Tag: canaratvnews

DAKSHINA KANNADA HOME LATEST NEWS

ಮಂಗಳೂರು: ಸಿಇಟಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ – 2025, ಏಪ್ರಿಲ್ 16 ಮತ್ತು 17ರಂದು ನಡೆಯಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತಿಯುತವಾಗಿ ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. […]

HOME LATEST NEWS STATE

ಗಣಿ ಗುತ್ತಿಗೆ ನವೀಕರಣ : ಗೊಂದಲ ಸೃಷ್ಟಿಸುವ ಯತ್ನ-ಸಿಎಂ

ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಪತ್ರಿಕಾ ಹೇಳಿಕೆ ವಿವರ ಹೀಗಿದೆ. 2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 […]

DAKSHINA KANNADA HOME LATEST NEWS STATE

ಕೇಂದ್ರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ: MLC ಮಂಜುನಾಥ ಭಂಡಾರಿ

ಮಂಗಳೂರು: ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್ರತಿಭಟನೆ ಬಿಡಿ, ಕೇಂದ್ರ ನಾಯಕರ ವಿರುದ್ಧ ಉಸಿರೆತ್ತುವ ತಾಕತ್ತು ಇಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಲೇವಡಿ ಮಾಡಿದರು. ಕೇಂದ್ರ ಸರಕಾರ ಅಡುಗೆ ಸಿಲಿಂಡರ್ ದರವನ್ನು 50ರೂ. ಏರಿಕೆ ಮಾಡಿದೆ. ಭರವಸೆಗಳ ಸುರಿಮಳೆಯನ್ನೇ ಸುರಿಸಿ […]

DAKSHINA KANNADA HOME LATEST NEWS

ಎ. 11 ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು:   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಎ. 11 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ  2:55 – ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:30 – ಉಳ್ಳಾಲ ದರ್ಗಾ ಆವರಣದಲ್ಲಿ  ಉಳ್ಳಾಲ ದರ್ಗಾ  ಉರೂಸ್ ಕುರಿತು ಪೂರ್ವಭಾವಿ ಸಭೆ. ಸಂಜೆ 4:30 –  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ನೂತನ ಶವಗಾರ ಕಟ್ಟಡ,  […]

DAKSHINA KANNADA HOME LATEST NEWS

ಕರಿಮಣ ಸರ ಕಳವುಗೈದ ಪ್ರಕರಣ: ಆರೋಪಿ ಬಂಧನ

ಮಂಗಳೂರು:  ತಾಲೂಕಿನ  ಬೆಳುವಾಯಿಯಲ್ಲಿ ಮಾ.31ರಂದು ಮಹಿಳೆಯೊಬ್ಬರ ಕುತ್ತಿಗೆಯಿಂದ   ಚಿನ್ನದ ಕರಿಮಣ ಸರ ಕಳವುಗೈದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು  ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕಾಂತಾವರದ ಕಂದಿಲ ನಿವಾಸಿ  ಆರೋಪಿ ಪ್ರಶಾಂತ್ ಸಾಲಿಯನ್   ಯಾನೆ ಪಚ್ಚು (34) ಬಂಧಿತ ಆರೋಪಿ.   ಆರೋಪಿ  ಕೈಯಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಬೈಕನ್ನು   ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೈಯಿಂದ  ವಶಪಡಿಸಿಕೊಂಡ  ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000 ರೂ.  ಆಗಬಹುದು […]

HOME INETRNATIONAL LATEST NEWS NATIONAL

ಭಾರತಕ್ಕೆ ಬಂದಿಳಿದ ದುಬೈ ಯುವರಾಜ: ಪ್ರಧಾನಿ ಮೋದಿ ಭೇಟಿ

ಹೊಸದಿಲ್ಲಿ: ದುಬೈನ ಯುವರಾಜ ಹಮ್ದಾನ್ ಬಿನ್ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರು ಮಂಗಳವಾರ ತಮ್ಮ ಮೊದಲ ಅಧಿಕೃತ ಭೇಟಿಗಾಗಿ ಹೊಸದಿಲ್ಲಿಗೆ ಆಗಮಿಸಿದ್ದು, ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದಿಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ದುಬೈ ಯುವರಾಜ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರನ್ನು ಕೇಂದ್ರ ಪ್ರವಾಸೋದ್ಯಮ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ಸ್ವಾಗತಿಸಿದರು. ಬಳಿಕ ದುಬೈ ಯುವರಾಜನಿಗೆ ವಿದ್ಯುಕ್ತವಾಗಿ ಸರಕಾರಿ ಗೌರವವನ್ನು ನೀಡಲಾಗಿದೆ.  […]

