Tag: mangaluru

DAKSHINA KANNADA HOME LATEST NEWS

ಕಾರಿನ ಟೈಯರ್ ಬ್ಲಾಸ್ಟ್: ಅದೃಷ್ಟವಶಾತ್ ಪಾರಾದ ಬೋಂದೆಲ್ ಚರ್ಚ್ ಪಾದ್ರಿ

ಮಂಗಳೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಎಸೆಯಲ್ಪಟ್ಟ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾವೂರು ಬಳಿಯ ಮರಕಡದಲ್ಲಿ ಜನವರಿ 1 ರಂದು ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು.‌ ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ […]

COMMUNITY NEWS DAKSHINA KANNADA HOME

ಮೊಗರ್ನಾಡು ದೇವ ಮಾತಾ ದೇವಾಲಯದ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆ

ವಿಟ್ಲ: ಬಂಟ್ವಾಳ ತಾಲೂಕಿನ ಅಮ್ಟೂರು ಕರಿಂಗಾಣ ದೇವ ಮಾತಾ ದೇವಾಲಯ ಮೊಗರ್ನಾಡು ಇದರ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ನಡೆಯಿತು.‌ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಅಂಗವಾಗಿ ‘ತ್ರಿದುಮ್’ ಸಂಭ್ರಮಾಚರಣೆಯನ್ನು ವಿಜ್ರಂಭಣೆಯನ್ನು ಆಚರಿಸಲಾಯಿತು. ಡಿಸೆಂಬರ್ 29ರಂದು ಜ್ಯುಬಿಲಿ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ದಾನವನ್ನು ನೀಡಿದ ದಾನಿಗಳಿಗೆ ಮತ್ತು ದೇವಾಲಯದ ಭಕ್ತಾಭಿಮಾನಿಗಳಿಗೆ ವಿಶೇಷ ಬಲಿ ಪೂಜೆಯನ್ನು ಏರ್ಪಡಿಸಲಾಗಿತ್ತು. ನಂತೂರು ಮಂಗಳ ಜ್ಯೋತಿಯ ನಿರ್ದೇಶಕರರಾದ ವಂದನೀಯ ಫಾದರ್ ರೋಹಿತ್ ಡಿಕೊಸ್ತ ದಿವ್ಯ ಬಲಿಪೂಜೆಯನ್ನು ನೇರವೇರಿಸಿದರು. ಡಿಸೆಂಬರ್ 30ರಂದು ಪೂರ್ವಜರ […]

DAKSHINA KANNADA HOME LATEST NEWS

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಸಲಹಾ ಸಮಿತಿಗಳನ್ನು ರಚಿಸಲು ಆದೇಶ

ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಧೀನದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸಲಹಾ ಸಮಿತಿಗಳನ್ನು ರಚಿಸಲು ಸರಕಾರ ಗುರುವಾರ ಮಂಜೂರಾತಿ ನೀಡಿ ಆದೇಶ ನೀಡಿದೆ. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಸ್. ಎಜಾಸ್ ಪಾಷಾ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ರಾಜ್ಯಾ ದ್ಯಂತ ಕ್ರಿಶ್ಚಿಯನ್ ಸಮದಾಯ ಅಭಿವೃದ್ಧಿಯ ಆನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಚಟುವಟಿಕೆ ಗಳನ್ನು ಜಾರಿಗೆ ತರಲಾಗುತ್ತದೆ. […]

DAKSHINA KANNADA HOME LATEST NEWS STATE

ಆದಾಯದಲ್ಲಿ ಕರಾವಳಿ ದೇಗುಲಗಳೇ ಮೇಲುಗೈ: ಕುಕ್ಕೆ ಸುಬ್ರಹ್ಮಣ್ಯದಲ್ಲಿ 155.95 ಕೋಟಿ ರೂ.

ಮಂಗಳೂರು: ರಾಜ್ಯ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ದೇವಾಲಯಗಳೇ ಅಗ್ರಸ್ಥಾನಗಳಲ್ಲಿವೆ. ಅದರಲ್ಲೂ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ 155.95 ಕೋಟಿ ರೂ. ಆದಾಯ ಮೂಲಕ ಮೊದಲನೇ ಸ್ಥಾನದಲ್ಲಿದೆ. ಜೊತೆಗೆ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ದೇವಾಲಯಗಳಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲೂ ಶೇ.10ರಿಂದ 15 ಏರಿಕೆ ಕಂಡಿದೆ. ವರ್ಷಾಂತ್ಯ ಆಗಮಿಸುತ್ತಿದ್ದಂತೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಮಂದಾರ್ತಿ, ಕಟೀಲು, ಕದ್ರಿ, ಮಂಗಳಾದೇವಿ, ಕಮಲಶಿಲೆ ದೇವಸ್ಥಾನಗಳಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಜೊತೆ […]

DAKSHINA KANNADA HOME LATEST NEWS NATIONAL

ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಸಂದೇಶ ಹಂಚಿದ ಅವರು, ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.  ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ.ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ […]

DAKSHINA KANNADA HOME

ಬೆಳೆ ವಿಮೆಯಲ್ಲಿನ ಲೋಪ: ಸದನದಲ್ಲಿ ಶಾಸಕ ಅಶೋಕ್ ರೈ & ಸ್ಪೀಕರ್‌ ಮಧ್ಯೆ ಜಟಾಪಟಿ

ಪುತ್ತೂರು: ೨೦೨೪ರ ೨೦೨೪ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಪಾವತಿಸಿದ ಪರಿಹಾರ ಮೊತ್ತಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ತಡವಾಗಿರುವ ಮತ್ತು ಪರಿಹಾರ ಮೊತ್ತ ಕಡಿಮೆಯಾಗಿರುವ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ನಡೆದ ವಿಧಾಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾಪ ಮಾಡಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ನೇತೃತ್ವದಲ್ಲಿ ತೋಟಗಾರಿಕಾ ಸಚಿವರು, ವಿಮಾಕಂಎಪನಿ ಮತ್ತು ದಕ ಹಾಗೂ ಉಡುಪಿ ಜಿಲ್ಲೆಯ ಶಾಸಕರ ಸಭೆಯನ್ನು ನಡೆಸುವುದಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು. […]

DAKSHINA KANNADA HOME LATEST NEWS

ಮಂಗಳೂರು: ಡಿ.11ರವರೆಗೆ ಇಂಡಿಗೊ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿನನಿತ್ಯ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಯಾನ ಡಿ.8 ರಿಂದ 11ರ ತನಕ ರದ್ದಾಗಿದೆ. ಮಂಗಳೂರಿಗೆ ದಿನನಿತ್ಯ ಆಗಮಿಸುವ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರು(6ಇ 6674) ಬೆಳಗ್ಗೆ 8:40, ಬೆಂಗಳೂರು -ಮಂಗಳೂರು (6ಇ109) ಸಂಜೆ 5:20 ಮತ್ತು ಬೆಂಗಳೂರು -ಮಂಗಳೂರು (6ಇ6119) ರಾತ್ರಿ 10:15ಕ್ಕೆ ಆಗಮಿಸುವ ವಿಮಾನಗಳು ರದ್ದಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 7:40ಕ್ಕೆ ಹೊರಡುವ ಮಂಗಳೂರು -ಬೆಂಗಳೂರು […]

DAKSHINA KANNADA HOME LATEST NEWS

ಮಂಗಳೂರು ಮೂಲದ ರೌಡಿ ಶೀಟರ್‌ಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ

ಕಾರವಾರ:  ಮಂಗಳೂರು ಮೂಲದ ವಿಚಾರಣಾಧೀನ ರೌಡಿ ಶೀಟರ್‌ಗಳಿಬ್ಬರು ಕಾರವಾರ ಕಾರಾಗೃಹದಲ್ಲಿ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ […]

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

COMMUNITY NEWS HOME STATE

ಕಥೋಲಿಕ್ ಚರ್ಚ್‌ಗಳಲ್ಲಿ ಬ್ರ. ಸಜಿತ್ ಜೋಸೆಫ್‌ಗೆ ನಿಷೇಧ: ಭಾರೀ ಪರ- ವಿರೋಧ ಚರ್ಚೆ

ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಸುದ್ದಿ ಮಾಡಿ,  ತನ್ನ ವಿಶೇಷ ಬೋಧನೆಯಿಂದ ಸಾವಿರಾರು ಭಕ್ತರನ್ನು ಒಂದೆಡೆ ಸೇರಿಸುವ ಮೂಲಕ ಖ್ಯಾತಿ ಪಡೆದಿದ್ದ ಕೇರಳ ಮೂಲದ ಸಜಿತ್ ಜೋಸೆಫ್ ಅವರನ್ನು ಕೇರಳದ ಸಿರಿಯನ್ ಕೆಥೋಲಿಕ್ ಮಲಬಾರ್ ಚರ್ಚ್ ಆಡಳಿತವು ದಿಢೀ‌ರ್ ಆಗಿ ಬೋಧಕ ಸ್ಥಾನದಿಂದ ತೆರವು ಮಾಡಿದ್ದು ಆತನನ್ನು ಯಾವುದೇ ಚರ್ಚ್ ಗಳಲ್ಲಿ ಪ್ರಾರ್ಥನೆಗೆ ಬಳಸಿಕೊಳ್ಳದಂತೆ ನಿಷೇಧ ವಿಧಿಸಿದೆ. ಜೊತೆಗೆ ಕರ್ನಾಟಕದಲ್ಲೂ ಕಥೋಲಿಕ ಕ್ರೈಸ್ತರ ಚರ್ಚ್‌ಗಳಲ್ಲಿ ಆತನಿಗೆ ನಿಷೇಧ ಹೇರಿದ್ದಾರೆ. ಸಿರಿಯನ್ ಕೆಥೋಲಿಕ್ […]