Tag: mangaluru

COMMUNITY NEWS DAKSHINA KANNADA HOME LATEST NEWS

ಮಂಗಳೂರು: ನಾಳೆ ಕವಿತಾ ಟ್ರಸ್ಟ್‌ನ ಇಪ್ಪತ್ತನೇ ಕವಿತಾ ಫೆಸ್ತ್ ಸಂಭ್ರಮ

ಮಂಗಳೂರು: ಕೊಂಕಣಿ ಕಾವ್ಯದ ಸ್ಥಾನಮಾನವನ್ನು ಗಣನೀಯವಾಗಿ ಹೆಚ್ಚಿಸಿರುವ ಕವಿತಾ ಟ್ರಸ್ಟ್, ಈ ವರ್ಷ ತನ್ನ ಇಪ್ಪತ್ತನೇ ಕವಿತಾ ಫೆಸ್ತ್ ಹಬ್ಬವನ್ನು ಆಚರಿಸುತ್ತಿದೆ. ಈ ಉತ್ಸವವು ಜ. 11 ರಂದು ಬೆಳಿಗ್ಗೆ 9:30 ರಿಂದ ಸಂಜೆ 4:30 ರವರೆಗೆ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ)ನಲ್ಲಿರುವ ಮದರ್ ತೆರೇಸಾ ಪೀಸ್ ಪಾರ್ಕ್‌ನಲ್ಲಿ ನಡೆಯಲಿದೆ. ಕೊಂಕಣಿ ಭಾಷೆಯ ಬಗ್ಗೆ ಉತ್ಸಾಹ ಹೊಂದಿರುವ ಯಾರಾದರೂ ಈ ಉತ್ಸವದಲ್ಲಿ ಭಾಗವಹಿಸಬಹುದು. ಬೆಳಿಗ್ಗೆ, ಮೆರವಣಿಗೆಯು ಟಾಗೋರ್ ಪಾರ್ಕ್‌ನಿಂದ ಪ್ರಾರಂಭವಾಗಿ ಮದರ್ ತೆರೇಸಾ ಪೀಸ್ ಪಾರ್ಕ್‌ಗೆ ಮುಂದುವರಿಯುತ್ತದೆ. […]

DAKSHINA KANNADA HOME LATEST NEWS

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

ಮಂಗಳೂರು: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ನಾಲ್ಕನೇ ದಿನವನ್ನು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ದಿನದ ಮುಖ್ಯ ಚಿಂತನೆಯ ವಿಷಯ “ನಿಮ್ಮ ಕರೆಯನ್ನು ದೃಢಪಡಿಸಿಕೊಳ್ಳಲು ಸಕಲ ಪ್ರಯತ್ನ ಮಾಡಿ” ಎಂಬುದಾಗಿತ್ತು. ಸಂತ ಶಿಲುಬೆಯ ಯೋವಾನರ ಆಧ್ಯಾತ್ಮಿಕ ಬರಹಗಳ ಬೆಳಕಿನಲ್ಲಿ, ಕ್ರೈಸ್ತ ಕರೆಯ ಬಗ್ಗೆ ನಿಷ್ಠೆ, ಶಿಸ್ತು ಮತ್ತು ಬದ್ಧತೆಯನ್ನು ಉಳಿಸಿಕೊಳ್ಳುವ ಕುರಿತು ಈ ದಿನದಂದು ವಿಶೇಷ ಪ್ರಬೋಧನೆ ನೀಡಲಾಯಿತು. ಸಂತ ಶಿಲುಬೆಯ ಯೋವಾನರ ಪುಣ್ಯಪಟ್ಟದ 300ನೇ ವರ್ಷಾಚರಣೆ ಮತ್ತು […]

