Tag: mangaluru

DAKSHINA KANNADA HOME LATEST NEWS

ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು : ಕೊಲೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಸಫ್ವಾನ್ ಹುಸೈನ್ ಸಹಚರನೋರ್ವವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಳ್ಳಾರಿ ಜಿಲ್ಲೆಯ ಸದ್ಯ ಬೆಂಗಳೂರಿನ ಶ್ಯಾಮ್ ಪುರ ಬೇಕರಿ ಬಳಿಯ ನಿವಾಸಿ ಸುಫಿಯಾನ್ ಹುಸೈನ್ ಯಾನೆ ಕೊಟ್ರೇಶಿ (31) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು ಗುಲ್ಬರ್ಗಾ, ಬಳ್ಳಾರಿ , ಮುಂಬೈ ಆಂಧ್ರ ಪ್ರದೇಶದಲ್ಲಿ ತಲೆ ಮರೆಸಿಕೊಂಡು ಬಳಿಕ ಬೆಂಗಳೂರಿನಲ್ಲಿ ಹುಸೈನ್ ಎಂದು ಬದಲಿಸಿ ಆಧಾರ್ ಕಾರ್ಡ್, […]

COMMUNITY NEWS DAKSHINA KANNADA HOME LATEST NEWS

ವಿಶ್ವಶಾಂತಿಗಾಗಿ ಕ್ರೈಸ್ತರು ಮಾ.13ರಂದು ಉಪವಾಸ -ಪ್ರಾರ್ಥನೆ ಮಾಡಿ: ಮಂಗಳೂರು ಬಿಷಪ್‌ ಕರೆ

ಮಂಗಳೂರು: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಭಾರತದ ಬಿಷಪರ ಮಂಡಳಿ ಅಧ್ಯಕ್ಷ ಅ.ವಂ. ಫಿಲಿಫ್‌ ನೆರಿ ಕಾರ್ಡಿನಲ್‌ ಫೆರಾವೋ ಅವರು ಎಂದು ಕರೆ ನೀಡಿದ್ದು, ಅದರಂತೆ ಮಂಗಳೂರು ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಜೊತೆಗೆ  ಮಾರ್ಚ್ 8ರಿಂದ 14ರವರೆಗೆ ಪ್ರತಿದಿನವೂ ಶಾಂತಿಗಾಗಿ ವಿಶೇಷವಾಗಿ ಪವಿತ್ರ ಜಪಸರ ಪ್ರಾರ್ಥನೆ ಮಾಡುವಂತೆ  ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅ.ವಂ.ಡಾ. ಪೀಟರ್‌ ಪಾವ್ಲ್‌ ಸಲ್ಡಾನ […]

DAKSHINA KANNADA HOME LATEST NEWS

ಇಂದು ಮಂಗಳೂರಿನಿಂದ ಗಲ್ಫ್‌ ರಾಷ್ಟ್ರಗಳಿಗೆ ತೆರಳುವ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಾ.5ರಂದು ಮಂಗಳೂರು-ದೋಹಾ (ಐಎಕ್ಸ್ 821), ದೋಹಾ – ಮಂಗಳೂರು (ಐಎಕ್ಸ್ 822), ಮಂಗಳೂರು-ದುಬೈ (ಐಎಕ್ಸ್ 831), ದುಬೈ-ಮಂಗಳೂರು (ಐಎಕ್ಸ್ 832), ಮಂಗಳೂರು – ದುಬೈ (ಐಎಕ್ಸ್ 813), ಮಾ.6ರ ದುಬೈ-ಮಂಗಳೂರು (ಐಎಕ್ಸ್ 814), ಮಾ5ರ ಮಂಗಳೂರು-ಬಹರೇನ್(ಐಕ್ಸ್ 841), ಮಾ.6ರ ಬಹರೇನ್-ಮಂಗಳೂರು (ಐಎಕ್ಸ್ 842), ಮಾ.5ರ ಮಂಗಳೂರು-ಕುವೈತ್ (ಐಎಕ್ಸ್ 851), ಮಾ.6ರ ಕುವೈತ್-ಮಂಗಳೂರು (ಐಎಕ್ಸ್ 852), ಮಾ.5ರ ಮಂಗಳೂರು-ದಮ್ಮಾಮ್ (ಐಎಕ್ಸ್ 847), ಮಾ.6ರ ದಮ್ಮಾಮ್-ಮಂಗಳೂರು (ಐಎಕ್ಸ್ 848), ಮಾ.5ರ ಮಂಗಳೂರು-ಅಬುಧಾಬಿ (ಐಎಕ್ಸ್ 815), […]

