೂರು ವಿಧಾನಸಭಾ ಕ್ಷೇತ್ರದ ಅಳಿಕೆ ಗ್ರಾಮದ ಒಟ್ಟು 22 ಕಾಮಗಾರಿಗಳಿಗೆ ಪುತ್ತೂರು ಶಾಸಕ ಅಶೋಕ್‌ ರೈ  ಶಂಕುಸ್ಥಾಪನೆ ಮಾಡಿದರು. ಅದೇ ರೀತಿ 2.45 ಲಕ್ಷ ರೂ. ಅನುದಾನದ ಕಾಮಾಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ಅಳಿಕೆ ಗ್ರಾಮದ ನಿಕಟಪೂರ್ವ ಅಧ್ಯಕ್ಷ ಹಾಗೂ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಎಸ್‌.ಎಸ್‌. ಮಹಮ್ಮದ್‌, ಡಾ.ರಾಜಾರಾಮ್‌  ಸೇರಿ ಹಲವು ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು. ಅಳಿಕೆ ಗ್ರಾಮದ ಕಾನತ್ತಡ್ಕ- ಗೋಳಿದಡಿ ರಸ್ತೆ ಅಭಿವೃದ್ದಿಗೆ 10 ಲಕ್ಣ ಅನುದಾನ […]

DAKSHINA KANNADA HOME LATEST NEWS NATIONAL

ಮಂಗಳೂರಿನಲ್ಲಿ ಆನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್: ರೋಹನ್ ಕಾರ್ಪೊರೇಶನ್ ‘ರೋಹನ್ ಮರೀನಾ ವನ್’ ಅನಾವರಣ

ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ “ಆನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್” ಎಂಬ ವಿಶೇಷ ಕಾರ್ಯಕ್ರಮ ಅದ್ದೂರಿಯಾಗಿ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಗುರುವಾರ ಸಂಜೆ ನಡೆಯಿತು. ಈ ಸಮಾರಂಭದಲ್ಲಿ ರೋಹನ್ ಕಾರ್ಪೊರೇಶನ್ ಐಷಾರಾಮಿ ಸಮುದ್ರತೀರ ವಸತಿ ಯೋಜನೆಯಾದ “ರೋಹನ್ ಮರೀನಾ ವನ್’ ಅನ್ನು ನಟ ಶಾರುಖ್ ಅನಾವರಣಗೊಳಿಸಿದರು. ನಂತರ ಮಾತನಾಡಿ ಮಂಗಳೂರು ನಗರದ ಆತಿಥ್ಯ, ಸಂಸ್ಕೃತಿ ಹಾಗೂ ವೇಗವಾಗಿ ಬೆಳೆಯುತ್ತಿರುವ ಅಭಿವೃದ್ಧಿಯನ್ನು ಶ್ಲಾಘಿಸಿದರು. ಜೊತೆಗೆ ರೋಹನ್‌ ಮರಿನಾ ಒನ್‌ ಉತ್ತಮ ರೀತಿಯಲ್ಲಿ ನಿರ್ಮಾಣಗೊಂಡಿದ್ದು, ಎಲ್ಲಾ ಸೌಕರ್ಯಗಳೊಂದಿಗೆ ಆಕರ್ಷಕವಾಗಿದೆ […]

DAKSHINA KANNADA HOME LATEST NEWS

ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ- FIR

ಬೆಳ್ತಂಗಡಿ: ಇಲ್ಲಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಇಬ್ಬರು ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ಅಪ್ರಾಪ್ತೆಯ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ವಿವರ 2023ರಲ್ಲಿ ಬೆಳ್ತಂಗಡಿಯಲ್ಲಿರುವ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಅಪ್ರಾಪ್ತ ಬಾಲಕಿಯನ್ನು ಆಕೆಯ ಸಂಬಂಧಿ ಅಪ್ರಾಪ್ತ ಹಾಗೂ ಆತನ ಸ್ನೇಹಿತ ಕರೆದುಕೊಂಡು ಹೋಗಿದ್ದರು. ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಾಲಕಿಗೆ ಜೀವಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ […]

DAKSHINA KANNADA HOME LATEST NEWS

ಸುರತ್ಕಲ್‌ನಲ್ಲಿ ಅಪ್ರಾಪ್ತೆ ಗರ್ಭಿಣಿ ಡೆತ್‌ನೋಟ್‌ ಬರೆದಿಟ್ಟು ಸಾವು- ಆರೋಪಿ ಅನೀಶ್‌ಗಾಗಿ ಶೋಧ

ಮಂಗಳೂರು: ಪ್ರೀತಿಯ ಹೆಸರಿನಲ್ಲಿ ವಂಚನೆ ಹಾಗೂ ದೈಹಿಕ ಶೋಷಣೆಗೆ ಒಳಗಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ  ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಸೇರಿದಂತೆ ಗಂಭೀರ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಗಂಭೀರ ಆರೋಪ ಮೃತ ಬಾಲಕಿ ಏಪ್ರಿಲ್ 23 ರಂದು ಸಂಜೆ ಸುಮಾರು 4 ಗಂಟೆಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ […]

