Tag: mangaluru city police

HOME LATEST NEWS

ಮಂಗಳೂರು: ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ  ವರ್ಗಾವಣೆ

ಮಂಗಳೂರು:  ನಗರದ ಕಮೀಷನರೇಟ್‌ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ  ಇನ್ಸ್‌ಪೆಕ್ಟರ್‌ಗಳ  ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ , ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ.ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್.ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

DAKSHINA KANNADA HOME LATEST NEWS

“ವಕ್ಫ್‌ ಪ್ರತಿಭಟನೆ ವೇಳೆ ಪ್ರತಿಭಟನಕಾರರು ಪೊಲೀಸ್‌ ಜೀಪು ಬಳಸಿಲ್ಲ”

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನ ಅಡ್ಯಾರ್‌ನಲ್ಲಿ ನಿನ್ನೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಯ ಕಾರನ್ನು ಬಳಸಿದ ಬಗ್ಗೆ ವಿಡಿಯೋ ಸಮೇತ  ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಕೇಳಿಬಂದಿತ್ತು. ಇದಕ್ಕೆ  ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಭಟನೆಯ ಸಂದರ್ಭ ಬಂದೋಬಸ್ತಿನಲ್ಲಿದ್ದ ಎಸಿಪಿ (ಸಂಚಾರ ಉಪ ವಿಭಾಗ)ಯವರು ಕಾರ್ರಕ್ರಮ ಮುಗಿದ ಬಳಿಕ ಮಂಗಳೂರು ಕಡೆಗೆ ತೆರಳುವ ಸಂಚಾರ […]

DAKSHINA KANNADA HOME LATEST NEWS

ಉಳ್ಳಾಲದಲ್ಲಿ ಯುವತಿಯ ಗ್ಯಾಂಗ್‌ರೇ*ಪ್‌ ಆರೋಪ: ಮೂವರ ಬಂಧನ

ಮಂಗಳೂರು: ನಗರ ಹೊರವಲಯದ ಉಳ್ಳಾಲದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಧಿತ ಪ್ರಭುರಾಜ್ ಹಾಗೂ ಮಿಥುನ್ ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು. ಇವರು ಮೂವರು ಸ್ನೇಹಿತರಾಗಿದ್ದು, ಮೂಲ್ಕಿ ಮೂಲದ ಪ್ರಭುರಾಜ್ ಆಟೋ ಚಾಲಕನಾಗಿದ್ದು, ಉಳ್ಳಾಲ ಕುಂಪಲದ ಮಿಥುನ್ ಎಲೆಕ್ಟ್ರೀಷಿಯನ್‌ ಆಗಿ ವೃತ್ತಿ […]

DAKSHINA KANNADA HOME LATEST NEWS

ನಂಬರ್‌ ಪ್ಲೇಟ್‌ಗೆ ಪ್ಲಾಸ್ಟಿಕ್‌ ಮುಚ್ಚಿ ಚಲಾಯಿಸುತ್ತಿದ್ದ ಸ್ಕೂಟರ್‌ಗೆ ದಂಡ

ಮಂಗಳೂರು: ಸ್ಕೂಟರ್ ಸವಾರನೊಬ್ಬ ತನ್ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ, ಹೆಲ್ಮೆಟ್ ಧರಿಸದೆ ಚಲಾಯಿಸುತ್ತಿದ್ದ ವೀಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸದ್ಯ ಈ ಪ್ರಕರಣದಲ್ಲಿ ವೈರಲ್‌ ಆಗಿದ್ದ ಸ್ಕೂಟರ್‌ನ್ನು ಪತ್ತೆಹಚ್ಚಿದ ಮಂಗಳೂರು ನಗರ ಪೊಲೀಸರು ದಂಡ ವಿಧಿಸಿದ್ದಾರೆ. ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ  ಮುಚ್ಚಿ  ಹೆಲ್ಮೆಟ್ ಧರಿಸದೆ ತೊಕ್ಕೊಟ್ಟು ಕಡೆಗೆ ಚಲಾಯಿಸಿಕೊಂಡು […]

DAKSHINA KANNADA HOME LATEST NEWS

ಕಾಲೇಜಿಗೆ ಹೋಗುತ್ತಿದ್ದ ಯುವಕ ನಾಪತ್ತೆ

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕಾಲೇಜಿನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಬಿಹಾರ ಮೂಲದ ಸುಧಾಂಶುಕುಮಾರ (21 ) ಎಂಬವರು ಕಾಣೆಯಾಗಿದ್ದಾರೆ. `ಕಾಣೆಯಾದವರ ಚಹರೆ : ಸುಮಾರು 5.6 ಅಡಿ, ಸಾಧಾರಣ ಶರೀರ, ಗೋದಿ ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಕೆಂಪು ಬಣ್ಣದ ಟಿ ಶರ್ಟ್, ಬರ್ಮುಡ ಪ್ಯಾಂಟ್ ಧರಿಸಿದ್ದರು. ಹಿಂದಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪಣಂಬೂರು ಪೆÇಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

DAKSHINA KANNADA HOME LATEST NEWS

ಮಂಗಳೂರು: ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ-40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆ

ಮಂಗಳೂರು: ಆಡಂಕುದ್ರುನಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಉರ್ಬನ್‌ ಡಿಸೋಜಾ ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 5 ಲೀಟರ್‌ ಕಳ್ಳಭಟ್ಟಿ ಸಾರಾಯಿ, ಕಳ್ಳಭಟ್ಟಿ ತಯಾರಿಸಲು ಉಪಯೋಗಿಸುತ್ತಿದ್ದ ಸಲಕರಣೆಗಳು, 40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆಯಾಗಿದೆ. ಮಂಗಳೂರು ದಕ್ಷಿಣ ವಲಯದ ಅಬಕಾರಿ ಕಮಲ ಎಚ್‌. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಹರೀಶ್‌ ಪಿ. ಕಾನ್ಸ್ಟೇಬಲ್‌ಗಳಾದ ಬಸವಾರಜ ತೊರೆ, ಆನಂದ್‌, ವಾಹನಚಾಲಕ ರಘುರಾಮ ಕಾರ್ಯಚರಣೆಯಲ್ಲಿ ಸಹಕರಿಸಿದ್ದರು.