DAKSHINA KANNADA HOME LATEST NEWS

RSSನ ಹಿರಿಯ ಕಾರ್ಯಕರ್ತ ಎಂ. ಸತೀಶ್ ಪ್ರಭು ನಿಧನ

ಮಂಗಳೂರು: ದಕ್ಷಿಣ ಕನ್ನಡದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನ ಹೊಂದಿದ್ದಾರೆ. ಬೆಳಗ್ಗೆ ಏಕಾಏಕಿ ಬ್ರೈನ್‌ ಹ್ಯಾಮರೇಜ್ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆಗೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳೂರಿನ ಕಾರ್‌ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು. ಸಂಘನಿಕೇತನದಲ್ಲಿ ಕೇಶವ […]

COMMUNITY NEWS HOME

ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಸಮ್ಮೇಳನಕ್ಕೆ ಚಾಲನೆ

ಮಂಗಳೂರು,ಫೆ. 27: ಮಂಗಳೂರು ಧರ್ಮಪ್ರಾಂತ್ಯದ ಕ್ಯಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಮಂಗಳೂರು ಧರ್ಮಪ್ರಾಂತ್ಯದ ಬೈಬಲ್ ಆಯೋಗದ ಸಹಯೋಗದೊಂದಿಗೆ ಬೈಬಲ್ ಸಮ್ಮೇಳನಕ್ಕೆ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್‌ ಮೈದಾನದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಹಿರಿಯ ಗುರು ಮೊನ್ಸಿಂಜೊರ್ ವಂ| ಮ್ಯಾಕ್ಸಿಮ್ ಎಲ್. ನೊರೊನ್ಹಾ ಅವರು ಧ್ವಜಾರೋಹನ ಮಾಡುವ ಮೂಲಕ ಚಾಲನೆ ನೀಡಿ ಬಲಿಪೂಜೆ ನೆರವೇರಿಸಿದರು. ಬಲಿಪೂಜೆಯಲ್ಲಿ “ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ನೆಲೆಸಿದೆ” ಎಂಬ ಕುರಿತು ಪ್ರವಚನ ನೀಡಿದ ಅವರು, ನಾವು ದೇವರ ಮುಂದೆ ಪ್ರಾರ್ಥನೆ ಮಾಡುವಾಗ […]

DAKSHINA KANNADA HOME LATEST NEWS

ಶಬರಿಮಲೆ ಯಾತ್ರೆ ವೇಳೆ ಉಪ್ಪಿನಂಗಡಿ ಬಜರಂಗದಳ ಮುಖಂಡ ಹೃದಯಾಘಾತದಿಂದ ಸಾವು

ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್ ತೆಕ್ಕಾರ್ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಶಬರಿಮಲೆಯಲ್ಲಿ ಹೃದಯಾಘಾತ ಸಂಭವಿಸಿದ್ದು, ಮೃತದೇಹವನ್ನು ಮಂಗಳವಾರ ತೆಕ್ಕಾರು ಮನೆಗೆ ತಂದು ಮೆರವಣಿಗೆಯಲ್ಲಿ ಉಪ್ಪಿನಂಗಡಿಯ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಈ ಬಾರಿ ಶಬರಿಮಲೆ ಯಾತ್ರೆ ಸಂದರ್ಭ ಹಲವರಿಗೆ ಹೃದಯಾಘಾತ ಆಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ತನಿಖಾ ತಂಡಗಳು ನಿಗಾ ವಹಿಸಬೇಕಿದೆ […]

DAKSHINA KANNADA HOME LATEST NEWS

9 ಯುವತಿಯರಿಗೆ ವಂಚನೆ: ಇಬ್ಬರ ಜೊತೆ ಮದುವೆಯಾದ ‘ಮ್ಯಾಟ್ರಿಮೋನಿ’ ಮಾವ-ಅಳಿಯನ ಬಂಧನ

ಮಂಗಳೂರು: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್ ತನ್ನ ಅಳಿಯ ಎಂದು ಹೇಳಿ ಸಂತ್ರಸ್ತೆಯ ಕುಟುಂಬದವರಿಗೆ ನಂಬಿಕೆ ಮೂಡಿಸಲು ಭಾಸ್ಕರ್ ಧಾರ್ಮಿಕ ವಿಧಿವಿಧಾನಗಳಲ್ಲೂ ಭಾಗವಹಿಸಿದ್ದಾನೆ […]

DAKSHINA KANNADA HOME LATEST NEWS

ಮಂಗಳೂರು-ಮೂಡಬಿದ್ರೆ ಹೆದ್ದಾರಿ ದುರಸ್ತಿ: 30 ದಿನ ಬದಲಿ ರಸ್ತೆ ಉಪಯೋಗಿಸಲು ಸಲಹೆ

ಮಂಗಳೂರು: ತಾಲೂಕಿನ ಬಜ್ಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹಾಗೂ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ವಾಹನಗಳ ಓಡಾಟಕ್ಕೆ ಇದ್ದ ಹಳೆ ರಸ್ತೆಯು ಘನ ವಾಹನಗಳ ಓಡಾಟದಿಂದಾಗಿ ಬಿರುಕು ಬಿಟ್ಟು ಅಲ್ಲಲ್ಲಿ ಕುಸಿಯಲು ಪ್ರಾರಂಭಿಸಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆ. 12ರಿಂದ ಮಾ.13ರವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಠಿಯಿಂದ […]

DAKSHINA KANNADA HOME LATEST NEWS

ಮಡಂತ್ಯಾರಿನಲ್ಲಿ ಬಾಲ್ಯವಿವಾಹಕ್ಕೆ ತಡೆ

ಬೆಳ್ತಂಗಡಿ: ಇಲ್ಲಿನ ಮಡಂತ್ಯಾರಿನಲ್ಲಿ ಬಾಲ್ಯವಿವಾಹ ನಡೆಯುವ ಸಂದರ್ಭದಲ್ಲಿ ಮಂಗಳೂರು ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆಯ ನೇತೃತ್ವದಲ್ಲಿ ತಡೆಗಟ್ಟಿದ ಘಟನೆ ಫೆ.8 ರಂದು ನಡೆಯಿತು. ಕಳಿಯ ಗ್ರಾಮದ ಜನತಾ ಕಾಲೋನಿ ನಿವಾಸಿ ಅಸ್ಮಾ ಮತ್ತು ಆಶ್ರಫ್ ದಂಪತಿಗಳ ಪುತ್ರಿಯ ಮದುವೆ ಹಮ್ಮಿಕೊಂಡಿದ್ದರು. ಅದರಂತೆ ಮಸೀದಿಯಲ್ಲಿ ಮದುವೆ ನಡೆಸಲು ತಯಾರಿ ನಡೆದಿದೆ. ಮದುವೆಯಾಗುವ ಹುಡುಗಿಗೆ 18 ವರ್ಷ ಪೂರ್ಣ ಅಗದಿರುವ ಬಗ್ಗೆ ಮಂಗಳೂರು ಮಕ್ಕಳ ರಕ್ಷಣಾ ಇಲಾಖೆಗೆ ಮಾಹಿತಿ ತಿಳಿಯಿತು. ಈ ವೇಳೆ ಸ್ಥಳಕ್ಕೆ ಧಾವಿಸಿದ ಕಳಿಯ ಗ್ರಾಮ ಪಂಚಾಯತ್ […]

DAKSHINA KANNADA HOME LATEST NEWS STATE

ವಿಜಯಪುರದ ಮಂಗಳೂರಿನಲ್ಲಿ ಜೆಟ್‌ ವಿಮಾನ ಪತನ

ವಿಜಯಪುರ: ಖಾಸಗಿ ಜೆಟ್ ವಿಮಾನವೊಂದು ಪತನಗೊಂಡಿದ್ದು ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾದ ಘಟನೆ ವಿಜಯಪುರ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಫೆ.8 ರಂದು ನಡೆದಿದೆ. ಈ ವಿಮಾನದಲ್ಲಿ ಪೈಲಟ್ ಗಳಾದ ಗೌತಮ್ ಮತ್ತು ಕಂಪನಿ ಸಿಬ್ಬಂದಿ ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಪತಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೂ ಗಂಭೀರ ಪ್ರಮಾಣದ ಗಾಯಗಳಾಗಿದ್ದು ನಗರದ ಬಿಎಲ್‌ಡಿಇ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಲಾಗಿದೆ.