Tag: mangalore

DAKSHINA KANNADA HOME LATEST NEWS

ಮಂಗಳೂರು ಸಂಸದ ಹಾಗೂ ಶಾಸಕ ಪೂಂಜಾರಿಂದ ಸಚಿವ ನಿತಿನ್ ಗಡ್ಕರಿ ಭೇಟಿ

ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಜತೆಗೆ ಇಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿರುವ ಪ್ರಮುಖ […]

DAKSHINA KANNADA HOME LATEST NEWS

ಮಂಗಳೂರು: ವಾರ್ತಾ ಇಲಾಖೆಗೆ ಸಿಎಂ ಮಾಧ್ಯಮ ಸಲಹೆಗಾರರ ಭೇಟಿ

ಮಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಅವರು ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಭೇಟಿ ನೀಡಿದರು. ಕಚೇರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಇಲಾಖಾ ಪ್ರಗತಿ ಮಾಹಿತಿ ಪಡೆದರು. ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಪತ್ರಕರ್ತರ ಪ್ರವಾಸಕ್ಕೆ ಹೊಸ ಬಸ್ ಒದಗಿಸುವ ಬಗ್ಗೆ ಶೀಘ್ರದಲ್ಲಿ ಸರಕಾರ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು. ಗ್ರಾಮಾಂತರ ಪತ್ರಕರ್ತರ ಬಸ್ ಪಾಸ್ ಹಾಗೂ ಪತ್ರಕರ್ತರ ಪಿಂಚಣಿ ಯೋಜನೆ ಕುರಿತು ಅವರು ಚರ್ಚಿಸಿದರು. ಈ ಸಂದರ್ಭದಲ್ಲಿ […]

COMMUNITY NEWS LATEST NEWS

ಮಂಗಳೂರು ಧರ್ಮಪ್ರಾಂತ್ಯದ ಮೆಗಾ ಬೈಬಲ್ ಸಮ್ಮೇಳನ ಸಮರೋಪ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಸೇವಾ ಕಮ್ಯುನಿಯನ್ (MDSC) ಮತ್ತು ಬೈಬಲ್ ಆಯೋಗವು ಮಂಗಳೂರಿನ ಕಾರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಆಯೋಜಿಸಿದ ನಾಲ್ಕು ದಿನದ ಮೆಗಾ ಬೈಬಲ್ ಸಮಾವೇಶವು ಫೆಬ್ರವರಿ 25 ರಂದು ತೆರೆಕಂಡಿತು. ಸರಿಸುಮಾರು 10,000 ಭಕ್ತಾದಿಗಳು ಅವರ ಕುಟುಂಬಗಳೊಂದಿಗೆ ಹಾಜರಿದ್ದು ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸಾಮುದಾಯಿಕ ನವೀಕರಣಕ್ಕೆ ಸಾಕ್ಷಿಯಾದರು. ಕೇರಳದ ಡಿವೈನ್ ರಿಟ್ರೀಟ್ ಸೆಂಟರ್‌ನಿಂದ ರೆ.ಫಾ. ಜೋಸೆಫ್ ಎಡಟ್ಟು ವಿ.ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಈ ಸಮಾವೇಶನದಲ್ಲಿ ದೇವರ ಸ್ತುತಿ ಸ್ತೋತ್ರ, ವಿಮೋಚನೆಯ ಪ್ರಾರ್ಥನೆಗಳು, […]

COMMUNITY NEWS HOME LATEST NEWS

MLC ಐವನ್ ಡಿಸೋಜಾಗೆ ಕಥೊಲಿಕ್ ಸಭಾದಿಂದ ಅಭಿನಂದನೆ

ಮಂಗಳೂರು: ವಿಧಾನ್ ಪರಿಷತ್ ಕಲಾಪದಲ್ಲಿ ಅಲ್ಪಸಂಖ್ಯಾತರ ಪರವಾಗಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ MLC ಐವನ್ ಡಿಸೋಜಾ ಅವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ಮಂಗಳೂರಿನಲ್ಲಿ ಶನಿವಾರ ನಡೆಯಿತು. “ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ವಿಧೇಯಕ” ತಿದ್ದುಪಡಿ 2025 ರಲ್ಲಿ ಪ್ರವರ್ಗ-2ಬಿ ನಲ್ಲಿ – ಕರ್ನಾಟಕ ಸರಕಾರವು, ತನ್ನ ನಿರ್ಮಾಣದ ಕೆಲಸ ಕಾರ್ಯಗಳಿಗೆ ಕಾಂಟ್ರಾಕ್ಟ್ ಗಳನ್ನು ನೀಡುವಾಗ ಅದರಲ್ಲಿನ 4% ಕಾಂಟ್ರಾಕ್ಟ್ ಗಳನ್ನು ಅಲ್ಪಸಂಖ್ಯಾತ ವರ್ಗದವರಿಗೆ ಮೀಸಲಾತಿಯನ್ನು ನೀಡಬೇಕು ಎಂಬ ಹೊಸ ಪ್ರಸ್ತಾವನೆಯನ್ನು […]

DAKSHINA KANNADA HOME LATEST NEWS

ಮಾ.21 ರಿಂದ ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮರ‍್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶ ಎಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಹಾಗೂ ವಿಶೇಷ ಕರ‍್ಯನರ‍್ವಾಹಕ ದಂಡಾಧಿಕಾರಿ ಸಿದ್ದರ‍್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೆೀಧಿತ […]