Tag: mangalore

DAKSHINA KANNADA HOME LATEST NEWS

ಕಾರಿನ ಟೈಯರ್ ಬ್ಲಾಸ್ಟ್: ಅದೃಷ್ಟವಶಾತ್ ಪಾರಾದ ಬೋಂದೆಲ್ ಚರ್ಚ್ ಪಾದ್ರಿ

ಮಂಗಳೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಎಸೆಯಲ್ಪಟ್ಟ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾವೂರು ಬಳಿಯ ಮರಕಡದಲ್ಲಿ ಜನವರಿ 1 ರಂದು ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು.‌ ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ […]

DAKSHINA KANNADA HOME LATEST NEWS

ಯಾರೂ ಹಸಿವಿನಿಂದ ಮಲಗಬಾರದು, ಮಲಗಿದರೆ ಅದು ಉಳ್ಳವರಿಗೆ ಅವಮಾನ: ರೊನಾಲ್ಡ್ ಮಾರ್ಟಿಸ್

ಮಂಗಳೂರು: ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬೈಯ ʼಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ʼನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಹೇಳಿದರು. ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಫಿಸಿಯೋಥೆರಪಿ ಸೆಂಟರ್ ಬಳಿ ಶನಿವಾರ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. […]

DAKSHINA KANNADA HOME LATEST NEWS

ಗುಣಪಾಲ ಕಡಂಬರನ್ನು ತೇಜೋವಧೆಗೈದ ಲೋಕೇಶ್ ಶೆಟ್ಟಿ ಜಿಲ್ಲಾ ಕಂಬಳ ಸಮಿತಿಯಿಂದ ಉಚ್ಛಾಟನೆ: ನಿರ್ಣಯ

ಮೂಡುಬಿದಿರೆ: ‘ಕಂಬಳ ಕ್ಷೇತ್ರಕ್ಕೆ ಕೊಡುಗೆ ನೀಡಿದ ಗುಣಪಾಲ ಕಡಂಬ ಅವರನ್ನು ತೇಜೋವಧೆ ಮಾಡಿದ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಅವರನ್ನು ಸಮಿತಿಯಿಂದ ಉಚ್ಚಾಟಿಸಬೇಕು’ ಎಂದು ಕಂಬಳ ಅಭಿಮಾನಿಗಳ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಕಂಬಳ ಕೋಣಗಳ ಯಜಮಾನ ಹರ್ಷವರ್ಧನ ಪಡಿವಾಳ್ ಅಧ್ಯಕ್ಷತೆ ವಹಿಸಿದ್ದರು. ‘ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಂಬಳ ಸೇರಿದಂತೆ ಜಿಲ್ಲೆಯ ಕೆಲವು ಕಂಬಳಗಳಲ್ಲಿ ಲೋಕೇಶ್ ಶೆಟ್ಟಿ ಅವರು ಗುಣಪಾಲ ಕಡಂಬ ಅವರನ್ನು ಟೀಕಿಸಿ ತೇಜೋವಧೆ ಮಾಡಿದ್ದಾರೆ. ಕಂಬಳದ ಹಿರಿಯ ವ್ಯಕ್ತಿ ಜತೆ […]

COMMUNITY NEWS HOME

ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್‌ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ

ಮಂಗಳೂರು:  ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ’ಸೋಜಾ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯ ಮೌಲ್ಯ ರೂ. 25,000, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಜನವರಿ 11, 2026 ರಂದು ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ನಲ್ಲಿರುವ ಮದರ್ ತೆರೇಸಾ ಪೀಸ್ ಪಾರ್ಕ್‌ನಲ್ಲಿ ನಡೆಯುವ 20 ನೇ ಕವಿತಾ ಫೆಸ್ತ್ ಉತ್ಸವದ ಸಂದರ್ಭದಲ್ಲಿ ಪ್ರಸಿದ್ಧ ಕೊಂಕಣಿ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ […]

DAKSHINA KANNADA HOME

ತಣ್ಣೀರುಬಾವಿ ಬೀಚ್‌ನಲ್ಲಿ ಇಂದು-ನಾಳೆ ಮ್ಯೂಸಿಕ್ ಫೆಸ್ಟಿವಲ್: ಪೊಲೀಸರಿಂದ ಸಂಚಾರಿ ಸಲಹೆ

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ  ಜ.3 ಹಾಗೂ 4 ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಕಾರ್ಯಕ್ರಮಗಳಿಗೆ  ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವವರಿದ್ದು, ಈ ಸಮಯ ಕೊಟ್ಟಾರಚೌಕಿ – ಪಣಂಬೂರು ರಾಷ್ಟ್ರೀಯ ಹೆದ್ದಾರಿ ಮತ್ತು ತಣ್ಣೀರುಬಾವಿ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಮೇಲಿನ ಕಾರ್ಯಕ್ರಮಗಳು ನಡೆಯುವ […]

DAKSHINA KANNADA HOME LATEST NEWS

ಮಂಗಳೂರು: ಹೊಸ ವರ್ಷಾಚರಣೆಗೆ ಪೊಲೀಸ್‌ ಮಾರ್ಗಸೂಚಿ

ಮಂಗಳೂರು: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮಾರ್ಗಸೂಚಿಗಳ ವಿವರ ಇಂತಿವೆ *ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. *ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು,ಕಿರುಕುಳವಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. *ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್‌ನ ನಡೆಸುವುದು, ಅಸಭ್ಯವರ್ತನೆ, ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. […]

DAKSHINA KANNADA HOME LATEST NEWS

ಮಂಗಳೂರು: ಡಿ.11ರವರೆಗೆ ಇಂಡಿಗೊ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿನನಿತ್ಯ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಯಾನ ಡಿ.8 ರಿಂದ 11ರ ತನಕ ರದ್ದಾಗಿದೆ. ಮಂಗಳೂರಿಗೆ ದಿನನಿತ್ಯ ಆಗಮಿಸುವ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರು(6ಇ 6674) ಬೆಳಗ್ಗೆ 8:40, ಬೆಂಗಳೂರು -ಮಂಗಳೂರು (6ಇ109) ಸಂಜೆ 5:20 ಮತ್ತು ಬೆಂಗಳೂರು -ಮಂಗಳೂರು (6ಇ6119) ರಾತ್ರಿ 10:15ಕ್ಕೆ ಆಗಮಿಸುವ ವಿಮಾನಗಳು ರದ್ದಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 7:40ಕ್ಕೆ ಹೊರಡುವ ಮಂಗಳೂರು -ಬೆಂಗಳೂರು […]

DAKSHINA KANNADA HOME LATEST NEWS

ಮಂಗಳೂರು ಮೂಲದ ರೌಡಿ ಶೀಟರ್‌ಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ

ಕಾರವಾರ:  ಮಂಗಳೂರು ಮೂಲದ ವಿಚಾರಣಾಧೀನ ರೌಡಿ ಶೀಟರ್‌ಗಳಿಬ್ಬರು ಕಾರವಾರ ಕಾರಾಗೃಹದಲ್ಲಿ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ […]

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

DAKSHINA KANNADA HOME

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರ ಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ […]