Tag: canaratvnews

DAKSHINA KANNADA HOME LATEST NEWS STATE

ಕರಾವಳಿ ಪೊಲೀಸ್‌ ಇಲಾಖೆಗೆ ಭರ್ಜರಿ ಸರ್ಜರಿ ಎಸ್ಪಿ ಹಾಗೂ ಪೊಲೀಸ್‌ ಕಮೀಷನರ್‌ ಎತ್ತಂಗಡಿ

ಮಂಗಳೂರು: ಕರಾವಳಿಯಲ್ಲಿ ನಡೆದ ಕೋಮುಹತ್ಯೆಯನ್ನು ಹತ್ತಿಕ್ಕುವಲ್ಲಿ ವಿಫಲವಾದ ಪೊಲೀಸ್‌ ಇಲಾಖೆಗೆ ರಾಜ್ಯ ಸರ್ಕಾರ ಸರ್ಜರಿ ಮಾಡಿದ್ದು, ಇದರ ಮೊದಲ ಭಾಗವಾಗಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗ್ರವಾಲ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯನ್ನು  ವರ್ಗಾವಣೆ ಮಾಡಲಾಗಿದೆ.  ನೂತನ ಪೊಲೀಸ್‌ ಆಯುಕ್ತರಾಗಿ ಸುಧೀರ್‌ ಕುಮಾರ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಎಸ್ಪಿ ಸ್ಥಾನಕ್ಕೆ ಹಾಲಿ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್‌ ಕೆ ಅವರನ್ನು ನೇಮಿಸಲಾಗಿದೆ. 2010 ನೇ ಬ್ಯಾಚ್‌ನ ಐಪಿಎಸ್‌ […]

DAKSHINA KANNADA HOME LATEST NEWS

ಬಂಟ್ವಾಳ: ಅಬ್ದುಲ್‌ ಕೊಲೆ ಪ್ರಕರಣ- ಸ್ಪೀಕರ್‌ ಯು.ಟಿ ಖಾದರ್‌ ಖಂಡನೆ

ಬಂಟ್ವಾಳ: ಕೊಳತ್ತಮಜಲು ಬಳಿ ಇಬ್ಬರು ಮುಸ್ಲಿಂ ಯುವಕರ ಹಲ್ಲೆ ನಡೆಸಿದ ಪರಿಣಾಮ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಪವಿತ್ರ ಮದೀನಾದಲ್ಲಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಬಲವಾಗಿ ಖಂಡಿಸಿದ್ದಾರೆ. ಕಳೆದ ಹಲವಾರು ದಿವಸಗಳಿಂದ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ರೌಡಿಗಳು,ಕೋಮು ಪ್ರಚೋದಿತ ಹೇಳಿಕೆಗಳನ್ನು ನೀಡುವವರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹುಟ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ,ಇಲಾಖೆ ನಿರ್ಲಕ್ಷ್ಯತನ ವಹಿಸಿರುವುದೇ ಮತ್ತೆ ಅಹಿತಕರ ಘಟನೆ ಮರುಕಳಿಸಲು ಕಾರಣವಾಗಿರಬಹುದು ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಇನ್ನಾದರೂ ಈ […]

COMMUNITY NEWS HOME LATEST NEWS

ವಿಟ್ಲ: ದೇಲಂತಬೇಟ್ಟು ಚರ್ಚ್‌ಗೆ ನೂತನ ಧರ್ಮಗುರು ಆಗಮನ- ವಂ. ಸುನೀಲ್‌ ಪಿಂಟೋಗೆ ವಿದಾಯ

ವಿಟ್ಲ: ಸಂತ ಪೌಲರ ದೇವಾಲಯ ದೇಲಂತ ಬೇಟ್ಟು ಇಲ್ಲಿಗೆ ನೂತನ ಧರ್ಮ ಗುರುಗಳಾಗಿ ಫಾದರ್ ರಿಚಾರ್ಜ್ ಡಿಸೋಜ ಅವರು ಮೇ 27 ರಂದು ಆಗಮಿಸಿದರು. ಈ ವೇಳೆ ಅವರನ್ನು ಭಕ್ತಾದಿಗಳು ಸ್ವಾಗತಿಸಿದರು. ನಿರ್ಗಮಿತ ಧರ್ಮಗುರು ವಂ. ಸುನೀಲ್‌ ಅವರು ನೂತನ ಧರ್ಮಗುರುಗಳಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮಿತ ಧರ್ಮಗುರುಗಳಿಗೆ ವಿದಾಯ ಸಂತ ಪೌಲರ ದೇವಾಲಯದಲ್ಲಿ ಆರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಧರ್ಮಗುರು ವಂ. ಸುನೀಲ್‌ ಅವರನ್ನು ಚರ್ಚ್‌ ಭಕ್ತಾಧಿಗಳು ಭಾರವಾದ ಮನಸ್ಸಿನಿಂದ ವಿದಾಯ ಹೇಳಿದರು. ಈ ವೇಳೆ ಅವರು […]

DAKSHINA KANNADA HOME INETRNATIONAL LATEST NEWS NATIONAL

ಭಾರತದ ಸ್ಷಪ್ಟ ಸಂದೇಶ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ. ಗುರುವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ […]

DAKSHINA KANNADA HOME LATEST NEWS

ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ದಿ ಪಡೆದಿದ್ದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

ಮಂಗಳೂರು ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ 21, ಮೇ 2025 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ, ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ […]

DAKSHINA KANNADA HOME LATEST NEWS STATE

ತಮಿಳುನಾಡಿನ ಕುಂಬಕೋಣಂನಲ್ಲಿ ಶ್ರೀ ಗಿರಿ ಅವರ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

ಕುಂಬಕೋಣಂ, ಮೇ 17, 2025: ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಶ್ರೀ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು. ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು. ವಿವಾಹವಾಗದಿರುವ ಶ್ರೀ ಗಿರಿ ಅವರು ಕಳೆದ ಎರಡು ವರ್ಷಗಳಿಂದ ಮಾನಸಿಕ ಆರೋಗ್ಯ […]

COMMUNITY NEWS HOME INETRNATIONAL LATEST NEWS

267ನೇ ಪೋಪ್‌ ಆಗಿ ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ನೇಮಕ

ವ್ಯಾಟಿಕನ್‌ ಸಿಟಿ: ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ಅವರು 267ನೇ ನೂತನ ಪೋಪ್‌ ಆಗಿ ಆಯ್ಕೆಯಾಗಿದ್ದಾರೆ. ಅವರನ್ನು ಲೀಯೋ XIV ಆಗಿ ಮರುನಾಮಕರಣ ಮಾಡಲಾಗಿದೆ. ಅಮೇರಿಕ ಮೂಲದವರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…..     ಮತದಾನದ ವೇಳಿನ ದೃಶ್ಯ

DAKSHINA KANNADA HOME LATEST NEWS

ಸುಹಾಸ್ ಶೆಟ್ಟಿ ನಿವಾಸಕ್ಕೆ ಮೇ 11ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಭೇಟಿ

ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ಜೆ. ಪಿ. ನಡ್ಡಾ ಮೇ 11 ರಂದು ಭೇಟಿ ನೀಡಲಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಜೆ. ಪಿ. ನಡ್ಡಾ ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದ ವೇಳೆ ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ […]

COMMUNITY NEWS HOME INETRNATIONAL LATEST NEWS

ನೂತನ ಪೋಪ್‌ ಆಯ್ಕೆ: ವ್ಯಾಟಿಕನ್‌ ಚಿಮಣಿಯಿಂದ ಬಿಳಿ ಹೊಗೆ

ವ್ಯಾಟಿಕನ್ ಸಿಟಿ: ಪೋಪ್‌ ಫ್ರಾನ್ಸಿಸ್‌ ನಿಧನದಿಂದ ತೆರವಾದ ಪೋಪ್‌ ಸ್ಥಾನಕ್ಕೆ ಮತ್ತೋರ್ವರು ಆಯ್ಕೆಯಾಗಿದ್ದಾರೆ. ಇದರ ಸಂಕೇತವಾಗಿ ಕೆಲವೇ ಹೊತ್ತಿನ ಮುಂಚೆ ಚಿಮಣಿ ಮೂಲಕ ಬಿಳಿ ಹೊಗೆ ಹೊರ ಸೂಸಿದೆ. ಇಂದು ಬೆಳಗ್ಗೆ ಇಲ್ಲಿನ ಸಿಸ್ಟೈನ್ ಚಾಪೆಲ್‌ನ ಚರ್ಚ್ ಚಿಮಣಿಯಿಂದ ಕಪ್ಪು ಹೊಗೆ ಹೊರಬಂದಿತ್ತು. ಇದೀಗ ಮತ್ತೆ ನಡೆದ ಗೌಪ್ಯ ಮತದಾನದಲ್ಲಿ ನೂತನ ಪೋಪ್‌ ಆಯ್ಕೆಯಾದ ಬಗ್ಗೆ ಮಾಹಿತಿ ಹೊರಬಿದ್ದಿದೆ. ವಿಶ್ವದ ನಾನಾ ದೇಶಗಳನ್ನು ಪ್ರತಿನಿಧಿಸುವ 133 ಕಾರ್ಡಿನಲ್‌ಗಳು ನೂತನ ಪೋಪ್ ಅವರನ್ನು ಆಯ್ಕೆ ಮಾಡುತ್ತಾರೆ. ಪೋಪ್ ಆಗಿ […]

DAKSHINA KANNADA HOME LATEST NEWS NATIONAL

ಭಾರತದೊಳಗೆ ಕ್ಷಿಪಣಿ ನುಗ್ಗಿಸಿದ ಪಾಕ್‌: ಆಕಾಶದಲ್ಲೇ ಧ್ವಂಸ ಮಾಡಿದ ವಾಯುಸೇನೆ

ಜಮ್ಮು: ಭಾರತದ ಮೇಲೆ ಮತ್ತೆ ಪಾಕಿಸ್ತಾನ ದಾಳಿಗೆ ಮುಂದಾಗಿದ್ದು ಜಮ್ಮುವಿನ ಹಲವು ಭಾಗಗಳಲ್ಲಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದೆ. ಪಠಾಣ್ ಕೋಟ್ ವಾಯುನೆಲೆ, ಜಮ್ಮು ವಿಮಾನ ನಿಲ್ದಾಣ ಸೇರಿ ಭಾರತದ 8 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿಗೆ ಯತ್ನಿಸಿದೆ. ಆದರೆ ಭಾರತೀಯ ಸೇನಾಪಡೆಗಳು ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಿವೆ. ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆ ಬಳಸಿ ಪಾಕ್ ಡ್ರೋನ್ ಗಳನ್ನು ಭಾರತೀಯ ಸೇನೆ ಆಕಾಶದಲ್ಲೇ ಹೊಡೆದುರುಳಿಸಿದೆ. ಜಮ್ಮು ನಾಗರಿಕ ವಿಮಾನ ನಿಲ್ದಾಣ, ಸಾಂಬಾ, ಆರ್‌ಎಸ್ ಪುರ, […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678