HOME LATEST NEWS

ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್‌ನ ಯೋಜನೆಗಳಿಗೆ ಸಹಾಯರ್ಥವಾಗಿ ಸಂಗೀತ ರಸಮಂಜರಿ

ಮಂಗಳೂರು:  2009 ರಲ್ಲಿ ಆರಂಭವಾದಾಗಿನಿಂದ, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಮಂಗಳೂರಿನಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ರಕ್ಷಿಸಿ , ಆರೈಕೆ ಮಾಡಿ, ಗುಣಪಡಿಸಿ, ಪುನರ್ವಸತಿ ಕಲ್ಪಿಸುವ ಮೂಲಕ ಅವರಿಗೆ ಹೊಸ ಜೀವನವನ್ನು ನೀಡುವ ಕಾಯಕಕ್ಕೆ ಸಮರ್ಪಿತವಾಗಿದೆ. ಕಳೆದ 17 ವರ್ಷಗಳಲ್ಲಿ, ಸಂಸ್ಥೆಯು 1,800 ಕ್ಕೂ ಹೆಚ್ಚು ರೋಗಿಗಳನ್ನು ಗುಣಪಡಿಸಿ ಮತ್ತು ಅವರ ಕುಟುಂಬಗಳಿಗೆ ಮರಳಿ ಮತ್ತೆ ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದೆ.   ಅವರು ನಡೆಸುತ್ತಿರುವ ಯೋಜನೆಗಳು, ಮೂಲಸೌಕರ್ಯ ಅಗತ್ಯಗಳು, ದೈನಂದಿನ ವೈದ್ಯಕೀಯ ಸರಬರಾಜುಗಳು ಮತ್ತು ವಿವಿಧ ಸಮುದಾಯ ಸಂಭಂದಿ […]

DAKSHINA KANNADA HOME LATEST NEWS

ಜೂ.28ರಂದು ಮಂಗಳೂರಿನಲ್ಲಿ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮ

ಮಂಗಳೂರು: ಮಂಗಳೂರು IAS, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ “ಮಾರ್ಗದರ್ಶಿ – Cracking the UPSC Examination” ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು 2026ರ ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ನಾಗರಿಕ ಸೇವಾ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು, ಪದವಿ ಹಾಗೂ ಸ್ನಾತಕೋತ್ತರ […]

DAKSHINA KANNADA HOME LATEST NEWS

ನಾಳೆ ಮಂಗಳೂರಿಗೆ ಕಿಂಗ್ ಖಾನ್: ರೋಹನ್ ಕಾರ್ಪೊರೇಶನ್‌ನ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಭಾಗಿ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ […]

LATEST NEWS

ಸೇಂಟ್ ಥೆರೆಸಾ ಶಾಲೆಯಿಂದ ಕಿಂಡರ್‌ಗಾರ್ಟನ್ ಪೋಷಕರಿಗಾಗಿ ದೃಷ್ಟಿಕೋನ ಕಾರ್ಯಕ್ರಮ

ಮಂಗಳೂರು: ಸೇಂಟ್ ಥೆರೆಸಾ ಶಾಲೆಯು ಕಿಂಡರ್‌ಗಾರ್ಟನ್ ವಿದ್ಯಾರ್ಥಿಗಳ ಪೋಷಕರಿಗಾಗಿ 2026ರ ಜೂನ್ 20ರಂದು ಶಾಲೆಯ ಮೊನ್ಸಿಜ್ಞೊರ್ ರೇಮಂಡ್ ಸಭಾಂಗಣದಲ್ಲಿ ದೃಷ್ಟಿಕೋನ ಕಾರ್ಯಕ್ರಮವನ್ನು (ಓರಿಯಂಟೇಶನ್ ಪ್ರೋಗ್ರಾಂ) ಯಶಸ್ವಿಯಾಗಿ ಹಮ್ಮಿಕೊಂಡಿತ್ತು. ಇದು ಎಳೆಯ ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಾಲೆ ಮತ್ತು ಪೋಷಕರ ನಡುವಿನ ಫಲಪ್ರದ ಪಾಲುದಾರಿಕೆಯ ಆರಂಭವನ್ನು ಸೂಚಿಸಿತು. ಕಾರ್ಯಕ್ರಮವು ಪ್ರಿಯಾ ಮತ್ತು ಜೆಸ್ನಿ ಅವರ ನೇತೃತ್ವದಲ್ಲಿ ದೇವರ ಆಶೀರ್ವಾದವನ್ನು ಕೋರುವ ಪ್ರಾರ್ಥನಾ ಸೇವೆಯೊಂದಿಗೆ ಪ್ರಾರಂಭವಾಯಿತು. ಲಿಡ್ವಿನ್ ಅವರು ನೆರೆದಿದ್ದ ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಮತ್ತು ಶ್ರೀಮತಿ ಸೀಮಾ ಅವರು […]