Tag: mangaluru

DAKSHINA KANNADA HOME LATEST NEWS

70 ರೂ.ಗೆ ಏರಿದ ಎಳನೀರು ದರ: ಮತ್ತಷ್ಟು ಏರಿಕೆಯಾಗುವ ಸಂಭವ

ಮಂಗಳೂರು: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಏರುತ್ತಿದ್ದು, ಇದರ ಜೊತೆಗೆ ಸೀಯಾಳ ದರವೂ 50 ರು.ನಿಂದ 70 ರು.ಗೆ ಏರಿಕೆಯಾಗಿದೆ. ಮತ್ತಷ್ಟು ಏರಿಕೆಯಾಗುವ ಸಂಭವವಿದೆ. ನಗರದ ಪ್ರದೇಶಗಳಲ್ಲಿ ಶರೀರ ತಂಪಾಗಿಸಿಕೊಳ್ಳಲು ಎಳನೀರು ಸೇವಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ತಿಂಗಳ ಹಿಂದಷ್ಟೇ 50 ರು. ಆಗಿದ್ದ ಎಳನೀರಿನ ಬೆಲೆ, ಕಳೆದ ತಿಂಗಳು 60 ರು. ಮತ್ತು ಈ ತಿಂಗಳು 70 ರು.ಗೆ ಏರಿಕೆಯಾಗಿದೆ. ಜೊತೆಗೆ ಕರಾವಳಿಯಲ್ಲಿ ಈ […]

DAKSHINA KANNADA HOME LATEST NEWS

ಮಂಗಳೂರು: ವಾರ್ತಾ ಇಲಾಖೆಗೆ ಸಿಎಂ ಮಾಧ್ಯಮ ಸಲಹೆಗಾರರ ಭೇಟಿ

ಮಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಅವರು ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಭೇಟಿ ನೀಡಿದರು. ಕಚೇರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಇಲಾಖಾ ಪ್ರಗತಿ ಮಾಹಿತಿ ಪಡೆದರು. ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಪತ್ರಕರ್ತರ ಪ್ರವಾಸಕ್ಕೆ ಹೊಸ ಬಸ್ ಒದಗಿಸುವ ಬಗ್ಗೆ ಶೀಘ್ರದಲ್ಲಿ ಸರಕಾರ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು. ಗ್ರಾಮಾಂತರ ಪತ್ರಕರ್ತರ ಬಸ್ ಪಾಸ್ ಹಾಗೂ ಪತ್ರಕರ್ತರ ಪಿಂಚಣಿ ಯೋಜನೆ ಕುರಿತು ಅವರು ಚರ್ಚಿಸಿದರು. ಈ ಸಂದರ್ಭದಲ್ಲಿ […]

COMMUNITY NEWS HOME LATEST NEWS

MLC ಐವನ್ ಡಿಸೋಜಾಗೆ ಕಥೊಲಿಕ್ ಸಭಾದಿಂದ ಅಭಿನಂದನೆ

ಮಂಗಳೂರು: ವಿಧಾನ್ ಪರಿಷತ್ ಕಲಾಪದಲ್ಲಿ ಅಲ್ಪಸಂಖ್ಯಾತರ ಪರವಾಗಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿದ MLC ಐವನ್ ಡಿಸೋಜಾ ಅವರನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ಮಂಗಳೂರಿನಲ್ಲಿ ಶನಿವಾರ ನಡೆಯಿತು. “ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ವಿಧೇಯಕ” ತಿದ್ದುಪಡಿ 2025 ರಲ್ಲಿ ಪ್ರವರ್ಗ-2ಬಿ ನಲ್ಲಿ – ಕರ್ನಾಟಕ ಸರಕಾರವು, ತನ್ನ ನಿರ್ಮಾಣದ ಕೆಲಸ ಕಾರ್ಯಗಳಿಗೆ ಕಾಂಟ್ರಾಕ್ಟ್ ಗಳನ್ನು ನೀಡುವಾಗ ಅದರಲ್ಲಿನ 4% ಕಾಂಟ್ರಾಕ್ಟ್ ಗಳನ್ನು ಅಲ್ಪಸಂಖ್ಯಾತ ವರ್ಗದವರಿಗೆ ಮೀಸಲಾತಿಯನ್ನು ನೀಡಬೇಕು ಎಂಬ ಹೊಸ ಪ್ರಸ್ತಾವನೆಯನ್ನು […]

HOME INETRNATIONAL LATEST NEWS NATIONAL

ಗಗನಮುಖಿಯಾದ ಚಿನ್ನದ ಬೆಲೆ: 10 ಗ್ರಾಂ ಚಿನ್ನದ ಬೆಲೆ ರೂ. 91,950

ನವದೆಹಲಿ:  ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ.700 ಏರಿಕೆಯಾಗಿ, ಸಾರ್ವಕಾಲಿಕ ರೂ. 91,950 ಆಗಿದೆ ಎಂದು ಅಖಿಲ ಭಾರತ ಸರಾಫ್‌ ಸಂಘ ತಿಳಿಸಿದೆ. ಇದಲ್ಲದೇ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ ಮತ್ತು ಅಮೆರಿಕದ ಆರ್ಥಿಕ ಕುಸಿತವೂ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 700 ರೂ. ಏರಿಕೆಯಾಗಿದ್ದು, 91, 950 ರೂ. ಆಗಿದೆ. ಮಂಗಳವಾರ 10 ಗ್ರಾಂ ಚಿನ್ನದ ಬೆಲೆ ರೂ.91, 250 ಆಗಿತ್ತು. […]

DAKSHINA KANNADA LATEST NEWS

೨೦೨೪-೨೫ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ದ.ಕ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದ.ಕ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ೨೦೨೪-೨೫ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ ಮಂಗಳೂರು ಮಂಗಳ ಕ್ರೀಡಾ0ಗಣದಲ್ಲಿ ಬುಧವಾರ ನಡೆಯಿತು. ಕರ್ನಾಟಕ ಸರಕಾರದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಡಿ ಎಸ್ ಗಟ್ಟಿ […]

DAKSHINA KANNADA HOME LATEST NEWS

ಮಾ.21 ರಿಂದ ಮಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮರ‍್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶ ಎಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಹಾಗೂ ವಿಶೇಷ ಕರ‍್ಯನರ‍್ವಾಹಕ ದಂಡಾಧಿಕಾರಿ ಸಿದ್ದರ‍್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೆೀಧಿತ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678