Tag: mangalore

DAKSHINA KANNADA HOME LATEST NEWS UDUPI

ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ..!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ  ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆ (ಗುರುವಾರ) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 […]

DAKSHINA KANNADA HOME LATEST NEWS

“ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ” ವಕ್ಫ್‌ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ SDPI ಬೃಹತ್‌ ಪ್ರತಿಭಟನೆ

ಮಂಗಳೂರು: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಎಸ್‌ಡಿಪಿಐ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಮಂಗಳೂರಿನ ಕ್ಲಾಕ್‌ ಟವರ್‌ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, “ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ. ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಐದು ತಿಂಗಳುಗಳಲ್ಲಿ ನಾಲ್ಕು ಪ್ರತಿಭಟನೆ ನಡೆಸಲಾಗಿದೆ. ಎಸ್‌ಡಿಪಿಐ, ಜಾತ್ಯತೀತ ಸಂಘಟನೆಗಳಿಗೆ ಆಕ್ಷೇಪ ವ್ಯಕ್ತಪಡಿಸಲು […]

DAKSHINA KANNADA HISTORY LATEST NEWS

ಮಂಗಳೂರು: 80 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು: ಮನೆಯೊಂದರ ಕಿಟಕಿ ಬಾಗಿಲು ಮುರಿದು ಅಪಾರ ಮೌಲ್ಯದ ಚಿನ್ನಾಭರಣ ಕಳವು ಗೈದಿರುವ ಪ್ರಕರಣ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ ಮಂಗಳವಾರ ವರದಿಯಾಗಿದೆ. ಪೆರ್ಮುದೆ ನಿವಾಸಿ ಪ್ರವೀಣ್ ಪಿಂಟೊ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಕಳ್ಳರು ಸುಮಾರು 1.080 ಕೆ.ಜಿಯ ಸುಮಾರು 80 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು ಗೈದಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಮಾಲಕ ಪ್ರವೀಣ್ ಪಿಂಟೊ ಅವರು ಕುಟುಂಬ ಸಮೇತರಾಗಿ ಮಸ್ಕತ್ ನಲ್ಲಿದ್ದು, ಮಾ.31ರ ರಾತ್ರಿಯಿಂದ ಎ.1ರ ಬೆಳಗ್ಗೆ ಈ […]

HOME LATEST NEWS STATE

ನಾಳೆಯಿಂದ ದುಬಾರಿ ದುನಿಯಾ: ಹಾಲು, ವಿದ್ಯುತ್‌, ಟೋಲ್‌ ಸೇರಿ ಹಲವು ಬೆಲೆ ಹೆಚ್ಚಳ

ಬೆಂಗಳೂರು: ನಾಳೆ ಬೆಳಗಾದರೆ ಹಾಲು, ವಿದ್ಯುತ್, ಟೋಲ್‌ ಸೇರಿದಂತೆ ಹಲವು ದರಗಳು ಏರಿಕೆಯಾಗಿ ಜನಸಾಮಾನ್ಯರ ಜೋಬಿಗೆ ಕತ್ತರಿ ಹಾಕಲಿವೆ. ಹಾಗಾದರೆ ಏನೆಲ್ಲಾ ಬದಲಾಗಲಿದೆ ನಾಳೆಯಿಂದ. ನಾಳೆಯಿಂದ ದೇಶಾದ್ಯಂತ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಬದಲಾವಣೆಗಳು ಆಗಲಿವೆ. ಅದರ ಒಂದಷ್ಟು ಮಾಹಿತಿ ಇಲ್ಲಿದೆ. ಏನೆಲ್ಲಾ ಬದಲಾವಣೆಯಾಗಲಿದೆ ಹಾಲಿನ ದರ ಪ್ರತೀ ಲೀ.ಗೆ 4 ರೂಪಾಯಿ ಹೆಚ್ಚಳ ವಿದ್ಯುತ್ ದರ ಹೆಚ್ಚಳ ಟೋಲ್ ದರ ಹೆಚ್ಚಳ ಎಟಿಎಂ ವಿತ್‌ಡ್ರಾಗೆ ಹೆಚ್ಚಿನ ಶುಲ್ಕ ಎಲ್‌ಪಿಜಿ ಸಿಲಿಂಡರ್‌ ಬೆಲೆ ಹೆಚ್ಚಳ. […]

DAKSHINA KANNADA HOME LATEST NEWS

ವಿಟ್ಲ: ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಮನೆಗೆ ಸಂಘಟನೆಗಳ ಭೇಟಿ

ಮಂಗಳೂರು: ಇತ್ತೀಚೆಗೆ ವಿಟ್ಲದ ಮುರುವ ಪ್ರದೇಶದಲ್ಲಿ ಭೂಮಾಲಕ ಮಹೇಶ್ ಭಟ್ ಎಂಬವನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ದಲಿತ ವರ್ಗದ ಅಪ್ರಾಪ್ತ ವಯಸ್ಸಿನ ಬಾಲಕಿ ಮನೆಗೆ ಡಿಎಚ್ಎಸ್, ಡಿವೈಎಫ್ಐ ಸಂಘಟನೆಯ ನಾಯಕರುಗಳ ನಿಯೋಗ  ಭೇಟಿ ನೀಡಿ ಘಟನೆಗೆ ಸಂಬಂಧಿಸಿ ಹಲವು ಅಂಶಗಳ ಬಗ್ಗೆ ಚರ್ಚಿಸಿದೆ ಹಾಗೂ ಸಂತ್ರಸ್ತ ಕುಟುಂಬಕ್ಕೆ ಧೈರ್ಯವನ್ನು ತುಂಬಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಐದಾರು ದಿನ ಕಳೆದರೂ ಆರೋಪಿ ಮಹೇಶ್ ಭಟ್ ನನ್ನು ಈವರೆಗೂ ಬಂಧಿಸಲು ಸಾಧ್ಯವಾಗದಿರುವ ಪೊಲೀಸ್ ಇಲಾಖೆಯ ಕ್ರಮ ಖಂಡನೀಯ. ಸದ್ಯ […]

DAKSHINA KANNADA HOME LATEST NEWS

70 ರೂ.ಗೆ ಏರಿದ ಎಳನೀರು ದರ: ಮತ್ತಷ್ಟು ಏರಿಕೆಯಾಗುವ ಸಂಭವ

ಮಂಗಳೂರು: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಏರುತ್ತಿದ್ದು, ಇದರ ಜೊತೆಗೆ ಸೀಯಾಳ ದರವೂ 50 ರು.ನಿಂದ 70 ರು.ಗೆ ಏರಿಕೆಯಾಗಿದೆ. ಮತ್ತಷ್ಟು ಏರಿಕೆಯಾಗುವ ಸಂಭವವಿದೆ. ನಗರದ ಪ್ರದೇಶಗಳಲ್ಲಿ ಶರೀರ ತಂಪಾಗಿಸಿಕೊಳ್ಳಲು ಎಳನೀರು ಸೇವಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ತಿಂಗಳ ಹಿಂದಷ್ಟೇ 50 ರು. ಆಗಿದ್ದ ಎಳನೀರಿನ ಬೆಲೆ, ಕಳೆದ ತಿಂಗಳು 60 ರು. ಮತ್ತು ಈ ತಿಂಗಳು 70 ರು.ಗೆ ಏರಿಕೆಯಾಗಿದೆ. ಜೊತೆಗೆ ಕರಾವಳಿಯಲ್ಲಿ ಈ […]

DAKSHINA KANNADA HOME LATEST NEWS

ಮಂಗಳೂರು ಸಂಸದ ಹಾಗೂ ಶಾಸಕ ಪೂಂಜಾರಿಂದ ಸಚಿವ ನಿತಿನ್ ಗಡ್ಕರಿ ಭೇಟಿ

ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಜತೆಗೆ ಇಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿರುವ ಪ್ರಮುಖ […]

