HOME
LATEST NEWS
STATE
ಡೈವೋರ್ಸ್ಗಾಗಿ ಕೋರ್ಟ್ ಮೆಟ್ಟಲೇರಿದ್ದ 15 ಜೋಡಿ ಮತ್ತೆ ಹಾರ ಬದಲಿಸಿ ಒಂದಾದ ಕ್ಷಣ…!
ಧಾರವಾಡ: ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ ಸೇರಿದಂತೆ ವಿವಿಧ ಕಾರಣದಿಂದ ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದ 15 ದಂಪತಿ ನ್ಯಾಯಾಧೀಶರ ಮನವೊಲಿಕೆ ಮತ್ತು ಸಮಾಲೋಚನೆಯ ಬಳಿಕ ಮತ್ತೆ ಒಂದಾದರು. ಎಲ್ಲವನ್ನೂ ಮರೆತು ಮತ್ತೊಮ್ಮೆ ಹೊಸ ಜೀವನಕ್ಕೆ ಜೋಡಿಗಳು ಕಾಲಿಟ್ಟಿದ್ದು, ಈ ಅಪರೂಪದ ಘಟನೆಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಇಂದು ಸಾಕ್ಷಿಯಾಯಿತು. ಕೈಯಲ್ಲಿ ಹೂವಿನ ಮಾಲೆ ಹಿಡಿದು ನಿಂತಿರುವ ಜೋಡಿಗಳು, ಅವರಿಗೆ ಬುದ್ಧಿ ಮಾತು ಹೇಳುತ್ತಿರುವ ನ್ಯಾಯಾಧೀಶರು, ಈ ಎಲ್ಲ ದೃಶ್ಯಗಳಿಗೆ ಇಂದು ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಸಾಕ್ಷಿಯಾಗಿತ್ತು. […]


