Tag: mangalore

DAKSHINA KANNADA HOME LATEST NEWS STATE

ಎಚ್ಚರಿಕೆ: ಇಂದಿನಿಂದ ಜ.31ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಮುನ್ಸೂಚನೆ

ಮಂಗಳೂರು:- ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

DAKSHINA KANNADA HOME LATEST NEWS STATE

ಪೌರಾಯುಕ್ತೆಗೆ ಧಮ್ಕಿ ಹಾಕಿದ ಕೈ ಮುಖಂಡನಿಗೆ ಆಶ್ರಯ ನೀಡಿದ ಮೈಕಲ್ ರೇಗೊಗೆ ಜಾಮೀನು

ಬೆಂಗಳೂರು:  ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್​​​ ಮುಂದೆ ಹಾಜರುಪಡಿಸಿದರು. ಇದೀಗ ಕೋರ್ಟ್ ರಾಜಿವ್ ಗೌಡನನ್ನು ಜೈಲಿಗೆ ಕಳುಹಿಸಿದೆ. ಮಂಗಳೂರಿನಲ್ಲಿ ಪತ್ತೆಯಾದ ಕಾರು ಹಾಗೂ ಆರೋಪಿ ಕಾಂಗ್ರೆಸ್‌ ಮುಖಂಡ […]

DAKSHINA KANNADA HOME LATEST NEWS

ಶೇರ್ ಮಾರ್ಕೆಟಿಂಗ್ ಹೆಸರಲ್ಲಿ ಮಂಗಳೂರ ವ್ಯಕ್ತಿಗೆ ರೂ. 1,38,20,060 ದೋಖಾ

ಮಂಗಳೂರು: ಆನ್ ಲೈನ್ ಶೇರು ಮಾರುಕಟ್ಟೆಯ ಬಗ್ಗೆ ವಾಟ್ಸಾಪ್ ಮೇಸೆಜ್ ಗಳನ್ನು ನಂಬಿ ವ್ಯಕ್ತಿಯೋರ್ವರು ರೂ 1,38,20,060/- ಹಣ ಕಳೆದುಕೊಂಡ ಬಗ್ಗೆ ಮಂಗಳೂರು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಮಂಗಳೂರಿನ ವ್ಯಕ್ತಿಯೋರ್ವರ ಮೊಬೈಲಿಗೆ ರಿಶಿತಾ ಎಂಬ ಅಪರಿಚಿತ ವ್ಯಕ್ತಿ 9205298139 ನೇ ವಾಟ್ಸಾಫ್ ನಂಬ್ರದಿಂದ ಮಂಗಳೂರ ವ್ಯಕ್ತಿಯ ಕಂಪನಿಯ Carpets & Home decorative items ಬೇಕೆಂದು ವಾಟ್ಸಪ್ ಮೇಸೆಜ್ ಮಾಡಿದ್ದಾರೆ.  ಅದರಂತೆ ಈ ವ್ಯಕ್ತಿ ತನ್ನ ಕಂಪನಿಯ Carpets & Home […]

DAKSHINA KANNADA HOME LATEST NEWS

ಮುಲ್ಕಿ ಜೋಡಿ ಕೊಲೆ ಪ್ರಕರಣ: ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ಘಟನೆ ವಿವರ ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ  2020ರ ಏ.29 ರಂದು ಆರೋಪಿ ಆಲ್ಫೋನ್ಸ್ ಸಲ್ದಾಣನು ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿ.ಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ […]

DAKSHINA KANNADA HOME LATEST NEWS

ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರಂಟ್ ಜಾರಿ ಸಿಬ್ಬಂದಿ ಬಂಧಿಸಿದ್ದಾರೆ. ತೊಕ್ಕೊಟ್ಟು ನಿವಾಸಿ ನವೀನ್ ಸಿಕ್ವೇರಾ (52)ಬಂಧಿತ ಆರೋಪಿ. 2011–12ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಸಂಖ್ಯೆ 195/2011, ಕಲಂ 392 ಐಪಿಸಿ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015ರಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಸೆರೆವಾಸ ಮತ್ತು 5,000 ರೂ. […]

DAKSHINA KANNADA HOME LATEST NEWS

ಮೂಡಬಿದ್ರೆಯಲ್ಲಿ ಜ. 30 ರಿಂದ ಅಗ್ನಿವೀರ್ ನೇಮಕಾತಿ ರ್ಯಾಲಿ

ಮಂಗಳೂರು: ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30 ರಿಂದ ಫೆಬ್ರವರಿ 10 ರವರೆಗೆ ಮೂಡಬಿದ್ರಿ ಸ್ವರಾಜ್ ಮೈದಾನದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ನಡೆಯಲಿದೆ. ರಾಜ್ಯದ 11 ಜಿಲ್ಲೆಗಳಿಂದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಕಿರುಪಟ್ಟಿ ಮಾಡಿದ ಅಭ್ಯರ್ಥಿಗಳಿಗಾಗಿ 1 ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಜನವರಿ 30 ರಿಂದ ಫೆಬ್ರವರಿ 10 ರವರೆಗೆ ಮೂಡಬಿದ್ರಿಯ ಸ್ವರಾಜ್ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ. 30 […]

