Tag: mangaluru

HOME LATEST NEWS NATIONAL

ಇಂದು ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ…!

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಭರ್ಜರಿ ಹೆಚ್ಚಳ ಆಗಿದೆ. ಒಂದೇ ದಿನಕ್ಕೆ ಗುರುವಾರ ಸಾವಿರ ರೂಪಾಯಿ ಮೇಲ್ಪಟ್ಟು ಏರಿಕೆ ಆಗಿತ್ತು, ಇದೀಗ ಗುಡ್‌ಫ್ರೈಡೆ ದಿನವೂ 250 ರೂ ಹೆಚ್ಚಳ ಆಗಿದೆ. ಇಂದಿನ ಬೆಲೆ ಎಷ್ಟಿದೆ? ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಂದು ಗ್ರಾಂ ಒಂದಕ್ಕೆ ಬರೋಬ್ಬರಿ 25 ರೂಪಾಯಿ ಹೆಚ್ಚಳ ಆಗಿದೆ. ಇಂದಿನ ಚಿನ್ನದ ದರ 22 ಕ್ಯಾರೆಟ್ 1 ಗ್ರಾಂ ಗೆ 8,945 ರೂ ಇದ್ದು, 24 ಕ್ಯಾರೆಟ್ 1 ಗ್ರಾಂ ಬೆಲೆ 27 […]

HOME LATEST NEWS

ಸ್ನೇಹಾಲಯ- ಜನಮೈತ್ರಿ ಪೊಲೀಸ್ ಸಂಘಟನೆಯಿಂದ ಉಪ್ಪಳ & ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ

ಕಾಸರಗೋಡು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ ವಿಶೇಷವಾಗಿ ಯುವ ಸಮುದಾಯದ ಮೇಲೆ ಬೀರುವ […]

DAKSHINA KANNADA LATEST NEWS

ರೋಹನ್ ಕಾರ್ಪೊರೇಶನ್‌ನ Rohan Ethosಗೆ ಎ. 19 ರಂದು ಭೂಮಿಪೂಜೆ

ಮಂಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾ ಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಏ. 19ರಂದು ಸಂಜೆ 5 ಗಂಟೆಗೆ ನಗರದ ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ […]

DAKSHINA KANNADA LATEST NEWS

ಮಂಗಳೂರು: ಪಿ.ಎ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರು: ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಏ.15 ರಂದು ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ಲಡ್ ಡೊನೇಶನ್ ಕ್ಯಾಂಪ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಿತು‌. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿಗಳಾದ  ಡಾ. ಸುಖೇಶ್ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ  ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ […]

DAKSHINA KANNADA HOME LATEST NEWS

ಕದ್ರಿ ಮಂಜುನಾಥೇಶ್ವರ ಆಡಳಿತ ಮಂಡಳಿಯ ನೂತನ ಸದಸ್ಯರಿಗೆ ಶಾಸಕ ಐವನ್ ಡಿ’ಸೋಜಾರಿಂದ ಸನ್ಮಾನ

ಮಂಗಳೂರು: ದೇವರ ಸೇವೆ ಮಾಡುವ ಅವಕಾಶ ಪಡೆದಿರುವ ಟ್ರಸ್ಟಿಗಳು ಸಮಾಜದ ಎಲ್ಲಾ ವರ್ಗಗಳ ಸೇವೆಗಳಿಗೆ ಬದ್ದರಾಗಿದ್ದು, ಸಾಮಾಜಿಕ ಸೇವೆ ಬದ್ಧತೆಯಿಂದ ಮಾಡುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಶಕ್ತಿ ಬರಲಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರು ತಮ್ಮ ಮಹಾನಗರ ಪಾಲಿಕೆ ಕಛೇರಿಯಲ್ಲಿ ಕದ್ರಿ ಮಂಜುನಾಥೇಶ್ವರ ದೇವರ ಆಡಳಿತ ಮಂಡಳಿಗೆ ನೂತನವಾಗಿ ನೇಮಕಗೊಂಡ ಸದಸ್ಯರನ್ನು ಸನ್ಮಾನಿಸಿ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ದೇವರಾಜ್ ಕೆ. ದೇವರ […]

DAKSHINA KANNADA HOME LATEST NEWS

ಎಮ್.ಸಿ.ಸಿ. ಬ್ಯಾಂಕ್ 2024–25 ವಿತ್ತೀಯ ವರ್ಷದಲ್ಲಿ 13.00 ಕೋಟಿ ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ

ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ 1.30% ಎನ್.ಪಿ.ಎ. ದಾಖಲಿಸಿದೆ. ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ […]

DAKSHINA KANNADA HOME LATEST NEWS

ದ. ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

  ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು. ನ್ಯಾಯ ಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕರಾಗಿದ್ದ ಅಂಬೇಡ್ಕರ್ ಅವರು ಜೀವನದ ಉದ್ದಕ್ಕೂ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ವರ್ಗದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಅಪೇಕ್ಷೆ ಮೇರೆಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅನೇಕ ಅನುಕೂಲತೆಗಳನ್ನು ನೀಡಿದ್ದಾರೆ. ಅಸ್ಪೃಶ್ಯತೆ, ಅಸಮಾನತೆಯ […]

DAKSHINA KANNADA HOME LATEST NEWS

ಬಿಜೆಪಿ ಮಂ.ದಕ್ಷಿಣದ ಎಸ್ ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟರವರು ಪ್ರಸ್ತಾವಿಕ ಮಾತುಗಳನ್ನಾಡಿ, ಎಲ್ಲರನ್ನೊಳಗೊಂಡ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದ ಬಾಬಾ ಸಾಹೇಬರ ಆದರ್ಶವನ್ನು […]

DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ

ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್‌ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಏ.29 ರಂದು ಬೃಹತ್‌ ಪ್ರತಿಭಟನೆ

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್‌ ಕಣ್ಣೂರಿನಲ್ಲಿ ಎ.29ರಂದು ಬೃಹತ್‌ ಪ್ರತಿಭಟನೆ ನಡೆಯಲಿದೆ. ಅಂದು ಸಂಜೆ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿ ಕೊಳ್ಳಲಾಗಿದೆ.ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಪ್ರತಿಭಟನೆಯಲ್ಲಿ ದ.ಕ- ಉಡುಪಿ ಜಿಲ್ಲೆಯ ಲಕ್ಷಾಂತರ ಜನರ ಜೊತೆಗೆ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678