Tag: mangalore

DAKSHINA KANNADA HOME LATEST NEWS

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಶುಭಾರಂಭ

ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.   ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು […]

DAKSHINA KANNADA HOME

ಮೆರ್ಸಿನ್ ಮಾತೆ ಇಗರ್ಜಿ ಪಾನೀರಿನಲ್ಲಿ ಪರಿಸರ ದಿನಾಚರಣೆ & ಸ್ವಚ್ಚತಾ ಅಭಿಯಾನ

ಮಂಗಳೂರು: ಪಾನೀರ್ ಮೆರ್ಸಿನ್ ಮಾತೆಯ ಇಗರ್ಜಿ ಹಳೆ ಚರ್ಚ್ ವಟಾರದಲ್ಲಿ ಭಾನುವಾರ ಪರಿಸರ ದಿನಾಚರಣೆ – ಲಾವ್ದಾತೊ ಸಿ ಹಾಗೂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಪರಿಸರ ಆಯೋಗ ಹಾಗೂ ಕೃಷಿ ಸಮಿತಿ ಸಂಯುಕ್ತವಾಗಿ ಆಯೋಜಿಸಿತ್ತು. ವಂ. ಫಾ. ವಿಕ್ಟರ್ ಡಿ ಮೆಲ್ಲೋ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚರ್ಚ್ ಗುರುಗಳು ದೇವರ ಆಶೀರ್ವಾದ ಬೇಡಿ, ಹಣ್ಣು ಹಂಪಲು ಗಿಡಗಳನ್ನು ಹಂಚಿ […]

DAKSHINA KANNADA LATEST NEWS

ಲಕ್ಕಿ ಸ್ಕೀಂ- 13 ಸಾವಿರ ಮಂದಿಗೆ 15 ಕೋ.ರೂ ವಂಚನೆ: ನಾಲ್ವರ ಬಂಧನ

ಮಂಗಳೂರು: ಸುರತ್ಕಲ್‌ ವ್ಯಾಪ್ತಿಯಲ್ಲಿ ಲಕ್ಕಿ ಸ್ಕೀಮ್‌ಗಳ ಮೂಲಕ ಗ್ರಾಹಕರಿಗೆ ನಾನಾ ರೀತಿಯ ಬಹುಮಾನಗಳ ಆಮಿಷ ತೋರಿಸಿ 15ಸಾವಿರ ಮಂದಿಗೆ 15ಕೋಟಿ ರೂ.ಗೂ ಮಿಕ್ಕಿ ಹಣ ಸಂಗ್ರಹ ಮಾಡಿ ಬಳಿಕ ವಂಚನೆಗೈದ ಪ್ರತ್ಯೇಕ ಎರಡು ಪ್ರಕರಣದಲ್ಲಿ ನಾಲ್ವರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈನ್‌ ಎಂಟರ್‌ ಪ್ರೈಸಸ್‌ ಎಂಬ ಲಕ್ಕಿ ಸ್ಕೀಮ್‌ನಲ್ಲಿವಂಚನೆ ಮಾಡಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನದ ಬಳಿಯ ನಿವಾಸಿ ಅಹಮ್ಮದ್‌ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ನಝೀರ್‌ ನಾಸೀರ್‌ (39) ಹಾಗೂ […]

DAKSHINA KANNADA HOME LATEST NEWS

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆ ಮಗುಚಿ ಬಿದ್ದು ಸಾವು

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆಯೇ ಮಗುಚಿ ಬಿದ್ದ ಪರಿಣಾಮ ತಂದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದಲ್ಲಿ ಆ.7 ರಂದು ನಡೆದಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ದಿನೇಶ್ ಎಂಬುವವರು ಕೆಎ- 19-ಎಂ-8745 ನೋಂದಣಿಯ ಜೀಪು ಚಲಾಯಿಸುತ್ತಿದ್ದಾಗ ಹತ್ತದೇ ಅರ್ಧದಲ್ಲಿ ನಿಂತಿದೆ. ಆಗ ಜೀಪಲ್ಲಿ ಇದ್ದ ಅವರ ದಿನೇಶ್  ಅವರ ತಂದೆ ಧರ್ಮಪಾಲ […]

DAKSHINA KANNADA HOME LATEST NEWS

ಸ್ನೇಹಿತರೊಂದಿಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದ 23ರ ಯುವತಿ ನಾಪತ್ತೆ

ಮಂಗಳೂರು: 23 ವರ್ಷದ ಯುವತಿಯೋರ್ವಳು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೋದವಳು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖೈರುನ್ನಿಸ ಮಹಮ್ಮದ್ ನಾಸೀರ ಎಂಬುವವರ ಮಗಳಾದ ಶಾಹಿನ ಬಾನು  ಆ.7 ರಂದು ನಾನು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದಾರೆ. ತಡರಾತ್ರಿಯಾದರೂ ಮನೆಗೆ ಬಾರದೆ ಇರುವುದರಿಂದ, ಗಾಬರಿಗೊಂಡ ಮನೆಯವರು ನೆರೆಕರೆ ಮನೆಯವರಲ್ಲಿ ವಿಚಾರಿಸಿ ಸುತ್ತ ಮುತ್ತ ಪ್ರದೇಶಗಳಲ್ಲಿ ಹುಡುಕಾಡಿದರೂ ಆಕೆಯ ಬಗ್ಗೆ […]

DAKSHINA KANNADA HOME LATEST NEWS

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್‌ಫೋರ್ಸ್‌ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]

DAKSHINA KANNADA HOME LATEST NEWS NATIONAL STATE

ಬರೋಬ್ಬರಿ 8 ಜನರನ್ನು ವರಿಸಿ 9ನೇ ಮದುವೆಗೆ ರೆಡಿಯಾಗುತ್ತಿದ್ದ ಆಂಟಿ ಅರೆಸ್ಟ್‌

ಮುಂಬೈ: 35 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 8 ಸಲ ಮದುವೆಯಾಗಿ, ಅದೇ ಗಂಡಂದಿರಿಗೆ ಮೂರು ನಾಮ ಇಕ್ಕು 9ನೇ ಮದುವೆಯಾಗಲು ಸಿದ್ಧತೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 35ರ ಹರೆಯದ ಸಮೀರಾ ಫಾತಿಮಾ ಈ ಪ್ರಕರಣದ ಆರೋಪಿತೆ.  ವಿಶೇಷ ಅಂದರೆ ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, 12 ವರ್ಷದ ಮಗುವನ್ನು ಹೊಂದಿದ್ದಾಳೆ. ಆ ಮಗು ಯಾವ ಗಂಡನದ್ದು ಎಂದು ತಿಳಿದುಬಂದಿಲ್ಲ. ಸಮೀರಾ ಫಾತಿಮಾ ಮ್ಯಾಟ್ರಿಮೊನಿ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ […]

DAKSHINA KANNADA HOME LATEST NEWS STATE

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ಧರ್ಮಸ್ಥಳದ ತಲೆಬುರುಡೆ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ತನಿಖೆ ಹಂತದಲ್ಲಿದೆ. ಹೀಗಾಗಿ, ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಈ ಸಂಬಂಧ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ತಿಳಿಸಿದರು. ಎಸ್‍ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. […]

DAKSHINA KANNADA HOME LATEST NEWS

ಪುತ್ತೂರು: ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ  2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು,  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]

DAKSHINA KANNADA HOME LATEST NEWS

ಕ್ರೈಸ್ತ ಸನ್ಯಾಸಿಯರ ಬಂಧನ ಖಂಡಿಸಿ ಆ.4ರಂದು ಕಥೋಲಿಕ್‌ ಸಭಾದಿಂದ ಬೃಹತ್‌ ಪ್ರತಿಭಟನೆ

ಮಂಗಳೂರು: ಛತ್ತೀಸ್‌ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರನ್ನು ಮತಾಂತರ ಆರೋಪ ಹೊರಿಸಿ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆ.4 ರಂದು ಮಂಗಳೂರಿನಲ್ಲಿ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಇದರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಸಂತೋಷ್ ಡಿಸೋಜಾ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶಾದ್ಯಂತ ಕ್ರೈಸ್ತ ಧರ್ಮಗುರುಗಳು, ಧರ್ಮ ಭಗಿನಿಯರು ಹಾಗೂ ಕ್ರೈಸ್ತ ಸಮುದಾಯದವರು ಶಾಂತಿ ಪ್ರಿಯರಾಗಿದ್ದು ದೇಶ ಭಕ್ತಿಯನ್ನು ಹೊಂದಿದವರಾಗಿರುತ್ತಾರೆ. […]