ಎ.15ರಂದು ಮಂಗಳೂರಿನ ಹಲವೆಡೆ ವಿದ್ಯುತ್ ನಿಲುಗಡೆ
ಮಂಗಳೂರು: ನಗರದ ಅತ್ತಾವರ ಉಪಕೇಂದ್ರದಿಂದ ಹೊರಡುವ ಎವರಿ ಜಂಕ್ಷನ್ ಫೀಡರ್ ವ್ಯಾಪ್ತಿಯಲ್ಲಿ ಎ.15ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ. ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಈ ಫೀಡರ್ನಲ್ಲಿ ಮಾದರಿ ಉಪವಿಭಾಗದ ಯೋಜನೆಯಡಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹಾಗಾಗಿ ಬಲ್ಮಠ ನ್ಯೂರೋಡ್, ಸ್ಟರಕ್ ರೋಡ್, ಮೋತಿಮಹಲ್, ಎವರಿ ಜಂಕ್ಷನ್, ಅಥೆನಾ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ. ಉರ್ವಮಾರ್ಕೆಟ್, ಹೊಯ್ಗೆಬೈಲ್ ನಗರದ ಉರ್ವಮಾರ್ಕೆಟ್ ಉಪಕೇಂದ್ರದಿಂದ ಹೊರಡುವ ಹೊಯ್ಗೆಬೈಲ್ ಫೀಡರ್ ವ್ಯಾಪ್ತಿಯಲ್ಲಿ […]