Tag: dakshina kannada

DAKSHINA KANNADA HOME LATEST NEWS

ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ದಿ ಪಡೆದಿದ್ದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

ಮಂಗಳೂರು ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ 21, ಮೇ 2025 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ, ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ (ಟ್ಯಾಬ್ಲೋ) ರೂವಾರಿ ಎಂದೆಣಿಸಿ ಎಲ್ಲಾ ಸಮುದಾಯದವರಲ್ಲೂ ಭಾವೈಕ್ಯತೆ ಹೊಂದಿ ಸಾಮರಸ್ಯದ […]

DAKSHINA KANNADA HOME LATEST NEWS STATE

ತಮಿಳುನಾಡಿನ ಕುಂಬಕೋಣಂನಲ್ಲಿ ಶ್ರೀ ಗಿರಿ ಅವರ ಕುಟುಂಬದೊಂದಿಗೆ ಆನಂದದ ಪುನರ್ಮಿಲನ

ಕುಂಬಕೋಣಂ, ಮೇ 17, 2025: ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಶ್ರೀ ಗಿರಿ ಅವರು ಆರು ತಿಂಗಳು ನಾಪತ್ತೆಯಾಗಿದ್ದ ನಂತರ, ಮೇ 15, 2025 ರಂದು ತಮ್ಮ ಕುಟುಂಬದೊಂದಿಗೆ ಅತೀ ಸಂತೋಷದಿಂದ ಪುನರ್ಮಿಲನಗೊಂಡರು. ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು. ವಿವಾಹವಾಗದಿರುವ ಶ್ರೀ ಗಿರಿ ಅವರು ಕಳೆದ ಎರಡು ವರ್ಷಗಳಿಂದ ಮಾನಸಿಕ ಆರೋಗ್ಯ […]

DAKSHINA KANNADA LATEST NEWS

ಜಿಲ್ಲಾಧಿಕಾರಿಗೆ ತಾವೇ ಬೆಳೆದ ತರಕಾರಿ ನೀಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ತಾವು ತಮ್ಮ ಶಾಲೆಯ ಆವರಣದಲ್ಲಿ  ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು  ಶಾಲೆಯಲ್ಲಿ ಮಕ್ಕಳು  ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು. ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ […]

DAKSHINA KANNADA HOME LATEST NEWS

ಬಿಜೆಪಿಯಲ್ಲಿ ಭ್ರಷ್ಟರನ್ನು ಸ್ವಚ್ಛಗೊಳಿಸುವ ವಾಶಿಂಗ್ ಮೆಷನ್ ಇದೆ: ರಮಾನಾಥ ರೈ

ಮಂಗಳೂರು, ಎ. 17: ಕೇಂದ್ರ ಸರಕಾರ ಇ.ಡಿ. ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ವಿರೋಧ ಪಕ್ಷದವರ ವಿರುದ್ಧ ಮಾತ್ರವೇ ಇಡಿ ಪ್ರಯೋಗಿಸುತ್ತಿದೆ. ವಿಪಕ್ಷಗಳನ್ನು ದುರ್ಬಳಗೊಳಿಸಲು ಮೋದಿ ಸರಕಾರ ಯತ್ನಿಸುತ್ತಿದೆ. ಇಡಿ ದಾಳಿಯೊಳಗಾದವರು ಬಿಜೆಪಿ ಸೇರಿದರೆ ಅವರು ಕ್ಲೀನ್ ಆಗುತ್ತಾರೆ. ಬಿಜೆಪಿ ಬಳಿ ಭ್ರಷ್ಟರನ್ನು ಕ್ಲೀನ್ ಮಾಡುವ ವಾಶಿಂಗ್ ಮೆ‌ಷನ್ ಇದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಾಗ್ದಾಳಿ ನಡಿಸಿದ್ದಾರೆ. ಬುಧವಾರ ಮಂಗಳೂರಿನ ಯೆಯ್ಯಾಡಿ ಬಳಿ ಇರುವ ಜಾರಿ ನಿರ್ದೇಶನಾಲಯ(ಇಡಿ)ದ ಬಳಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. […]

DAKSHINA KANNADA HOME LATEST NEWS STATE

6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯದ ಎರಡು ಪ್ರಮುಖ ರಸ್ತೆಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ

ಸುಳ್ಯ: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ ಐಎಫ್ ಅನುದಾನದಡಿ ಸುಳ್ಯ ತಾಲೂಕಿನ ನಿಂತಿಕಲ್ಲು- ಬೆಳ್ಳಾರೆ ರಸ್ತೆಯನ್ನು ಸುಮಾರು 3.72 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ರಸ್ತೆಯಲ್ಲಿ ಒಟ್ಟು ಸುಮಾರು 6.20 ಕಿಮೀ. ಮಾರ್ಗವನ್ನು […]

DAKSHINA KANNADA HOME LATEST NEWS

ಎಮ್.ಸಿ.ಸಿ. ಬ್ಯಾಂಕ್ 2024–25 ವಿತ್ತೀಯ ವರ್ಷದಲ್ಲಿ 13.00 ಕೋಟಿ ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ

ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ 1.30% ಎನ್.ಪಿ.ಎ. ದಾಖಲಿಸಿದೆ. ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ […]

DAKSHINA KANNADA HOME LATEST NEWS

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆಗಳು ನೀಡಲಾಯಿತು

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗು ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

DAKSHINA KANNADA HOME LATEST NEWS

ದ. ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

  ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು. ನ್ಯಾಯ ಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕರಾಗಿದ್ದ ಅಂಬೇಡ್ಕರ್ ಅವರು ಜೀವನದ ಉದ್ದಕ್ಕೂ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ವರ್ಗದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಅಪೇಕ್ಷೆ ಮೇರೆಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅನೇಕ ಅನುಕೂಲತೆಗಳನ್ನು ನೀಡಿದ್ದಾರೆ. ಅಸ್ಪೃಶ್ಯತೆ, ಅಸಮಾನತೆಯ […]

DAKSHINA KANNADA HOME LATEST NEWS

ಬಿಜೆಪಿ ಮಂ.ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು […]

DAKSHINA KANNADA HOME LATEST NEWS

ಕರಾವಳಿ ಉತ್ಸವ ಮೈದಾನದಲ್ಲಿ ‘ಬ್ಯಾರಿ ಸೌಹಾರ್ದ ಉತ್ಸವ 2025’

ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಚರಲ್ ಫಾರಂ ಆಯೋಜಿಸುವ ‘ಸೌಹಾರ್ದ ಬ್ಯಾರಿ ಉತ್ಸವ – 2025’ ಸಂಘಟನಾ ಸಮಿತಿ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ‘ಬ್ಯಾರಿ ಸೌಹಾರ್ದ ಉತ್ಸವ’ವನ್ನು 2025 ರ ಎಪ್ರಿಲ್ 18, 19,20 ರಂದು ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ಬ್ಯಾರಿ ಜನಾಂಗದ ವೈಶಿಷ್ಟ್ಯತೆ, ಸಂಸ್ಕೃತಿ, ಸೌಹಾರ್ದತೆ, ಕೊಡುಗೆಗಳು, ಸಾಧನೆಗಳು, ಪರಂಪರೆಗಳನ್ನು ಪ್ರತಿಬಿಂಬಿಸುವ ಜೊತೆಗೆ ಯುವ ಜನಾಂಗಕ್ಕೆ ದಿಕ್ಸೂಚಿಯಾಗುವ ಹಾಗೂ ಬಹು ಭಾಷಾ ಸಂಸ್ಕೃತಿಗಳನ್ನು ಪ್ರಸ್ತುತಪಡಿಸುವ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ನಿವೃತ್ತ ಡಿಸಿಪಿ, […]