Tag: canaratvnews

HOME LATEST NEWS STATE

ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ- ಬಜರಂಗದಳದ ಐವರ ಬಂಧನ

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಬಂಧಿತರನ್ನು […]

DAKSHINA KANNADA HOME LATEST NEWS

ಸುಳ್ಯ : ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಸುಳ್ಯ : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ […]

HOME

MCC ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಡಿ.೪ ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ […]

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

COMMUNITY NEWS HOME STATE

ಕಥೋಲಿಕ್ ಚರ್ಚ್‌ಗಳಲ್ಲಿ ಬ್ರ. ಸಜಿತ್ ಜೋಸೆಫ್‌ಗೆ ನಿಷೇಧ: ಭಾರೀ ಪರ- ವಿರೋಧ ಚರ್ಚೆ

ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಸುದ್ದಿ ಮಾಡಿ,  ತನ್ನ ವಿಶೇಷ ಬೋಧನೆಯಿಂದ ಸಾವಿರಾರು ಭಕ್ತರನ್ನು ಒಂದೆಡೆ ಸೇರಿಸುವ ಮೂಲಕ ಖ್ಯಾತಿ ಪಡೆದಿದ್ದ ಕೇರಳ ಮೂಲದ ಸಜಿತ್ ಜೋಸೆಫ್ ಅವರನ್ನು ಕೇರಳದ ಸಿರಿಯನ್ ಕೆಥೋಲಿಕ್ ಮಲಬಾರ್ ಚರ್ಚ್ ಆಡಳಿತವು ದಿಢೀ‌ರ್ ಆಗಿ ಬೋಧಕ ಸ್ಥಾನದಿಂದ ತೆರವು ಮಾಡಿದ್ದು ಆತನನ್ನು ಯಾವುದೇ ಚರ್ಚ್ ಗಳಲ್ಲಿ ಪ್ರಾರ್ಥನೆಗೆ ಬಳಸಿಕೊಳ್ಳದಂತೆ ನಿಷೇಧ ವಿಧಿಸಿದೆ. ಜೊತೆಗೆ ಕರ್ನಾಟಕದಲ್ಲೂ ಕಥೋಲಿಕ ಕ್ರೈಸ್ತರ ಚರ್ಚ್‌ಗಳಲ್ಲಿ ಆತನಿಗೆ ನಿಷೇಧ ಹೇರಿದ್ದಾರೆ. ಸಿರಿಯನ್ ಕೆಥೋಲಿಕ್ […]

DAKSHINA KANNADA HOME

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ “ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು […]

DAKSHINA KANNADA HOME LATEST NEWS

ಮಂಗಳೂರು:  ಆ. 31ರಂದು ಕಲ್ಲಚ್ಚು ಪ್ರಶಸ್ತಿ ಪ್ರದಾನ

ಮಂಗಳೂರು:  ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ” ಕಲ್ಲಚ್ಚು ಪ್ರಕಾಶನದ” 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ. ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಮ್ ಶಿವಪ್ರಕಾಶ್, ಜಬೀವುಲ್ಲಾ ಎಂ […]

DAKSHINA KANNADA HOME LATEST NEWS

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಶುಭಾರಂಭ

ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.   ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು […]

DAKSHINA KANNADA HOME

ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿಟಿ ಬಸ್ ಗೆ ಚಾಲನೆ ಬೇಡ: ಅಶೋಕ್ ರೈ

ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ ನಿಗಮದ ಡಿ ಸಿ ಅಮಲಿಂಗಯ್ಯ ಹೊಸಪೂಜಾರಿಯವರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿ ಜೊತೆ ಚರ್ಚೆ ನಡೆಸಿದ ಶಾಸಕರು ಪುತ್ತೂರು ಕೆಎಸ್ ಆರ್ ಟಿಸಿ ವಿಭಾಗದಲ್ಲಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ […]

DAKSHINA KANNADA HOME LATEST NEWS

ಮಂಗಳೂರು: ಟ್ರಾಫಿಕ್‌ ಫೈನ್‌ ಮೇಲೆ 50% ರಿಯಾಯಿತಿ- ಸೆ.12ರವರೆಗೆ ಮಾತ್ರ

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದ ವಾಹನಿಗರಿಗೆ ಪ್ರಕರಣಗಳ ಇತ್ಯರ್ಥ ಪಡಿಸಿಕೊಳ್ಳುವುದಕ್ಕಾಗಿ ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಲು ಆ.23ರಿಂದ ಸೆ.12ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ (ಎಎಸ್‌ಐ-ಪಿಐ ಡಿವೈಸ್) ಲಾಲ್‌ಬಾಗ್‌ನಲ್ಲಿರುವ ಮನಪಾ ಕಮಾಂಡ್ ಕಂಟ್ರೋಲ್ ಸೆಂಟರ್‌ಗಳಲ್ಲಿ ಪಾವತಿಸಬಹುದು. ಉಳಿದಂತೆ ಕದ್ರಿಯ ಪೂರ್ವ ಸಂಚಾರ ಠಾಣೆ, ಪಾಂಡೇಶ್ವರದ ಪಶ್ಚಿಮ ಸಂಚಾರ ಠಾಣೆ, ಬೈಕಂಪಾಡಿಯ ಮಂಗಳೂರು ಉತ್ತರ ಠಾಣೆ, ಜಪ್ಪಿನಮೊಗರಿನ ದಕ್ಷಿಣ ಸಂಚಾರ ಠಾಣೆ […]