Tag: canaratvnews

DAKSHINA KANNADA HOME LATEST NEWS STATE

ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಂಗಳವಾರ ರಾತ್ರಿ […]

DAKSHINA KANNADA HOME LATEST NEWS STATE

ವಿವಾದಾತ್ಮಕ ಭಾಷಣ: ಪೊಲೀಸ್‌ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಚುನಾವಣೆ ವೇಳೆ ಮಾಡಿದ್ದ ವಿವಾದಾತ್ಮಕ ಭಾಷಣ ಸಂಬಂಧ ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ಬಂಟ್ವಾಳ ಠಾಣಾ ಪೊಲೀಸರು ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. 2018ರ ವಿಧಾನಸಭಾ ಚುನಾವಣೆ ವೇಳೆ ಬಂಟ್ವಾಳದ ಕಲಡ್ಕದಲ್ಲಿ ರಾಜೇಶ್ ನಾಯ್ಕ್ ಪರ ಚುನಾವಣಾ ಪ್ರಚಾರ ನಡೆಸುವ ಸಂದರ್ಭದಲ್ಲಿ ಸುನಿಲ್ ಕುಮಾರ್, ‘ರಾಮ ಬೇಕೋ, ಅಲ್ಲಾ ಬೇಕೋ? ಎಂದು ಪ್ರಶ್ನೆ ಮಾಡಿದ್ದರು. ಈ ಕುರಿತು ಎಫ್‌ಐಆರ್ ದಾಖಲಾಗಿತ್ತು.   ಈ ಬಗ್ಗೆ ತನಿಖೆ ನಡೆಸಿದ ಬಂಟ್ವಾಳ […]

HOME LATEST NEWS

ಅಸೈಗೋಳಿಯ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

ಮಂಗಳೂರು: ಮಂಗಳೂರಿನ ಹೊರವಲಯದ ಅಸೈಗೋಳಿಯಲ್ಲಿರುವ ಕ್ಸೇವಿಯರ್ ಕೈಗಾರಿಕಾ ತರಬೇತಿ ಸಂಸ್ಥೆಯ ಲ್ಲಿ ಜೂ. 9ರಂದು ಸೋಮವಾರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಕ್ಸೇವಿಯರ್ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಂಡಿಯನ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಮುರಳಿ ಅವರು, ಮಕ್ಕಳು ಮುಂದಿನ ಭವಿಷ್ಯದಲ್ಲಿ ಸಮಾಜದಲ್ಲಿ ಜೀವಿಸುವಾಗ ಜೀವನವನ್ನು ಹೇಗೆ ರೂಪಿಸಬೇಕು? ಹೆತ್ತವರಿಗೆ ಹಾಗೂ ಸಮಾಜಕ್ಕೆ ಹೇಗೆ ಮಾದರಿಯಾಗಿ ಬಾಳಬೇಕು ಮತ್ತು ವಿದ್ಯಾಭ್ಯಾಸದ ನಂತರ ಉದ್ಯೋಗವನ್ನು ಪಡೆಯುವುದರ […]

DAKSHINA KANNADA HOME LATEST NEWS

ಕಡಬ: ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಮ್ಮ- ನರಳಾಡಿ ಪ್ರಾಣ ಬಿಟ್ಟ ಅಣ್ಣ

ಕಡಬ: ಕೌಟುಂಬಿಕ ಕಲಹದಲ್ಲಿ ಸ್ವಂತ ಅಣ್ಣನನ್ನೇ ತಮ್ಮನೊಬ್ಬ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಜಕರೆ ಬಳಿ ರೈಲ್ವೇ ಟ್ರಾಕ್ ನಲ್ಲಿ ನಡೆದಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ತಮ್ಮನನ್ನು ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆತನ ತಮ್ಮ ನಿಂಗಪ್ಪ (21) […]

DAKSHINA KANNADA HOME LATEST NEWS

ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರಿಂದ ದಾಳಿ

ವಿಟ್ಲ: ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿದ್ದಾಗ ವಿಟ್ಲ ಪೊಲೀಸರು ದಿಢೀರ್‌ ಪೊಲೀಸ್‌ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಳಿ ಸಮೇತ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿರುವ ಪೊಲೀಸರು, ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಹರೆಬೆಟ್ಟು ಎಂಬ ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಈ ವೇಳೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಮರೆಯಲ್ಲಿ ನಿಂತು ಗಮನಿಸಿದಾಗ ಸದ್ರಿ ಗುಡ್ಡೆಯ ಸ್ಥಳದಲ್ಲಿ ಕೆಲವರು ಗುಂಪು ಸೇರಿ […]

DAKSHINA KANNADA HOME LATEST NEWS

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಇದರ ವತಿಯಿಂದ ಮಂಗಳೂರು ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ದಿನೇಶ್ ಮುಳೂರುರವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಕರ್ಣಾಟಕ ಸರ್ಕಾರದ ಮಾಜಿ ಸಚಿವಾರಾದ ಶ್ರೀ ಬಿ ರಮಾನಾಥ ರೈವರು ದೀಪ ಬೆಳಗಿಸಿ ಡಾ. ಬಿ. ಆರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಇವರು ಸಂವಿಧಾನ […]

DAKSHINA KANNADA HOME LATEST NEWS

ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯ ಟೆರೇಸ್ ರೂಫಿಂಗ್ ಉದ್ಘಾಟನೆ

ಮಂಗಳೂರು : ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ಈ ಸೌಲಭ್ಯವನ್ನು ಮಂಗಳೂರಿನ MRPLಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ( CSR ಉಪಕ್ರಮದ ಅಡಿಯಲ್ಲಿ) ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ ಸಬಲೀಕರಣಗೊಳ್ಳುವ ಅಭಿವ್ಯಕ್ತಿಶೀಲ ಕಲಾ ಚಿಕಿತ್ಸೆ ಮತ್ತು ವಿವಿಧ ಗುಣಪಡಿಸುವ ಶಾರಿರಿಕ್ ಹಾಗು ಮನಾಸಿಕ ಚಟುವಟಿಕೆಗಳಿಗೆ ಮೀಸಲಿಡಲಾಗುವುದು. […]

DAKSHINA KANNADA HOME LATEST NEWS STATE

ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ: ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರು ಸುಶಿಕ್ಷಿತರು, ಬುದ್ಧಿಜೀವಿಗಳು. ಕೆಲವೇ ಕೆಲವು ಜನರಿಂದ ಈ ಜಿಲ್ಲೆಯ ಘನತೆಗೆ ಚ್ಯುತಿ ತರುವ ಪ್ರಯತ್ನವಾಗುತ್ತಿದೆ. ಇದನ್ನು ಮಟ್ಟಹಾಕಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಪ್ರಯತ್ನಪಡುವ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಇದು ಖಂಡನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.99ಜನರಿಗೆ ಈ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಬೇಕು, ಅಭಿವೃದ್ಧಿಯಾಗಬೇಕು. ಈ ಜಿಲ್ಲೆಗೆ ಹೊಸ ಕೈಗಾರಿಕೆಗಳು […]

DAKSHINA KANNADA HOME LATEST NEWS

ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ

ನಹೀ ಜ್ಞಾನೇನ ಸದೃಶಂ : ಜ್ಞಾನಕ್ಕಿಂತ ಮಿಗಿಲಾದದ್ದು ಈ ಜಗತ್ತಿನಲ್ಲಿ ಬೇರೆ ಯಾವುದೂ ಇಲ್ಲ… ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇದರ 2025- 26 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ನೂತನ ಮುಖ್ಯ ಶಿಕ್ಷಕರಾಗಿ ನಿಯೋಜನೆಗೊಂಡಿರುವ ವಂದನೀಯ ಫಾ. ಅಮಿತ್ ಪ್ರಕಾಶ್ ರೋಡ್ರಿಗಸ್ ಇವರ ಸ್ವಾಗತ ಕಾರ್ಯಕ್ರಮವನ್ನು ವಿನೂತನ ಶೈಲಿಯೊಂದಿಗೆ ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೂವಿನೊಂದಿಗೆ ಸ್ವಾಗತಿಸಿದ್ದು […]

DAKSHINA KANNADA HOME LATEST NEWS

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್‌: ಯತೀಶ್‌ ಪೆರುವಾಯಿ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಂಚಿಕೊಂಡಿದ್ದ ಯುವಕನೋರ್ವನ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678