Tag: mangalore

DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ

ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್‌ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆ ಮೇಲೆ ಚಲಿಸಿದ ಕಾರು….!

ಮಂಗಳೂರು: ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆಯ ಮೇಲೆ ಕಾರೊಂದು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದ ಬಿಜೈ ಕಾಪಿಕಾಡ್‌ನಲ್ಲಿ ನಡೆದಿದೆ. ಘಟನೆ ವಿವರ ನಿಂಗಪ್ಪ ಎಂಬವರು ನಗರದ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದು,  ಏ.9 ರಂದು ಅಪಾರ್ಟ್ ಮೆಂಟಿನ ಮುಖ್ಯಗೇಟಿನ ಬಲ ಬದಿಯಲ್ಲಿ ಕಸ ಹೆಕ್ಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಜೊತೆಯಲ್ಲಿ ತನ್ನ (1 ½) ವರ್ಷದ ಮಗು ಬೇಬಿ ಪ್ರಜ್ವಲ್ ಹರಿಜನ ಎಂಬವನು ಆಚೆ […]

DAKSHINA KANNADA HOME LATEST NEWS STATE UDUPI

ಉಡುಪಿ-ಮಂಗಳೂರು ಮೆಟ್ರೊ ರೈಲು ಯೋಜನೆ ವರದಿಗೆ ಸೂಚನೆ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ. ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ […]

DAKSHINA KANNADA HOME LATEST NEWS

ಎ.15ರಂದು ಮಂಗಳೂರಿನ ಹಲವೆಡೆ ವಿದ್ಯುತ್ ನಿಲುಗಡೆ

ಮಂಗಳೂರು: ನಗರದ ಅತ್ತಾವರ ಉಪಕೇಂದ್ರದಿಂದ ಹೊರಡುವ ಎವರಿ ಜಂಕ್ಷನ್ ಫೀಡರ್ ವ್ಯಾಪ್ತಿಯಲ್ಲಿ ಎ.15ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ. ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಈ ಫೀಡರ್‌ನಲ್ಲಿ ಮಾದರಿ ಉಪವಿಭಾಗದ ಯೋಜನೆಯಡಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹಾಗಾಗಿ ಬಲ್ಮಠ ನ್ಯೂರೋಡ್, ಸ್ಟರಕ್ ರೋಡ್, ಮೋತಿಮಹಲ್, ಎವರಿ ಜಂಕ್ಷನ್, ಅಥೆನಾ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ. ಉರ್ವಮಾರ್ಕೆಟ್, ಹೊಯ್ಗೆಬೈಲ್ ನಗರದ ಉರ್ವಮಾರ್ಕೆಟ್ ಉಪಕೇಂದ್ರದಿಂದ ಹೊರಡುವ ಹೊಯ್ಗೆಬೈಲ್ ಫೀಡರ್ ವ್ಯಾಪ್ತಿಯಲ್ಲಿ […]

DAKSHINA KANNADA HOME LATEST NEWS

ಮಹಿಳಾ ಪ್ರಧಾನ “ಮೀರಾ” ತುಳು ಸಿನಿಮಾ ಬಿಡುಗಡೆ ಮನೆಮಂದಿ ಸಿನಿಮಾ ವೀಕ್ಷಿಸಿ ಪ್ರೋತ್ಸಾಹಿಸಿ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ತುಳುವಿನಲ್ಲಿ ಬಿಡುಗಡೆ ಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ ಕತೆ ಇದೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸ ಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ತುಳುವಿನಲ್ಲಿ ಈಗ ಉತ್ತಮ ಸದಭಿರುಚಿಯ ಸಿನಿಮಾಗಳು ಬರುತ್ತಿದೆ. […]

DAKSHINA KANNADA HOME LATEST NEWS

ಎ. 11 ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು:   ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಎ. 11 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ  2:55 – ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:30 – ಉಳ್ಳಾಲ ದರ್ಗಾ ಆವರಣದಲ್ಲಿ  ಉಳ್ಳಾಲ ದರ್ಗಾ  ಉರೂಸ್ ಕುರಿತು ಪೂರ್ವಭಾವಿ ಸಭೆ. ಸಂಜೆ 4:30 –  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ  ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ನೂತನ ಶವಗಾರ ಕಟ್ಟಡ,  […]

DAKSHINA KANNADA HOME LATEST NEWS

ಮಹೇಶ್ ಭಟ್ ವಿರುದ್ಧ ಸ್ವಪಕ್ಷದಿಂದಲೇ ನಡೆಯಿತಾ ಷಡ್ಯಂತ್ರ? ಆತನ ಆಪ್ತರಿಂದಲೇ ಸ್ಪೋಟಕ ಮಾಹಿತಿ!

ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ಅಪ್ರಾಪ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಮಹೇಶ್ ಭಟ್ ಗೆ ಜಾಮೀನು ಮಂಜೂರಾಗಿದೆ. ಕದ್ದುಮುಚ್ಚಿ ಓಡಾಡುತ್ತಿದ್ದ ಭಟ್ ಜಾಮೀನು ಮಂಜೂರಾಗುತ್ತಿದ್ದಂತೆ ಊರಲ್ಲಿ ಮತ್ತೆ ಪ್ರತ್ಯಕ್ಷವಾಗಿದ್ದಾನೆ. ಈ ನಡುವೆ ಮಹೇಶ್ ಭಟ್ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎನ್ನುವ ಚರ್ಚೆಗಳು ಆತನ ಆಪ್ತ ವಲಯದಿಂದಲೇ ಕೇಳಿಬಂದಿದೆ. ರಾಜಕೀಯವಾಗಿ ಮುನ್ನಲೆಗೆ ಬರುತ್ತಿರುವ ಮಹೇಶ್ ಭಟ್ ವಿರುದ್ಧ ಸ್ಥಳೀಯ ನಾಯಕರೇ ಷಡ್ಯಂತ್ರ ಮಾಡಿದ್ದಾರೆ ಎಂಬ ಮಾತು ವಿಟ್ಲದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದಲಿತ ಬಾಲಕಿಯನ್ನು ಮುಂದಿಟ್ಟುಕೊಂಡು ಅವರದ್ದೇ ಪಕ್ಷದವರು […]

HOME LATEST NEWS NATIONAL

ಅಡುಗೆ ಅನಿಲದ ದರ ಏರಿಸಿದ ಕೇಂದ್ರ: 50 ರೂ. ಹೆಚ್ಚಳ

ಮಂಗಳೂರು: ದಿನನಿತ್ಯದ ವಸ್ತುಗಳ ದರ ಹೆಚ್ಚಳದ ನಡುವೆಯೇ ಅಡುಗೆ ಅನಿಲದ ದರವನ್ನು 50 ರೂಪಾಯಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಇದು ಸಾಮಾನ್ಯ ಸಿಲಿಂಡ‌ರ್ ಜತೆ ಉಜ್ವಲಾ ಯೋಜನೆಗೂ ಅನ್ವಯವಾಗಲಿದೆ. ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದಾರೆ. ಅಡುಗೆ ಅನಿಲದ ದರವನ್ನು ಉಜ್ವಲಾ ಯೋಜನೆ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಹೆಚ್ಚಿಸಲಾಗಿದೆ. ಹೊಸ ದರದ ಅನ್ವಯ 14.2 ಕೇಜಿ ಅಡುಗೆ ಅನಿಲದ ದರ […]

DAKSHINA KANNADA HOME LATEST NEWS

ಮಂಗಳೂರು: ಅಡಿಕೆ ವ್ಯಾಪಾರಿಯಿಂದ 29 ಲಕ್ಷ ರೂ. ವಂಚನೆ

ಮಂಗಳೂರು: ಅಡಿಕೆ ವ್ಯಾಪಾರಿಯೊಬ್ಬ ಸಹಕಾರಿ ಸಂಘವೊಂದಕ್ಕೆ 29 ಲಕ್ಷ ರೂ. ಮೋಸ ಮಾಡಿದ ಬಗ್ಗೆ ಮಂಗಳೂರು ನಗರ ಹೊರವಲಯದ ಪಣಂಬೂರು  ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಬೈಕಂಪಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಅಗ್ರಿಕಲ್ಚರಿಸ್ಟ್ಸ್ ಸಹಕಾರಿ ಸಂಘ ಸಂಸ್ಥೆಯು ಮಂಗಳೂರು ಮತ್ತು ಇತರ ಕಡೆಗಳಲ್ಲಿ ಅಡಿಕೆ ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದೆ. ಆರೋಪಿ ಸತ್ಯನಾರಾಯಣ ರಾಮಚಂದ್ರ ಭಟ್‌ (55) ಎಂಬಾತ ಗುಜರಾತ್‌ನ ಅಹಮದಾಬಾದ್ ನಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, 2009ರಲ್ಲಿ ಮಂಗಳೂರು ಅಗ್ರಿಕಲ್ಚರಿಸ್ಟ್ಸ್ ಸಹಕಾರಿ ಸಂಘದಿಂದ ಆರೋಪಿಯು […]

HOME LATEST NEWS UDUPI

ಕ್ರಿಶ್ಚಿಯನ್ ಯುವತಿ & ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಬಜರಂಗದಳ ಎಂಟ್ರಿ

ಮಂಗಳೂರು: ಉಡುಪಿಯಲ್ಲಿ ನಡೆದ ಕ್ರಿಶ್ಚಿಯನ್ ಯುವತಿ ಮತ್ತು ಮುಸ್ಲಿಂ ಯುವಕನ ಪ್ರೇಮ ಪ್ರಕರಣಕ್ಕೆ ಇದೀಗ ಹಿಂದೂ ಸಂಘಟನೆಗಳು ಎಂಟ್ರಿ ನೀಡಿವೆ. ಈ ಹೋರಾಟಕ್ಕೆ ಧುಮುಕಿದ ಬಜರಂಗದಳ ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಈ ಬಗ್ಗೆ ಉನ್ನತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಭಜರಂಗದಳದ ಮುಖಂಡ ಸುನಿಲ್ ಕೆ ಆರ್ ಅವರು ಪ್ರತಿಕ್ರಿಯೆ ನೀಡಿ, ವಿಶ್ವ ಹಿಂದೂ ಪರಿಷತ್ ಲವ್ ಜಿಹಾದ್ ಬಗ್ಗೆ ಜಾಗೃತಿ ಕೆಲಸ ಮಾಡುತ್ತಿದೆ.  ಆದರೆ ಜಿಹಾದಿಗಳು ತಮ್ಮ ಕೃತ್ಯ […]