Tag: mangalore

DAKSHINA KANNADA HOME LATEST NEWS

ಮಂಗಳೂರು: ಅಪಘಾತದಲ್ಲಿ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ₹ 70 ಲಕ್ಷ ರೂ. ಆರ್ಥಿಕ ನೆರವು

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು, ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ  ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ […]

DAKSHINA KANNADA HOME LATEST NEWS

ನುಡಿ ನಮನ: ದಿ. ಜುಡಿತ್ ಮಸ್ಕರೇನ್ಹಸ್ ಬದುಕು-ಸಾಧನೆಗೆ ಗೌರವಪೂರ್ವಕ ಶ್ರದ್ಧಾಂಜಲಿ

ಮಂಗಳೂರು: ಸಮಾಜ ಸೇವಕಿ, ದಿ.ಜುಡಿತ್ ಮಸ್ಕರೇನ್ಹಸ್ ಅವರ 9ನೇ ಪುಣ್ಯಸ್ಮರಣೆಯ ಅಂಗವಾಗಿ, ಸೊಸೈಟಿ ಆಫ್ ಸೇಂಟ್ ವಿನ್ಸೆಂಟ್ ಡಿ ಪೌಲ್ (SSVP) ಕೇಂದ್ರ ಮಂಡಳಿಯ ವತಿಯಿಂದ ಜನವರಿ 9 ರಂದು ಅವರಿಗೆ ‘ನುಡಿ ನಮನ’ ಎಂಬ ಅರ್ಥಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು  ಟೈಟಸ್ ನೊರೊನ್ಹಾ ಅವರ ಪ್ರಸ್ತಾವನೆಯೊಂದಿಗೆ ಆರಂಭವಾಯಿತು. SSVP ಕೇಂದ್ರ ಮಂಡಳಿಯ ಅಧ್ಯಕ್ಷರಾದ  ಜ್ಯೊ ಕುವೆಲ್ಹೊ ಅವರು ಸ್ವಾಗತ ಭಾಷಣ ಮಾಡಿ, ಕಾರ್ಯಕ್ರಮಕ್ಕೆ ಘನತೆಯ ಅಡಿಪಾಯ ಹಾಕಿಕೊಟ್ಟರು. ಜುಡಿತ್ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸುವ […]

DAKSHINA KANNADA HOME LATEST NEWS

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ

ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. […]

DAKSHINA KANNADA HOME LATEST NEWS

ಇಂದು ಮಂಗಳೂರಿಗೆ CM & DCM: ಸಂಚಾರ ವ್ಯತ್ಯಯ ಸಾಧ್ಯತೆ

ಮಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲ ಮತ್ತು ನರಿಂಗಾನ ಹಾಗೂ ಅಂಬ್ಲಮೊಗರುವಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು. ಹಾಗಾಗಿ ಸುಗಮ ಸಂಚಾರದ ದೃಷ್ಟಿಯಿಂದ ತುರ್ತು ಸಂದರ್ಭ ಹೊರತುಪಡಿಸಿ ಈ ಮಾರ್ಗಗಳಲ್ಲಿ ಸಂಚರಿಸದೆ ಬದಲಿ ಮಾರ್ಗ ಉಪಯೋಗಿಸು ವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಸಂಚಾರ ದಟ್ಟಣೆಯಾಗುವ ಮಾರ್ಗಗಳು: ಕೆಂಜಾರು ಜಂಕ್ಷನ್, ಮರವೂರು, ಕಾವೂರು, ಬೋಂದೆಲ್, ಪದವಿನಂಗಡಿ, […]

DAKSHINA KANNADA HOME LATEST NEWS

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

ಮಂಗಳೂರು: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ನಾಲ್ಕನೇ ದಿನವನ್ನು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ದಿನದ ಮುಖ್ಯ ಚಿಂತನೆಯ ವಿಷಯ “ನಿಮ್ಮ ಕರೆಯನ್ನು ದೃಢಪಡಿಸಿಕೊಳ್ಳಲು ಸಕಲ ಪ್ರಯತ್ನ ಮಾಡಿ” ಎಂಬುದಾಗಿತ್ತು. ಸಂತ ಶಿಲುಬೆಯ ಯೋವಾನರ ಆಧ್ಯಾತ್ಮಿಕ ಬರಹಗಳ ಬೆಳಕಿನಲ್ಲಿ, ಕ್ರೈಸ್ತ ಕರೆಯ ಬಗ್ಗೆ ನಿಷ್ಠೆ, ಶಿಸ್ತು ಮತ್ತು ಬದ್ಧತೆಯನ್ನು ಉಳಿಸಿಕೊಳ್ಳುವ ಕುರಿತು ಈ ದಿನದಂದು ವಿಶೇಷ ಪ್ರಬೋಧನೆ ನೀಡಲಾಯಿತು. ಸಂತ ಶಿಲುಬೆಯ ಯೋವಾನರ ಪುಣ್ಯಪಟ್ಟದ 300ನೇ ವರ್ಷಾಚರಣೆ ಮತ್ತು […]

DAKSHINA KANNADA HOME LATEST NEWS

ಡ್ಯೂಟಿಯಲ್ಲಿದ್ದ ಮಂಗಳೂರು ಟ್ರಾಫಿಕ್‌ ಪೊಲೀಸರ ಬೈಕ್‌ ಕಳ್ಳತನ: ಅರ್ಧ ಗಂಟೆಯ ಕೈಚಳಕ

ಮಂಗಳೂರು: ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರೊಬ್ಬರು ಪಾರ್ಕ್‌ ಮಾಡಿದ ಅರ್ಧಗಂಟೆಯೊಳಗೆ ಬೈಕು ಕಳವು ನಡೆಸಿದ ಬಗ್ಗೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಪುನೀತ್‌ ಬಿ.ವೈ ಎಂಬುವವರು ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಜ.5 ರಂದು ಮಂಗಳೂರು ಕೆ.ಬಿ.ಕಟ್ಟೆಯಲ್ಲಿ ಸಂಚಾರ ನಿಯಂತ್ರಣ  ಕರ್ತವ್ಯಕ್ಕೆ ನೇಮಿಸಿದಂತೆ ಸಂಜೆ 5:30 ಗಂಟೆಗೆ ತನ್ನ ತಂದೆಯ ಹೆಸರಿನಲ್ಲಿರುವ KA-13-EG 3008  ನೋಂದಣಿಯ ಹೋಂಡಾ ಶೈನ್‌ […]

DAKSHINA KANNADA HOME LATEST NEWS

ವಿಟ್ಲ: ಪೆರುವಾಯಿ ದನ ಕಳ್ಳನತದ ಆರೋಪಿ ಬಂಧನ- ಉಳಿದವರಿಗಾಗಿ ಶೋಧ

ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ದನ ಕಳ್ಳತನ ಮಾಡಿದ ಆರೋಪದಲ್ಲಿ ಉಳ್ಳಾಲದ ಓರ್ವ ಆರೋಪಿಯನ್ನು ತಿಂಗಳ ಬಳಿಕ ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಝುಲ್ಫಾನ್ ಮಾಲಿಕ್ (30) ಬಂಧಿತ ಆರೋಪಿ. ಘಟನೆ ವಿವರ 18-11-2025 ರಂದು ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರ 4 ದನಗಳು ಮೇಯುತ್ತಿದ್ದವು. ರಾತ್ರಿ ವೇಳೆ ಅಲ್ಲಿಯೇ ಮಲಗಿದ್ದ […]

DAKSHINA KANNADA HOME LATEST NEWS

ಅಕ್ರಮ ದನದ ಮಾಂಸ ಸಾಗಾಟ: ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ- ಪ್ರತ್ಯೇಕ FIR

ಮಂಗಳೂರು:  ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಹಾಗೂ ಅದನ್ನು ತಡೆದು ನಿಲ್ಲಿಸಿದ ಪ್ರಕರಣದ ಬಗ್ಗೆ ಜೊತೆಗೆ ಇದೇ ಹಿನ್ನೆಲೆ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಘಟನೆ ವಿವರ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಡಿ.27 ರಂದು  ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತನು ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ […]

DAKSHINA KANNADA HISTORY HOME LATEST NEWS

ನಿಮ್ಮ ಪರ ಪ್ರಚಾರಕ್ಕೆ ರೆಡಿ: ಶಾಸಕ ಅಶೋಕ್ ರೈಗೆ ಪೆರುವಾಯಿ BJP ಕಾರ್ಯಕರ್ತರ ಭರವಸೆ..!

ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆ ನೀಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ […]

COMMUNITY NEWS DAKSHINA KANNADA HOME LATEST NEWS

ಮಂಗಳೂರು ಧರ್ಮಕ್ಷೇತ್ರದ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆ: ಮಕ್ಕಳ ವರ್ಷ ಘೋಷಣೆ

ಮಂಗಳೂರು: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಿಲಾಗ್ರಿಸ್ ಚರ್ಚ್‌ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ವರೆಗೆ ಮೆರವಣಿಗೆಯು ನಡೆಯಿತು.     ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಅಧ್ಯಕ್ಷತೆಯಲ್ಲಿ ಮಿಲಾಗ್ರಿಸ್ ಚರ್ಚ್‌ನಲ್ಲಿ ನಡೆದ ಸಾಮೂಹಿಕ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಈ ಹಬ್ಬವು ಜ್ಯೋತಿಷಿಗಳ ಭೇಟಿಯ ಮೂಲಕ ಯೇಸು ಕ್ರಿಸ್ತರು […]