DAKSHINA KANNADA HOME LATEST NEWS

ಡ್ಯೂಟಿಯಲ್ಲಿದ್ದ ಮಂಗಳೂರು ಟ್ರಾಫಿಕ್‌ ಪೊಲೀಸರ ಬೈಕ್‌ ಕಳ್ಳತನ: ಅರ್ಧ ಗಂಟೆಯ ಕೈಚಳಕ

ಮಂಗಳೂರು: ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರೊಬ್ಬರು ಪಾರ್ಕ್‌ ಮಾಡಿದ ಅರ್ಧಗಂಟೆಯೊಳಗೆ ಬೈಕು ಕಳವು ನಡೆಸಿದ ಬಗ್ಗೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಪುನೀತ್‌ ಬಿ.ವೈ ಎಂಬುವವರು ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಜ.5 ರಂದು ಮಂಗಳೂರು ಕೆ.ಬಿ.ಕಟ್ಟೆಯಲ್ಲಿ ಸಂಚಾರ ನಿಯಂತ್ರಣ  ಕರ್ತವ್ಯಕ್ಕೆ ನೇಮಿಸಿದಂತೆ ಸಂಜೆ 5:30 ಗಂಟೆಗೆ ತನ್ನ ತಂದೆಯ ಹೆಸರಿನಲ್ಲಿರುವ KA-13-EG 3008  ನೋಂದಣಿಯ ಹೋಂಡಾ ಶೈನ್‌ […]

HOME LATEST NEWS

ರಸ್ತೆಗಳೆಲ್ಲವೂ ಕಪ್ಪು ಬಣ್ಣದ್ದೇ ಆಗಿರುತ್ತದೆ ಏಕೆ..? ಏನಿದರ ವಿಶೇಷತೆ….!

ನಾವು ಮನೆಯಿಂದ ಹೊರಗೆ ಕಾಲಿಟ್ಟ ತಕ್ಷಣವೇ ಸಾಮಾನ್ಯವಾಗಿ ಮೊದಲು ಕಾಣಿಸುವುದೇ ಡಾಂಬಾರು ರಸ್ತೆಗಳು. ನಮ್ಮ ಊರಿನಿಂದ ಬೇರೆ ಎಲ್ಲಾದರೂ ಪ್ರಯಾಣಿಸುವುದಾದರೂ ನಾವು ಹೋಗುವುದು ರಸ್ತೆಗಳಲ್ಲೇ, ಆದರೆ ಆ ಹೆಚ್ಚಿನ ರಸ್ತೆಗಳೆಲ್ಲವೂ ಕಪ್ಪು ಬಣ್ಣದ್ದೇ ಆಗಿರುತ್ತದೆ ಏಕೆ ಎಂದು ಕುತೂಹಲ ಹುಟ್ಟಿದುವುಂಟು. ಅದಕ್ಕೆ ಉತ್ತರ ಇಲ್ಲಿದೆ ನೋಡಿ. ಪ್ರಪಂಚದ ಹೆಚ್ಚಿನ ರಸ್ತೆಗಳು ಬಿಟುಮೆನ್ ಎಂಬ ವಸ್ತುವಿನಿಂದ ನಿರ್ಮಿಸಲ್ಪಟ್ಟಿವೆ. ಬಿಟುಮೆನ್ ಎನ್ನುವುದು ಕಚ್ಚಾ ತೈಲದಿಂದ ದೊರೆಯುವ ಒಂದು ದಪ್ಪ ದ್ರವ ಪದಾರ್ಥವಾಗಿದ್ದು, ಇದು ನೈಸರ್ಗಿಕವಾಗಿ ಕಪ್ಪು ಅಥವಾ ಗಾಢ ಕಂದು […]

DAKSHINA KANNADA HOME LATEST NEWS

ಅಕ್ರಮ ದನದ ಮಾಂಸ ಸಾಗಾಟ: ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ- ಪ್ರತ್ಯೇಕ FIR

ಮಂಗಳೂರು:  ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಹಾಗೂ ಅದನ್ನು ತಡೆದು ನಿಲ್ಲಿಸಿದ ಪ್ರಕರಣದ ಬಗ್ಗೆ ಜೊತೆಗೆ ಇದೇ ಹಿನ್ನೆಲೆ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಘಟನೆ ವಿವರ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಡಿ.27 ರಂದು  ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತನು ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ […]

DAKSHINA KANNADA HISTORY HOME LATEST NEWS

ನಿಮ್ಮ ಪರ ಪ್ರಚಾರಕ್ಕೆ ರೆಡಿ: ಶಾಸಕ ಅಶೋಕ್ ರೈಗೆ ಪೆರುವಾಯಿ BJP ಕಾರ್ಯಕರ್ತರ ಭರವಸೆ..!

ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆ ನೀಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ […]

COMMUNITY NEWS DAKSHINA KANNADA HOME LATEST NEWS

ಮಂಗಳೂರು ಧರ್ಮಕ್ಷೇತ್ರದ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆ: ಮಕ್ಕಳ ವರ್ಷ ಘೋಷಣೆ

ಮಂಗಳೂರು: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಿಲಾಗ್ರಿಸ್ ಚರ್ಚ್‌ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ವರೆಗೆ ಮೆರವಣಿಗೆಯು ನಡೆಯಿತು.     ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಅಧ್ಯಕ್ಷತೆಯಲ್ಲಿ ಮಿಲಾಗ್ರಿಸ್ ಚರ್ಚ್‌ನಲ್ಲಿ ನಡೆದ ಸಾಮೂಹಿಕ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಈ ಹಬ್ಬವು ಜ್ಯೋತಿಷಿಗಳ ಭೇಟಿಯ ಮೂಲಕ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ಕಾರಿನ ಟೈಯರ್ ಬ್ಲಾಸ್ಟ್: ಅದೃಷ್ಟವಶಾತ್ ಪಾರಾದ ಬೋಂದೆಲ್ ಚರ್ಚ್ ಪಾದ್ರಿ

ಮಂಗಳೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಎಸೆಯಲ್ಪಟ್ಟ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾವೂರು ಬಳಿಯ ಮರಕಡದಲ್ಲಿ ಜನವರಿ 1 ರಂದು ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು.‌ ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ […]

COMMUNITY NEWS DAKSHINA KANNADA HOME

ಮೊಗರ್ನಾಡು ದೇವ ಮಾತಾ ದೇವಾಲಯದ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆ

ವಿಟ್ಲ: ಬಂಟ್ವಾಳ ತಾಲೂಕಿನ ಅಮ್ಟೂರು ಕರಿಂಗಾಣ ದೇವ ಮಾತಾ ದೇವಾಲಯ ಮೊಗರ್ನಾಡು ಇದರ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ನಡೆಯಿತು.‌ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಅಂಗವಾಗಿ ‘ತ್ರಿದುಮ್’ ಸಂಭ್ರಮಾಚರಣೆಯನ್ನು ವಿಜ್ರಂಭಣೆಯನ್ನು ಆಚರಿಸಲಾಯಿತು. ಡಿಸೆಂಬರ್ 29ರಂದು ಜ್ಯುಬಿಲಿ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ದಾನವನ್ನು ನೀಡಿದ ದಾನಿಗಳಿಗೆ ಮತ್ತು ದೇವಾಲಯದ ಭಕ್ತಾಭಿಮಾನಿಗಳಿಗೆ ವಿಶೇಷ ಬಲಿ ಪೂಜೆಯನ್ನು ಏರ್ಪಡಿಸಲಾಗಿತ್ತು. ನಂತೂರು ಮಂಗಳ ಜ್ಯೋತಿಯ ನಿರ್ದೇಶಕರರಾದ ವಂದನೀಯ ಫಾದರ್ ರೋಹಿತ್ ಡಿಕೊಸ್ತ ದಿವ್ಯ ಬಲಿಪೂಜೆಯನ್ನು ನೇರವೇರಿಸಿದರು. ಡಿಸೆಂಬರ್ 30ರಂದು ಪೂರ್ವಜರ […]

DAKSHINA KANNADA HOME LATEST NEWS

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಸಲಹಾ ಸಮಿತಿಗಳನ್ನು ರಚಿಸಲು ಆದೇಶ

ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಧೀನದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸಲಹಾ ಸಮಿತಿಗಳನ್ನು ರಚಿಸಲು ಸರಕಾರ ಗುರುವಾರ ಮಂಜೂರಾತಿ ನೀಡಿ ಆದೇಶ ನೀಡಿದೆ. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಸ್. ಎಜಾಸ್ ಪಾಷಾ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ರಾಜ್ಯಾ ದ್ಯಂತ ಕ್ರಿಶ್ಚಿಯನ್ ಸಮದಾಯ ಅಭಿವೃದ್ಧಿಯ ಆನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಚಟುವಟಿಕೆ ಗಳನ್ನು ಜಾರಿಗೆ ತರಲಾಗುತ್ತದೆ. […]