DAKSHINA KANNADA HOME LATEST NEWS

ಮಂಗಳೂರು: ವಾರ್ತಾ ಇಲಾಖೆಗೆ ಸಿಎಂ ಮಾಧ್ಯಮ ಸಲಹೆಗಾರರ ಭೇಟಿ

ಮಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಅವರು ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಭೇಟಿ ನೀಡಿದರು. ಕಚೇರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಇಲಾಖಾ ಪ್ರಗತಿ ಮಾಹಿತಿ ಪಡೆದರು. ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಪತ್ರಕರ್ತರ ಪ್ರವಾಸಕ್ಕೆ ಹೊಸ ಬಸ್ ಒದಗಿಸುವ ಬಗ್ಗೆ ಶೀಘ್ರದಲ್ಲಿ ಸರಕಾರ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು. ಗ್ರಾಮಾಂತರ ಪತ್ರಕರ್ತರ ಬಸ್ ಪಾಸ್ ಹಾಗೂ ಪತ್ರಕರ್ತರ ಪಿಂಚಣಿ ಯೋಜನೆ ಕುರಿತು ಅವರು ಚರ್ಚಿಸಿದರು. ಈ ಸಂದರ್ಭದಲ್ಲಿ […]

COMMUNITY NEWS LATEST NEWS

ಮಂಗಳೂರು ಧರ್ಮಪ್ರಾಂತ್ಯದ ಮೆಗಾ ಬೈಬಲ್ ಸಮ್ಮೇಳನ ಸಮರೋಪ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಸೇವಾ ಕಮ್ಯುನಿಯನ್ (MDSC) ಮತ್ತು ಬೈಬಲ್ ಆಯೋಗವು ಮಂಗಳೂರಿನ ಕಾರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಆಯೋಜಿಸಿದ ನಾಲ್ಕು ದಿನದ ಮೆಗಾ ಬೈಬಲ್ ಸಮಾವೇಶವು ಫೆಬ್ರವರಿ 25 ರಂದು ತೆರೆಕಂಡಿತು. ಸರಿಸುಮಾರು 10,000 ಭಕ್ತಾದಿಗಳು ಅವರ ಕುಟುಂಬಗಳೊಂದಿಗೆ ಹಾಜರಿದ್ದು ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸಾಮುದಾಯಿಕ ನವೀಕರಣಕ್ಕೆ ಸಾಕ್ಷಿಯಾದರು. ಕೇರಳದ ಡಿವೈನ್ ರಿಟ್ರೀಟ್ ಸೆಂಟರ್‌ನಿಂದ ರೆ.ಫಾ. ಜೋಸೆಫ್ ಎಡಟ್ಟು ವಿ.ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಈ ಸಮಾವೇಶನದಲ್ಲಿ ದೇವರ ಸ್ತುತಿ ಸ್ತೋತ್ರ, ವಿಮೋಚನೆಯ ಪ್ರಾರ್ಥನೆಗಳು, […]

COMMUNITY NEWS HOME LATEST NEWS

MLC ಐವನ್ ಡಿಸೋಜಾಗೆ ಕಥೊಲಿಕ್ ಸಭಾದಿಂದ ಅಭಿನಂದನೆ

ಮಂಗಳೂರು: ವಿಧಾನ್ ಪರಿಷತ್ ಕಲಾಪದಲ್ಲಿ ಅಲ್ಪಸಂಖ್ಯಾತರ ಪರವಾಗಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ MLC ಐವನ್ ಡಿಸೋಜಾ ಅವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ಮಂಗಳೂರಿನಲ್ಲಿ ಶನಿವಾರ ನಡೆಯಿತು. “ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ವಿಧೇಯಕ” ತಿದ್ದುಪಡಿ 2025 ರಲ್ಲಿ ಪ್ರವರ್ಗ-2ಬಿ ನಲ್ಲಿ – ಕರ್ನಾಟಕ ಸರಕಾರವು, ತನ್ನ ನಿರ್ಮಾಣದ ಕೆಲಸ ಕಾರ್ಯಗಳಿಗೆ ಕಾಂಟ್ರಾಕ್ಟ್ ಗಳನ್ನು ನೀಡುವಾಗ ಅದರಲ್ಲಿನ 4% ಕಾಂಟ್ರಾಕ್ಟ್ ಗಳನ್ನು ಅಲ್ಪಸಂಖ್ಯಾತ ವರ್ಗದವರಿಗೆ ಮೀಸಲಾತಿಯನ್ನು ನೀಡಬೇಕು ಎಂಬ ಹೊಸ ಪ್ರಸ್ತಾವನೆಯನ್ನು […]