ಮಂಗಳೂರು ಬಿಷಪ್ ಈಸ್ಟರ್ ಸಂದೇಶ: ಶಾಂತಿ ಮತ್ತು ಸಂಧಾನಕ್ಕೆ ಕರೆ
ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು 2026ರ ಈಸ್ಟರ್ ಹಬ್ಬದ ಸಂದರ್ಭದಲ್ಲಿ ನಾಡಿನ ಜನತೆಗೆ ಹಾಗೂ ಕ್ರೈಸ್ತ ಬಾಂಧವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಯೇಸು ಕ್ರಿಸ್ತರ ಪುನರುತ್ಥಾನವು ಕೇವಲ ಒಂದು ಐತಿಹಾಸಿಕ ಘಟನೆಯಲ್ಲ ಅದು ಜಗತ್ತಿಗೆ ಭರವಸೆ ಮತ್ತು ಶಾಂತಿಯ ಸಂಕೇತವಾಗಿದೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಜಗತ್ತಿನಾದ್ಯಂತ ಸಂಘರ್ಷ ಮತ್ತು ಹಿಂಸಾಚಾರಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಷಪ್ ಅವರು, ಇಂದಿನ ಅಶಾಂತಿಯ ವಾತಾವರಣಕ್ಕೆ ಕ್ರಿಸ್ತರ ಪುನರುತ್ಥಾನದ […]