HOME LATEST NEWS STATE

PUC ಫಲಿತಾಂಶ ಪ್ರಕಟ: ಉಡುಪಿ ಪ್ರಥಮ-ವಿದ್ಯಾರ್ಥಿನಿಯರದ್ದೇ ಮೇಲುಗೈ

ಬೆಂಗಳೂರು : 2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ.73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. ಈ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾವರು ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ […]

DAKSHINA KANNADA HOME LATEST NEWS

ಮಹೇಶ್ ಭಟ್ ವಿರುದ್ಧ ಸ್ವಪಕ್ಷದಿಂದಲೇ ನಡೆಯಿತಾ ಷಡ್ಯಂತ್ರ? ಆತನ ಆಪ್ತರಿಂದಲೇ ಸ್ಪೋಟಕ ಮಾಹಿತಿ!

ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ಅಪ್ರಾಪ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಮಹೇಶ್ ಭಟ್ ಗೆ ಜಾಮೀನು ಮಂಜೂರಾಗಿದೆ. ಕದ್ದುಮುಚ್ಚಿ ಓಡಾಡುತ್ತಿದ್ದ ಭಟ್ ಜಾಮೀನು ಮಂಜೂರಾಗುತ್ತಿದ್ದಂತೆ ಊರಲ್ಲಿ ಮತ್ತೆ ಪ್ರತ್ಯಕ್ಷವಾಗಿದ್ದಾನೆ. ಈ ನಡುವೆ ಮಹೇಶ್ ಭಟ್ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎನ್ನುವ ಚರ್ಚೆಗಳು ಆತನ ಆಪ್ತ ವಲಯದಿಂದಲೇ ಕೇಳಿಬಂದಿದೆ. ರಾಜಕೀಯವಾಗಿ ಮುನ್ನಲೆಗೆ ಬರುತ್ತಿರುವ ಮಹೇಶ್ ಭಟ್ ವಿರುದ್ಧ ಸ್ಥಳೀಯ ನಾಯಕರೇ ಷಡ್ಯಂತ್ರ ಮಾಡಿದ್ದಾರೆ ಎಂಬ ಮಾತು ವಿಟ್ಲದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದಲಿತ ಬಾಲಕಿಯನ್ನು ಮುಂದಿಟ್ಟುಕೊಂಡು ಅವರದ್ದೇ ಪಕ್ಷದವರು […]

HOME INETRNATIONAL LATEST NEWS

ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ಸ್ಥಗಿತಗೊಳಿಸಿದ ಸೌದಿ ಅರೇಬಿಯಾ

ರಿಯಾದ್: ಸೌದಿ ಅರೇಬಿಯಾವು ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್ ಯಾತ್ರೆ ಹಿನ್ನೆಲೆ ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸೌದಿ ಸರ್ಕಾರ ತಿಳಿಸಿದೆ. ಈ ನಿಷೇಧವು ಹಜ್ ಯಾತ್ರೆಯು ಮುಕ್ತಾಯಗೊಳ್ಳುವವರೆಗೆ ಅಂದರೆ ಜೂನ್ ಮಧ್ಯದವರೆಗೆ ನಿಷೇಧವು ಜಾರಿಯಲ್ಲಿರಲಿದೆ. ಸೌದಿ ಅರೇಬಿಯಾ ಉಮ್ರಾ, ವ್ಯಾಪಾರ ಮತ್ತು ಕೌಟುಂಬಿಕ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ನೋಂದಣಿ ಇಲ್ಲದ ವ್ಯಕ್ತಿಗಳು ಹಜ್ ನಿರ್ವಹಿಸಲು ಪ್ರಯತ್ನಿಸುವುದನ್ನು ತಡೆಯಲು, ಜನಸಂದಣಿಯನ್ನು ನಿಯಂತ್ರಿಸಲು, […]

HOME LATEST NEWS NATIONAL STATE

ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ವಿಮಾನ ಯಾನ ಖಾತೆ ಸಚಿವರ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಪತ್ರದ ವಿವರ ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678