DAKSHINA KANNADA HOME LATEST NEWS

ಬಿಕರ್ನಕಟ್ಟೆ ಪುಣ್ಯಕ್ಷೇತ್ರ: ವಾರ್ಷಿಕ ಮಹೋತ್ಸವದ ಎರಡನೇ ದಿನ ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ: ಇಲ್ಲಿನ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಎರಡನೇ ದಿನವು ಭಕ್ತಾದಿಗಳ ಅಭೂತಪೂರ್ವ ಸ್ಪಂದನೆಗೆ ಸಾಕ್ಷಿಯಾಯಿತು. ದಿನವಿಡೀ ಸುಮಾರು 40,000ಕ್ಕೂ ಹೆಚ್ಚು ಭಕ್ತರು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ, ಬಾಲ ಯೇಸುವಿನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.   ಬೃಹತ್ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರಿಗಾಗಿ ಕೊಂಕಣಿ ಮತ್ತು ಮಲಯಾಳಂ ಭಾಷೆಗಳಲ್ಲಿ ಒಟ್ಟು ಐದು ಪವಿತ್ರ ಬಲಿಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ದಿನದ ಪ್ರಮುಖ ಆಕರ್ಷಣೆಯಾಗಿ ಬೆಳಗ್ಗೆ 10:00 ಗಂಟೆಗೆ ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ. ಡಾ. ದುಮಿಂಗ್ ಡಾಯಸ್ […]

DAKSHINA KANNADA HOME LATEST NEWS

ಮೂಡುಬಿದಿರೆ: ಬಾಲಕನಿಗೆ ಲೈಂಗಿಕ ದೌರ್ಜನ್ಯ- ಶಿಕ್ಷಕನ ವಿರುದ್ಧ ಫೋಕ್ಸೊ ಕೇಸು ದಾಖಲು

ಮೂಡುಬಿದಿರೆ: ವಿದ್ಯಾರ್ಥಿಯೊಬ್ಬನಿಗೆ ವಿಶೇಷ ತರಗತಿಯ ನೆಪದಲ್ಲಿ ಕರೆದೊಯ್ದು ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿಕ್ಷಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಅಲ್ತಾಫ್ ಬಂಧಿತ ಆರೋಪಿ.ಗ್ರಾಮದ ಶಾಲೆಯೊಂದರಲ್ಲಿ ಸಂತ್ರಸ್ತ ಬಾಲಕ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಗಣಿತ ವಿಷಯದಲ್ಲಿ ಹೆಚ್ಚು ಅಂಕ ಕೊಡಿಸುವುದಾಗಿ ನಂಬಿಸಿದ ಶಿಕ್ಷಕ ಅಲ್ತಾಫ್, ಬಾಲಕನನ್ನು ತನ್ನ ಕೊಠಡಿಗೆ ಕರೆಸಿಕೊಂಡು ಅಲ್ಲಿ ಬಾಲಕನಿಗೆ ಮಾದಕ ದ್ರವ್ಯ ಬೆರೆಸಿದ ಜ್ಯೂಸ್ ನೀಡಿ ಅರೆಪ್ರಜ್ಞಾವಸ್ಥೆಗೆ ತಲುಪಿಸಿ, ಆತನ ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ […]

DAKSHINA KANNADA HOME LATEST NEWS

ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ: ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್

ಮಂಗಳೂರು: ಜನರಿಗೆ ಮನೆ, ಕಾರು, ಚಿನ್ನದ ಆಮಿಷ ಒಡ್ಡಿ ಜನರಿಂದ ಸಾವಿರಾರು ಮಂದಿಗೆ ಪಂಗನಾಮ ಹಾಕುತ್ತಿರುವ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಒಂದು ಒತ್ತಾಯಿಸಿದ್ದಾರೆ. ಲಕ್ಕಿ ಸ್ಕೀಮ್ ಕಂಪೆನಿಯಿಂದ ವಂಚನೆಗೆ ಒಳಗಾದ ಸಂತ್ರಸ್ತರ ಪ್ರತಿಭಟನೆಯನ್ನು ನಗರದ ಕ್ಲಾಕ್ ಟವರ್ ಬಳಿ ಉದ್ಘಾಟಿಸಿ ಮಾತನಾಡಿದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗಿದೆ ಮಂಗಳೂರಲ್ಲಿ ಸುಮಾರು 100ಕ್ಕೂ ಹೆಚ್ಚು ಬ್ಲೇಡ್ ಕಂಪೆನಿಗಳು ಸಾವಿರಾರು ಕೋಟಿ ಜನರಿಂದ […]

DAKSHINA KANNADA HOME LATEST NEWS

ಮಂಗಳೂರು: ಅಪಘಾತದಲ್ಲಿ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ₹ 70 ಲಕ್ಷ ರೂ. ಆರ್ಥಿಕ ನೆರವು

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು, ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ  ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ […]