Tag: mangalorenews

DAKSHINA KANNADA HOME LATEST NEWS

ಗುಣಪಾಲ ಕಡಂಬರನ್ನು ತೇಜೋವಧೆಗೈದ ಲೋಕೇಶ್ ಶೆಟ್ಟಿ ಜಿಲ್ಲಾ ಕಂಬಳ ಸಮಿತಿಯಿಂದ ಉಚ್ಛಾಟನೆ: ನಿರ್ಣಯ

ಮೂಡುಬಿದಿರೆ: ‘ಕಂಬಳ ಕ್ಷೇತ್ರಕ್ಕೆ ಕೊಡುಗೆ ನೀಡಿದ ಗುಣಪಾಲ ಕಡಂಬ ಅವರನ್ನು ತೇಜೋವಧೆ ಮಾಡಿದ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಅವರನ್ನು ಸಮಿತಿಯಿಂದ ಉಚ್ಚಾಟಿಸಬೇಕು’ ಎಂದು ಕಂಬಳ ಅಭಿಮಾನಿಗಳ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಕಂಬಳ ಕೋಣಗಳ ಯಜಮಾನ ಹರ್ಷವರ್ಧನ ಪಡಿವಾಳ್ ಅಧ್ಯಕ್ಷತೆ ವಹಿಸಿದ್ದರು. ‘ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಂಬಳ ಸೇರಿದಂತೆ ಜಿಲ್ಲೆಯ ಕೆಲವು ಕಂಬಳಗಳಲ್ಲಿ ಲೋಕೇಶ್ ಶೆಟ್ಟಿ ಅವರು ಗುಣಪಾಲ ಕಡಂಬ ಅವರನ್ನು ಟೀಕಿಸಿ ತೇಜೋವಧೆ ಮಾಡಿದ್ದಾರೆ. ಕಂಬಳದ ಹಿರಿಯ ವ್ಯಕ್ತಿ ಜತೆ […]

DAKSHINA KANNADA HOME

ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ “ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮನಕ್ಷತ್ರೋತ್ಸವ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು […]

COMMUNITY NEWS DAKSHINA KANNADA HOME LATEST NEWS

ಹಿರಿಯ ಧರ್ಮಗುರು ಫಾ. ವಿನ್ಸೆಂಟ್ ಎಫ್. ಮೊಂತೇರೊ ನಿಧನ

ಮಂಗಳೂರು: ಬೆಂದೂರ್ ಚರ್ಚ್ ನ ಮಾಜಿ ಧರ್ಮಗುರು ಫಾದರ್ ವಿನ್ಸೆಂಟ್ ಎಫ್. ಮಾಂತೆರೊ (71) ಅವರು ಆಗಸ್ಟ್ 29 ಶುಕ್ರವಾರ ಜಪ್ಪುವಿನ ಸಂತ ಜುಜ್ ವಾಜ್ ಹೋಂನಲ್ಲಿ ನಿಧನರಾದರು. ಅವರು ತಮ್ಮ ಧಾರ್ಮಿಕ ಉತ್ಸಾಹ, ಸಮುದಾಯ ನಾಯಕತ್ವ ಮತ್ತು ಭಾರತೀಯ ಕ್ಯಾಥೋಲಿಕ್ ಯುವ ಚಳವಳಿಯಲ್ಲಿ(ICYM) ಹಲವಾರು ಹೊಸ ಉಪಕ್ರಮಗಳಿಗೆ ನೀಡಿದ ಪ್ರವರ್ತಕ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು. ಏಂಜೆಲೋರ್ ಚರ್ಚ್ ನಲ್ಲಿ ರೇಮಂಡ್ ಮತ್ತು ಕ್ರಿಸ್ಟೀನ್ ಮಾಂತೆರೊ ದಂಪತಿಗಳ ಪುತ್ರರಾಗಿ ಜನಿಸಿದರು. 1981ರಲ್ಲಿ ಧರ್ಮಗುರುವಾಗಿ ನೇಮಕಗೊಂಡರು. ಅವರ ನಾಲ್ಕು ದಶಕಗಳ […]

DAKSHINA KANNADA HOME LATEST NEWS STATE

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ಧರ್ಮಸ್ಥಳದ ತಲೆಬುರುಡೆ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ತನಿಖೆ ಹಂತದಲ್ಲಿದೆ. ಹೀಗಾಗಿ, ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಈ ಸಂಬಂಧ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ತಿಳಿಸಿದರು. ಎಸ್‍ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. […]

DAKSHINA KANNADA HOME LATEST NEWS

ಮಹೇಶ್ ಭಟ್ ವಿರುದ್ಧ ಸ್ವಪಕ್ಷದಿಂದಲೇ ನಡೆಯಿತಾ ಷಡ್ಯಂತ್ರ? ಆತನ ಆಪ್ತರಿಂದಲೇ ಸ್ಪೋಟಕ ಮಾಹಿತಿ!

ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ಅಪ್ರಾಪ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಮಹೇಶ್ ಭಟ್ ಗೆ ಜಾಮೀನು ಮಂಜೂರಾಗಿದೆ. ಕದ್ದುಮುಚ್ಚಿ ಓಡಾಡುತ್ತಿದ್ದ ಭಟ್ ಜಾಮೀನು ಮಂಜೂರಾಗುತ್ತಿದ್ದಂತೆ ಊರಲ್ಲಿ ಮತ್ತೆ ಪ್ರತ್ಯಕ್ಷವಾಗಿದ್ದಾನೆ. ಈ ನಡುವೆ ಮಹೇಶ್ ಭಟ್ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎನ್ನುವ ಚರ್ಚೆಗಳು ಆತನ ಆಪ್ತ ವಲಯದಿಂದಲೇ ಕೇಳಿಬಂದಿದೆ. ರಾಜಕೀಯವಾಗಿ ಮುನ್ನಲೆಗೆ ಬರುತ್ತಿರುವ ಮಹೇಶ್ ಭಟ್ ವಿರುದ್ಧ ಸ್ಥಳೀಯ ನಾಯಕರೇ ಷಡ್ಯಂತ್ರ ಮಾಡಿದ್ದಾರೆ ಎಂಬ ಮಾತು ವಿಟ್ಲದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದಲಿತ ಬಾಲಕಿಯನ್ನು ಮುಂದಿಟ್ಟುಕೊಂಡು ಅವರದ್ದೇ ಪಕ್ಷದವರು […]

DAKSHINA KANNADA HOME LATEST NEWS

ಮಂಗಳೂರು ಸಂಸದ ಹಾಗೂ ಶಾಸಕ ಪೂಂಜಾರಿಂದ ಸಚಿವ ನಿತಿನ್ ಗಡ್ಕರಿ ಭೇಟಿ

ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಜತೆಗೆ ಇಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿರುವ ಪ್ರಮುಖ […]

DAKSHINA KANNADA HOME LATEST NEWS

ಮಾ.21 ರಿಂದ ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮರ‍್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶ ಎಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಹಾಗೂ ವಿಶೇಷ ಕರ‍್ಯನರ‍್ವಾಹಕ ದಂಡಾಧಿಕಾರಿ ಸಿದ್ದರ‍್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೆೀಧಿತ […]