Tag: mangaluru

DAKSHINA KANNADA HOME LATEST NEWS

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆ ಮಗುಚಿ ಬಿದ್ದು ಸಾವು

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆಯೇ ಮಗುಚಿ ಬಿದ್ದ ಪರಿಣಾಮ ತಂದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದಲ್ಲಿ ಆ.7 ರಂದು ನಡೆದಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ದಿನೇಶ್ ಎಂಬುವವರು ಕೆಎ- 19-ಎಂ-8745 ನೋಂದಣಿಯ ಜೀಪು ಚಲಾಯಿಸುತ್ತಿದ್ದಾಗ ಹತ್ತದೇ ಅರ್ಧದಲ್ಲಿ ನಿಂತಿದೆ. ಆಗ ಜೀಪಲ್ಲಿ ಇದ್ದ ಅವರ ದಿನೇಶ್  ಅವರ ತಂದೆ ಧರ್ಮಪಾಲ […]

DAKSHINA KANNADA HOME LATEST NEWS

ಮಂಗಳೂರು: 7 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ

ಮಂಗಳೂರು: ತನ್ನ 7 ತಿಂಗಳ ಮಗುವಿನೊಂದಿಗೆ ತಾಯಿಯು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಸೆಲ್ವಿನ್‌ ಮಾಚಾದೋ ಅವರು ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಕಳೆದೆರಡು ವರ್ಷಗಳಿಂದ   ಹೆಂಡತಿ ಬೆಲಿಂಡ ರೋಡ್ರಿಗಸ್ (30) ಮತ್ತು 7 ತಿಂಗಳ ಮಗ ಬ್ರೂಸ್ ಮಚಾಡೋ ಎಂಬುವವರ ಜೊತೆ ನಗರದ ಸೂಟರ್ ಪೇಟೆಯಲ್ಲಿ  ವಾಸವಾಗಿದ್ದರು. ಆ.7 ರಂದು ಸೆಲ್ವಿನ್‌ ಮಾಚಾದೋ ಕೆಲಸ ನಿಮಿತ್ತ ಹೊರಹೋಗಿದ್ದರು. ಅದೇ ದಿನ ಸಂಜೆ 7 ಗಂಟೆಗೆ ಮನೆಗೆ […]

DAKSHINA KANNADA HOME LATEST NEWS

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್‌ಫೋರ್ಸ್‌ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]

DAKSHINA KANNADA HOME LATEST NEWS NATIONAL

ಛತ್ತೀಸ್‌ಗಡ: ಮತಾಂತರ ಆರೋಪದಲ್ಲಿ ಬಂಧಿತರಾಗಿದ್ದ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು

ರಾಯ್ಪುರ್: ಆದಿವಾಸಿಗಳನ್ನು ಮತಾಂತರಗೊಳಿಸಿ, ಅವರನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರು ಕ್ರೈಸ್ತ ಸನ್ಯಾಸಿನಿಯರಿಗೆ ಎನ್‌ಐಎ ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. ಶುಕ್ರವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎನ್ಐಎ ನ್ಯಾಯಾಲಯ) ಸಿರಾಜುದ್ದೀನ್ ಖುರೇಷಿ, ತಮ್ಮ ತೀರ್ಪನ್ನು ಕಾಯ್ದಿರಿಸಿದ್ದರು.ಶನಿವಾರ ತೀರ್ಪು ಪ್ರಕಟಿಸಿದ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯ, ಕೇರಳದ ಇಬ್ಬರು ಕ್ರೈಸ್ತ ಸನ್ಯಾಸಿನಿಯರಿಗೆ ಹಾಗೂ ಛತ್ತೀಸ್ ಗಢದ ಓರ್ವ ಆದಿವಾಸಿ ಯುವಕನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ […]

DAKSHINA KANNADA HOME LATEST NEWS NATIONAL STATE

ಬರೋಬ್ಬರಿ 8 ಜನರನ್ನು ವರಿಸಿ 9ನೇ ಮದುವೆಗೆ ರೆಡಿಯಾಗುತ್ತಿದ್ದ ಆಂಟಿ ಅರೆಸ್ಟ್‌

ಮುಂಬೈ: 35 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 8 ಸಲ ಮದುವೆಯಾಗಿ, ಅದೇ ಗಂಡಂದಿರಿಗೆ ಮೂರು ನಾಮ ಇಕ್ಕು 9ನೇ ಮದುವೆಯಾಗಲು ಸಿದ್ಧತೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 35ರ ಹರೆಯದ ಸಮೀರಾ ಫಾತಿಮಾ ಈ ಪ್ರಕರಣದ ಆರೋಪಿತೆ.  ವಿಶೇಷ ಅಂದರೆ ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, 12 ವರ್ಷದ ಮಗುವನ್ನು ಹೊಂದಿದ್ದಾಳೆ. ಆ ಮಗು ಯಾವ ಗಂಡನದ್ದು ಎಂದು ತಿಳಿದುಬಂದಿಲ್ಲ. ಸಮೀರಾ ಫಾತಿಮಾ ಮ್ಯಾಟ್ರಿಮೊನಿ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ […]

DAKSHINA KANNADA HOME LATEST NEWS STATE

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ಧರ್ಮಸ್ಥಳದ ತಲೆಬುರುಡೆ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ತನಿಖೆ ಹಂತದಲ್ಲಿದೆ. ಹೀಗಾಗಿ, ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಈ ಸಂಬಂಧ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ತಿಳಿಸಿದರು. ಎಸ್‍ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. […]

DAKSHINA KANNADA HOME LATEST NEWS

ಪುತ್ತೂರು: ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ  2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು,  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]

DAKSHINA KANNADA HOME LATEST NEWS

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಮೂವರ ಬಂಧನ

ಮಂಗಳೂರು: ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಆಡೂರಿನ ಮಸೂದ್ ಎಂ.ಕೆ. (45), ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಮುಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಎರಡು ಕಾರು ಮತ್ತು 123 ಕೆ.ಜಿ. ಗಾಂಜಾ ಹಾಗೂ 5 ಮೊಬೈಲ್ ಫೋನ್‌ಗಳನ್ನು ವಶಪಡಿಸಲಾಗಿದೆ. ಆರೋಪಿಗಳು ಗಾಂಜಾವನ್ನು ಆಂಧ್ರಪ್ರದೇಶದಿಂದ ತಂದು ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಮಾರಾಟ […]

DAKSHINA KANNADA HOME LATEST NEWS

ಕ್ರೈಸ್ತ ಸನ್ಯಾಸಿಯರ ಬಂಧನ ಖಂಡಿಸಿ ಆ.4ರಂದು ಕಥೋಲಿಕ್‌ ಸಭಾದಿಂದ ಬೃಹತ್‌ ಪ್ರತಿಭಟನೆ

ಮಂಗಳೂರು: ಛತ್ತೀಸ್‌ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರನ್ನು ಮತಾಂತರ ಆರೋಪ ಹೊರಿಸಿ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆ.4 ರಂದು ಮಂಗಳೂರಿನಲ್ಲಿ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಇದರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಸಂತೋಷ್ ಡಿಸೋಜಾ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶಾದ್ಯಂತ ಕ್ರೈಸ್ತ ಧರ್ಮಗುರುಗಳು, ಧರ್ಮ ಭಗಿನಿಯರು ಹಾಗೂ ಕ್ರೈಸ್ತ ಸಮುದಾಯದವರು ಶಾಂತಿ ಪ್ರಿಯರಾಗಿದ್ದು ದೇಶ ಭಕ್ತಿಯನ್ನು ಹೊಂದಿದವರಾಗಿರುತ್ತಾರೆ. […]

DAKSHINA KANNADA HOME LATEST NEWS

ಕೊಣಾಜೆ: ಯುವತಿ ನಾಪತ್ತೆ

ಕೊಣಾಜೆ:  ಇಲ್ಲಿನ ಠಾಣಾ‌ ವ್ಯಾಪ್ತಿಯ ಮಹಿಳಾ ಆಶ್ರಯ ಕೇಂದ್ರದಲ್ಲಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಒಡಿಷಾ ಮೂಲದ ತ್ರಿಶಾ (22) ಎಂಬಾಕೆಯೇ ನಾಪತ್ತೆಯಾದ ಯುವತಿಯಾಗಿದ್ದು, ಈಕೆ ಜುಲೈ 30ರಂದು ರಾತ್ರಿ 8 ಗಂಟೆಯ ಸುಮಾರಿಗೆ ನಾಪತ್ತೆಯಾಗಿದ್ದಾಳೆ.  ಕಳೆದ‌ ವರ್ಷ ತ್ರಿಶಾ ಉದ್ಯೋಗದ ಹುಡುಕಾಟದಲ್ಲಿ ಮಂಗಳೂರಿಗೆ ಬಂದಿದ್ದಳು ಎನ್ನಲಾಗಿದ್ದು‌ ಬಳಿಕ, ಇತ್ತೀಚೆಗೆ ಮಡಿಪುವಿನ ಪ್ರಜ್ಞಾ ಆಶ್ರಯ ಮಂದಿರದಲ್ಲಿ ವಾಸವಾಗಿದ್ದಳು. ಈಕೆ ಜುಲೈ 30 ರಂದು ರಾತ್ರಿ ಅಡುಗೆ ಕೋಣೆಯ ಬಾಗಿಲು ತೆರೆದು ಕೌಂಪೌಂಡು ಹಾರಿ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678