Tag: mangalore

DAKSHINA KANNADA HOME LATEST NEWS

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್‌ಫೋರ್ಸ್‌ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]

DAKSHINA KANNADA HOME LATEST NEWS NATIONAL STATE

ಬರೋಬ್ಬರಿ 8 ಜನರನ್ನು ವರಿಸಿ 9ನೇ ಮದುವೆಗೆ ರೆಡಿಯಾಗುತ್ತಿದ್ದ ಆಂಟಿ ಅರೆಸ್ಟ್‌

ಮುಂಬೈ: 35 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 8 ಸಲ ಮದುವೆಯಾಗಿ, ಅದೇ ಗಂಡಂದಿರಿಗೆ ಮೂರು ನಾಮ ಇಕ್ಕು 9ನೇ ಮದುವೆಯಾಗಲು ಸಿದ್ಧತೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 35ರ ಹರೆಯದ ಸಮೀರಾ ಫಾತಿಮಾ ಈ ಪ್ರಕರಣದ ಆರೋಪಿತೆ.  ವಿಶೇಷ ಅಂದರೆ ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, 12 ವರ್ಷದ ಮಗುವನ್ನು ಹೊಂದಿದ್ದಾಳೆ. ಆ ಮಗು ಯಾವ ಗಂಡನದ್ದು ಎಂದು ತಿಳಿದುಬಂದಿಲ್ಲ. ಸಮೀರಾ ಫಾತಿಮಾ ಮ್ಯಾಟ್ರಿಮೊನಿ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ […]

DAKSHINA KANNADA HOME LATEST NEWS STATE

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ಧರ್ಮಸ್ಥಳದ ತಲೆಬುರುಡೆ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ತನಿಖೆ ಹಂತದಲ್ಲಿದೆ. ಹೀಗಾಗಿ, ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಈ ಸಂಬಂಧ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ತಿಳಿಸಿದರು. ಎಸ್‍ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. […]

DAKSHINA KANNADA HOME LATEST NEWS

ಪುತ್ತೂರು: ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ  2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು,  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]

DAKSHINA KANNADA HOME LATEST NEWS

ಕ್ರೈಸ್ತ ಸನ್ಯಾಸಿಯರ ಬಂಧನ ಖಂಡಿಸಿ ಆ.4ರಂದು ಕಥೋಲಿಕ್‌ ಸಭಾದಿಂದ ಬೃಹತ್‌ ಪ್ರತಿಭಟನೆ

ಮಂಗಳೂರು: ಛತ್ತೀಸ್‌ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರನ್ನು ಮತಾಂತರ ಆರೋಪ ಹೊರಿಸಿ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆ.4 ರಂದು ಮಂಗಳೂರಿನಲ್ಲಿ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಇದರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಸಂತೋಷ್ ಡಿಸೋಜಾ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶಾದ್ಯಂತ ಕ್ರೈಸ್ತ ಧರ್ಮಗುರುಗಳು, ಧರ್ಮ ಭಗಿನಿಯರು ಹಾಗೂ ಕ್ರೈಸ್ತ ಸಮುದಾಯದವರು ಶಾಂತಿ ಪ್ರಿಯರಾಗಿದ್ದು ದೇಶ ಭಕ್ತಿಯನ್ನು ಹೊಂದಿದವರಾಗಿರುತ್ತಾರೆ. […]

DAKSHINA KANNADA HOME LATEST NEWS

ಕೊಣಾಜೆ: ಯುವತಿ ನಾಪತ್ತೆ

ಕೊಣಾಜೆ:  ಇಲ್ಲಿನ ಠಾಣಾ‌ ವ್ಯಾಪ್ತಿಯ ಮಹಿಳಾ ಆಶ್ರಯ ಕೇಂದ್ರದಲ್ಲಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಒಡಿಷಾ ಮೂಲದ ತ್ರಿಶಾ (22) ಎಂಬಾಕೆಯೇ ನಾಪತ್ತೆಯಾದ ಯುವತಿಯಾಗಿದ್ದು, ಈಕೆ ಜುಲೈ 30ರಂದು ರಾತ್ರಿ 8 ಗಂಟೆಯ ಸುಮಾರಿಗೆ ನಾಪತ್ತೆಯಾಗಿದ್ದಾಳೆ.  ಕಳೆದ‌ ವರ್ಷ ತ್ರಿಶಾ ಉದ್ಯೋಗದ ಹುಡುಕಾಟದಲ್ಲಿ ಮಂಗಳೂರಿಗೆ ಬಂದಿದ್ದಳು ಎನ್ನಲಾಗಿದ್ದು‌ ಬಳಿಕ, ಇತ್ತೀಚೆಗೆ ಮಡಿಪುವಿನ ಪ್ರಜ್ಞಾ ಆಶ್ರಯ ಮಂದಿರದಲ್ಲಿ ವಾಸವಾಗಿದ್ದಳು. ಈಕೆ ಜುಲೈ 30 ರಂದು ರಾತ್ರಿ ಅಡುಗೆ ಕೋಣೆಯ ಬಾಗಿಲು ತೆರೆದು ಕೌಂಪೌಂಡು ಹಾರಿ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. […]

HOME

ಮಂಗಳೂರು: 1300 ಕೋ.ರೂ ವ್ಯವಹಾರದ 113 ವರ್ಷಗಳ ಇತಿಹಾಸದ MCC ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ

ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಹಕಾರ ರತ್ನ ಅನಿಲ್ ಲೋಬೊ ಅವರು ತಿಳಿಸಿದರು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ […]

DAKSHINA KANNADA HOME

ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊಗೆ ಶೃದ್ಧಾಂಜಲಿ

ಮಂಗಳೂರು: ಕೊಂಕಣಿ ಭಾಷಾ ಕರ್ನಾಟಕ ಇದರ ಕಾರ್ಯಕಾರಿ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಕೊಂಕಣಿ ಭಾಷೆಗೆ 27 ಪುಸ್ತಕ ದೇಣಿಗೆ ನೀಡಿದ ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ಕೆಬಿಎಂಕೆ ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ, ಲೈಬ್ರೆರಿಗಳಲ್ಲಿ ಹುಡುಕಿ ಹಲವು ಸಾಹಿತ್ಯದ ವಿವಿಧ ದಾಖಲೆಗಳನ್ನು ತೆಗೆದು ತನ್ನ ಸ್ವಂತ ಖರ್ಚಿನಲ್ಲಿ ಪುಸ್ತಕ ಪ್ರಕಾಶನ ಮಾಡಿದ ಸಾಹಿತ್ಯದ ಶ್ರಮಜೀವಿ ಗ್ಲ್ಯಾಡಿಸ್ ರೇಗೊ ಆಗಿದ್ದರು ಎಂದು ಗುಣಗಾನ ಮಾಡಿದರು. ಕವಿ ಜೊಸ್ಸಿ ಪಿಂಟೊ ಮಾತನಾಡಿ,ಕೊಂಕಣಿ […]

DAKSHINA KANNADA HOME LATEST NEWS

ಮಂಗಳೂರು: ಜು.22 ರ ರಾತ್ರಿಯಿಂದ ಕೂಳೂರು ರಸ್ತೆ ದುರಸ್ಥಿ ಕಾಮಗಾರಿ

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜು.22 ರ ಮಂಗಳವಾರ ರಾತ್ರಿ 8-00 ಗಂಟೆಯಿಂದ ಜು.25ರ ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಹಾಗಾಗಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದರಿಂದ ಕೋಡಿಕಲ್ ಕ್ರಾಸ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಅದೇ ರೀತಿ ಪಣಂಬೂರು ಜಂಕ್ಷನ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಬಹುದಾಗಿದೆ. ಆದ್ದರಿಂದ […]

DAKSHINA KANNADA HOME

ನಾಯಕತ್ವವು ಉತ್ತಮ ಗುಣ & ಪ್ರತಿಭೆಗಳನ್ನು ಹೊರತರುವ ಅವಕಾಶ: ರೆ. ಫಾ.ವಾಲ್ಟರ್ ಡಿಸೋಜಾ

ಮಂಗಳೂರು: ನಗರದ ಪಾದುವ ಪದವಿ ಪೂರ್ವ  ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರತಿಭಾ ದಿನ ಸಂತ ಸೆಬಾಸ್ಟಿಯನ್ ಹಾಲ್ ಬೆಂದೂರ್ ನಲ್ಲಿ ಜರಗಿತು.ಅಧ್ಯಕ್ಷತೆ ವಹಿಸಿದ್ದ ಪಾದುವ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ .ಫಾ.ವಾಲ್ಟರ್ ಡಿಸೋಜಾ ಮಾತನಾಡಿ,  ನಾಯಕತ್ವವು  ಕೇವಲ ಸ್ಥಾನ ಅಥವಾ ಬಿರುದುಗಲಾಗಿರದೆ, ಅದು ಇತರರಲ್ಲಿ ಉತ್ತಮವಾದ ಗುಣ ಮತ್ತು ಪ್ರತಿಭೆಗಳನ್ನು ಹೊರತರುವ ಅವಕಾಶ ಎಂದು ಹೇಳಿದರು. ಮುಖ್ಯ ಅತಿಥಿಯಾದ ಲೆಸ್ಲಿ ನೋಯೆಲ್ ರೇಗೊ ಮಾತನಾಡಿ, ಕಾಲೇಜು ಜೀವನವೆಂದರೆ ವ್ಯಕ್ತಿತ್ವ ನಿರ್ಮಾಣಕ್ಕೆ ಅವಕಾಶ. ವಿದ್ಯಾರ್ಥಿಗಳು ಯಶಸ್ಸಿನ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678