Tag: mangalore

DAKSHINA KANNADA HOME LATEST NEWS

ಮಂಗಳೂರು-ಮೂಡಬಿದ್ರೆ ಹೆದ್ದಾರಿ ದುರಸ್ತಿ: 30 ದಿನ ಬದಲಿ ರಸ್ತೆ ಉಪಯೋಗಿಸಲು ಸಲಹೆ

ಮಂಗಳೂರು: ತಾಲೂಕಿನ ಬಜ್ಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹಾಗೂ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ವಾಹನಗಳ ಓಡಾಟಕ್ಕೆ ಇದ್ದ ಹಳೆ ರಸ್ತೆಯು ಘನ ವಾಹನಗಳ ಓಡಾಟದಿಂದಾಗಿ ಬಿರುಕು ಬಿಟ್ಟು ಅಲ್ಲಲ್ಲಿ ಕುಸಿಯಲು ಪ್ರಾರಂಭಿಸಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆ. 12ರಿಂದ ಮಾ.13ರವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಠಿಯಿಂದ […]

DAKSHINA KANNADA HOME LATEST NEWS

ಮಡಂತ್ಯಾರಿನಲ್ಲಿ ಬಾಲ್ಯವಿವಾಹಕ್ಕೆ ತಡೆ

ಬೆಳ್ತಂಗಡಿ: ಇಲ್ಲಿನ ಮಡಂತ್ಯಾರಿನಲ್ಲಿ ಬಾಲ್ಯವಿವಾಹ ನಡೆಯುವ ಸಂದರ್ಭದಲ್ಲಿ ಮಂಗಳೂರು ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆಯ ನೇತೃತ್ವದಲ್ಲಿ ತಡೆಗಟ್ಟಿದ ಘಟನೆ ಫೆ.8 ರಂದು ನಡೆಯಿತು. ಕಳಿಯ ಗ್ರಾಮದ ಜನತಾ ಕಾಲೋನಿ ನಿವಾಸಿ ಅಸ್ಮಾ ಮತ್ತು ಆಶ್ರಫ್ ದಂಪತಿಗಳ ಪುತ್ರಿಯ ಮದುವೆ ಹಮ್ಮಿಕೊಂಡಿದ್ದರು. ಅದರಂತೆ ಮಸೀದಿಯಲ್ಲಿ ಮದುವೆ ನಡೆಸಲು ತಯಾರಿ ನಡೆದಿದೆ. ಮದುವೆಯಾಗುವ ಹುಡುಗಿಗೆ 18 ವರ್ಷ ಪೂರ್ಣ ಅಗದಿರುವ ಬಗ್ಗೆ ಮಂಗಳೂರು ಮಕ್ಕಳ ರಕ್ಷಣಾ ಇಲಾಖೆಗೆ ಮಾಹಿತಿ ತಿಳಿಯಿತು. ಈ ವೇಳೆ ಸ್ಥಳಕ್ಕೆ ಧಾವಿಸಿದ ಕಳಿಯ ಗ್ರಾಮ ಪಂಚಾಯತ್ […]

DAKSHINA KANNADA HOME LATEST NEWS STATE

ವಿಜಯಪುರದ ಮಂಗಳೂರಿನಲ್ಲಿ ಜೆಟ್‌ ವಿಮಾನ ಪತನ

ವಿಜಯಪುರ: ಖಾಸಗಿ ಜೆಟ್ ವಿಮಾನವೊಂದು ಪತನಗೊಂಡಿದ್ದು ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾದ ಘಟನೆ ವಿಜಯಪುರ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಫೆ.8 ರಂದು ನಡೆದಿದೆ. ಈ ವಿಮಾನದಲ್ಲಿ ಪೈಲಟ್ ಗಳಾದ ಗೌತಮ್ ಮತ್ತು ಕಂಪನಿ ಸಿಬ್ಬಂದಿ ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಪತಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೂ ಗಂಭೀರ ಪ್ರಮಾಣದ ಗಾಯಗಳಾಗಿದ್ದು ನಗರದ ಬಿಎಲ್‌ಡಿಇ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಲಾಗಿದೆ.

DAKSHINA KANNADA HOME LATEST NEWS

ಪಿಲಿಕುಳ ಎಂದಿನಂತೆ ವೀಕ್ಷಣೆಗೆ ಮುಕ್ತ: ಸುಳ್ಳು ಸುದ್ದಿಗೆ ಆಯುಕ್ತರಿಂದ ಸ್ಪಷ್ಟನೆ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ನಿರ್ವಹಣೆಯ ಬಗ್ಗೆ ಸ್ವೀಕೃತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇದುವರೆಗೆ ಯಾವುದೇ ತೀರ್ಪು/ನಿರ್ದೇಶನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಂದಿರುವುದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪಿಲಿಕುಳ ಜೈವಿಕ ಉದ್ಯಾನವನವು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಪತ್ರಿಕಾ ಸ್ಪಷ್ಟನೆ ನೀಡಿದೆ.

DAKSHINA KANNADA HOME LATEST NEWS

ಮಂಗಳೂರು: ಯುವತಿ ಮೃತದೇಹವಿಟ್ಟು ಪ್ರತಿಭಟಿಸಿದ 50 ಮಂದಿ ವಿರುದ್ಧ FIR

ಮಂಗಳೂರು: ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಯುವತಿಯ ಮೃತದೇಹವನ್ನಿಟ್ಟು ಪ್ರತಿಭಟಿಸಿದ ಸುಮಾರು 50 ಮಂದಿ ವಿರುದ್ಧ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿಗಳನ್ನು 1) ಅಮೀತ್, ವಿವೇಕನಗರ ಬಲ್ಲಾಳ್ ಭಾಗ್ 2) ಕೀರ್ತನ್ ,ವಿವೇಕನಗರ ಬಲ್ಲಾಳ್ ಭಾಗ್ 3) ನವೀತ್ ವಿವೇಕನಗರ , ಬಲ್ಲಾಳ್ ಭಾಗ್  4) ಭರತ್ ರಾಜ್  ವಿವೇಕನಗರ ಬಲ್ಲಾಳ್ ಭಾಗ್ ,5) ಪವನ್, ವಿವೇಕನಗರ ಬಲ್ಲಾಳ್ ಭಾಗ್ 6) ಲೋಕೆಶ್,ಮಂಗಳಾದೇವಿ,7) ಮನ್ವೀತ್ ಬಲ್ಲಾಳ್ ಭಾಗ್ 8) ಅನೀಲ ಕುಮಾರ್ ಕಂಕನಾಡಿ […]

DAKSHINA KANNADA HOME LATEST NEWS

ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್‌ ಢಿಕ್ಕಿ: ಓರ್ವ ಗಂಭೀರ

ಮುಲ್ಕಿ: ರಸ್ತೆ ಬದಿ ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್‌ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಪಾವಂಜೆ ದೇವಸ್ಥಾನದ ಮುಂಭಾಗ ಇಂದು ಸಂಜೆ ನಡೆಸಿದೆ. ಗಾಯಗೊಂಡವರನ್ನು‌ ಶಿಕ್ಷಕಿ ಕುಸುಮಾ ಮತ್ತು ಅವರ ಮಗಳು ಸುಮಲತಾ (14) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಾವಂಜೆಯಲ್ಲಿ ನಿಂತು ಬಸ್ ಕಾಯುತ್ತಿದ್ದ ವೇಳೆ ಮಂಗಳೂರು- ಉಡುಪಿ ಕಡೆ ಸಂಚರಿಸುತ್ತಿದ ಟ್ರೈಲರ್‌ ಢಿಕ್ಕಿ ಹೊಡೆದಿದೆ. ಘಟನೆಯಿಂದ ಕುಸುಮಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸುಮಲತಾ ಅವರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ […]

DAKSHINA KANNADA HOME LATEST NEWS

ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚಿಸುತ್ತಿದ್ದವರ ಬಂಧನ

ಮಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಗುಜರಾತ್‌ನ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಪುಪ್ಲ ಶಿವಕುಮಾರ್ ರಾವ್ (32) ಮತ್ತು ರಾಜೇಶ್ ಮಂಡನ್ (30), ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ಗೌರವ್ ಪಾಂಡೆ (24) ಮತ್ತು […]

DAKSHINA KANNADA HOME LATEST NEWS

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಬೆಳ್ತಂಗಡಿಯ 60ರ ವೃದ್ಧನಿಗೆ 3 ವರ್ಷ ಕಠಿಣ ಸಜೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 60 ವರ್ಷದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತಗತಿ (ಪೊಕ್ಸೊ) ನ್ಯಾಯಾಲಯ–1 ಮೂರು ವರ್ಷಗಳ ಕಠಿಣ ಸಜೆ ವಿಧಿಸಿದೆ. ಈ ಪ್ರಕರಣದ ಸಂತ್ರಸ್ತೆಗೆ ₹2 ಲಕ್ಷ ಪರಿಹಾರ ನೀಡಬೇಕು ಎಂದೂ ನ್ಯಾಯಾಧೀಶರಾದ ಮೋಹನ ಜೆ.ಎಸ್‌ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಅಪರಾಧಿಯನ್ನು ಶಂಕರ ಗೌಡ (60) ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ ಶಂಕರ ಗೌಡ 2025ರ ಮಾ 21ರಂದು 16 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು […]

HOME STATE

“ಫೇಸ್‌ಬುಕ್‌ ಪೋಸ್ಟ್‌ಗಾಗಿ ಹಲ್ಲೆ ಮಾಡುವುದು ಸರಿಯಲ್ಲ” ಪುನೀತ್‌ ಕೆರೆಹಳ್ಳಿ ವಿರುದ್ಧ ಹೈ ಕಿಡಿ

ಬೆಂಗಳೂರು: “ರೀಲ್ಸ್‌ ಮತ್ತು ಫೇಸ್‌ಬುಕ್‌ ಪೋಸ್ಟ್‌ಗಾಗಿ ಹಲ್ಲೆ ಮಾಡುವುದು ಅಥವಾ ಪೊಲೀಸರನ್ನು ನಿಂದಿಸುವುದು ಸರಿಯಲ್ಲ” ಎಂದು ಪುನೀತ್‌ ಕೆರೆಹಳ್ಳಿಯ ವಿರುದ್ಧ ಕಿಡಿಕಾರಿರುವ ಕರ್ನಾಟಕ ಹೈಕೋರ್ಟ್‌, ಅವರ ವಿರುದ್ಧದ  ಆರೋಪ ಪಟ್ಟಿಗೆ ತಡೆ ನೀಡಿದೆ. ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಸಂಬಂಧ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ರದ್ದತಿ ಕೋರಿ ಪುನೀತ್‌ ಕೆರೆಹಳ್ಳಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಪಿ ಎನ್‌ ಮನಮೋಹನ್‌ […]

DAKSHINA KANNADA HOME LATEST NEWS

ಮಂಗಳೂರು: ನಂತೂರಿನಲ್ಲಿ ಯುವತಿ ಹೊಟ್ಟೆ ಮೇಲೆ ಹರಿದ ಸಿಟಿ ಬಸ್ಸು

ಮಂಗಳೂರು: ಸಿಟಿ ಬಸ್‌ಗಳ ಅವಸರದ ವೇಗಕ್ಕೆ ಮತ್ತೊಂದು ಜೀವವೊಂದು ನಿನ್ನೆ ಬಲಿಯಾಗಿದೆ. ನಂತೂರು ಬಸ್ ಸ್ಟಾಪ್ ಬಳಿ ಸ್ಕೂಟರಿಗೆ ಹಿಂದಿನಿಂದ ಗುದ್ದಿದ ಪರಿಣಾಮ ಸಹ ಸವಾರೆಯೊಬ್ಬರ ಹೊಟ್ಟೆಯ ಮೇಲೆ ಬಸ್ಸು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನಗರದ ಬಳ್ಳಾಲ್‌ಭಾಗ್‌ ನಿವಾಸಿ ದೀಪ್ತಿ (26) ಎಂದು ಗುರುತಿಸಲಾಗಿದೆ. ಘಟನೆ ವಿವರ ನಿನ್ನೆ ರಾತ್ರಿ ಸಮಯ ಸುಮಾರು 7-45 ಗಂಟೆಗೆ ನಂತೂರು ಬಸ್ಟ್ಯಾಂಡ್ ಬಳಿ ಬಲ್ಲಾಳ್ ಭಾಗ್ ಕಡೆಯಿಂದ ವಾಮಂಜೂರು ಕಡೆಗೆ KA- 19HT-8178 ನಂಬರ್‌ನ ಸ್ಕೂಟರ್‌ನಲ್ಲಿ […]