Tag: mangaluru

DAKSHINA KANNADA HOME LATEST NEWS

ಕಡಬ: ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಮ್ಮ- ನರಳಾಡಿ ಪ್ರಾಣ ಬಿಟ್ಟ ಅಣ್ಣ

ಕಡಬ: ಕೌಟುಂಬಿಕ ಕಲಹದಲ್ಲಿ ಸ್ವಂತ ಅಣ್ಣನನ್ನೇ ತಮ್ಮನೊಬ್ಬ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಜಕರೆ ಬಳಿ ರೈಲ್ವೇ ಟ್ರಾಕ್ ನಲ್ಲಿ ನಡೆದಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ತಮ್ಮನನ್ನು ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆತನ ತಮ್ಮ ನಿಂಗಪ್ಪ (21) […]

DAKSHINA KANNADA HOME LATEST NEWS STATE

ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ: ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರು ಸುಶಿಕ್ಷಿತರು, ಬುದ್ಧಿಜೀವಿಗಳು. ಕೆಲವೇ ಕೆಲವು ಜನರಿಂದ ಈ ಜಿಲ್ಲೆಯ ಘನತೆಗೆ ಚ್ಯುತಿ ತರುವ ಪ್ರಯತ್ನವಾಗುತ್ತಿದೆ. ಇದನ್ನು ಮಟ್ಟಹಾಕಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಪ್ರಯತ್ನಪಡುವ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಇದು ಖಂಡನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.99ಜನರಿಗೆ ಈ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಬೇಕು, ಅಭಿವೃದ್ಧಿಯಾಗಬೇಕು. ಈ ಜಿಲ್ಲೆಗೆ ಹೊಸ ಕೈಗಾರಿಕೆಗಳು […]

DAKSHINA KANNADA HOME LATEST NEWS

ಕಾರಿಗೆ ಬಸ್ಸು ಢಿಕ್ಕಿ: ವರ್ಕಾಡಿಯ ಯುವಕ ಕೊನೆಯುಸಿರು

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ರಾಗಂ ಜಂಕ್ಷನ್ ಬಳಿ ಕಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದು, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಜೂನ್ 1ರಂದು ಮೃತಪಟ್ಟಿದ್ದಾನೆ. ಮೇ 30ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವರ್ಕಾಡಿ ತೋಕೆ ನಿವಾಸಿಗಳಾದ ಕೆಲ್ವಿನ್ ಡಿಸೋಜ (18), ಪ್ರಜ್ವಲ್ (24), ಪ್ರೀತಂ (19) ಗಾಯಗೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಕೆಲ್ವಿನ್ ಡಿ ಸೋಜಾ ಜೂ.1ರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಮೃತ ಕೆಲ್ವಿನ್ […]

DAKSHINA KANNADA HOME LATEST NEWS

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್‌: ಯತೀಶ್‌ ಪೆರುವಾಯಿ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಂಚಿಕೊಂಡಿದ್ದ ಯುವಕನೋರ್ವನ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು […]

DAKSHINA KANNADA HOME LATEST NEWS STATE

ಕರಾವಳಿ ಪೊಲೀಸ್‌ ಇಲಾಖೆಗೆ ಭರ್ಜರಿ ಸರ್ಜರಿ ಎಸ್ಪಿ ಹಾಗೂ ಪೊಲೀಸ್‌ ಕಮೀಷನರ್‌ ಎತ್ತಂಗಡಿ

ಮಂಗಳೂರು: ಕರಾವಳಿಯಲ್ಲಿ ನಡೆದ ಕೋಮುಹತ್ಯೆಯನ್ನು ಹತ್ತಿಕ್ಕುವಲ್ಲಿ ವಿಫಲವಾದ ಪೊಲೀಸ್‌ ಇಲಾಖೆಗೆ ರಾಜ್ಯ ಸರ್ಕಾರ ಸರ್ಜರಿ ಮಾಡಿದ್ದು, ಇದರ ಮೊದಲ ಭಾಗವಾಗಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗ್ರವಾಲ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯನ್ನು  ವರ್ಗಾವಣೆ ಮಾಡಲಾಗಿದೆ.  ನೂತನ ಪೊಲೀಸ್‌ ಆಯುಕ್ತರಾಗಿ ಸುಧೀರ್‌ ಕುಮಾರ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಎಸ್ಪಿ ಸ್ಥಾನಕ್ಕೆ ಹಾಲಿ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್‌ ಕೆ ಅವರನ್ನು ನೇಮಿಸಲಾಗಿದೆ. 2010 ನೇ ಬ್ಯಾಚ್‌ನ ಐಪಿಎಸ್‌ […]

COMMUNITY NEWS LATEST NEWS

ಪೆಹಲ್ಗಾಮ್‌ ದಾಳಿ ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ

ಮಂಗಳೂರು: ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ […]

DAKSHINA KANNADA HOME LATEST NEWS

“ವಕ್ಫ್‌ ಪ್ರತಿಭಟನೆ ವೇಳೆ ಪ್ರತಿಭಟನಕಾರರು ಪೊಲೀಸ್‌ ಜೀಪು ಬಳಸಿಲ್ಲ”

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನ ಅಡ್ಯಾರ್‌ನಲ್ಲಿ ನಿನ್ನೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಯ ಕಾರನ್ನು ಬಳಸಿದ ಬಗ್ಗೆ ವಿಡಿಯೋ ಸಮೇತ  ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಕೇಳಿಬಂದಿತ್ತು. ಇದಕ್ಕೆ  ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಭಟನೆಯ ಸಂದರ್ಭ ಬಂದೋಬಸ್ತಿನಲ್ಲಿದ್ದ ಎಸಿಪಿ (ಸಂಚಾರ ಉಪ ವಿಭಾಗ)ಯವರು ಕಾರ್ರಕ್ರಮ ಮುಗಿದ ಬಳಿಕ ಮಂಗಳೂರು ಕಡೆಗೆ ತೆರಳುವ ಸಂಚಾರ […]

COMMUNITY NEWS DAKSHINA KANNADA HOME LATEST NEWS

ಈಸ್ಟರ್ ಹಬ್ಬದ ಸಂದೇಶ ನೀಡಿದ ಧರ್ಮಾಧ್ಯಕ್ಷ ಅ.ವಂ. ಪೀಟರ್‌ ಪಾವ್ಲ್‌ ಸಲ್ದಾನ

ಮಂಗಳೂರು: ಈಸ್ಟರ್ ಹಬ್ಬದ ಪ್ರಯುಕ್ತ ಮಂಗಳೂರು ಧರ್ಮಾಧ್ಯಕ್ಷ ಅ.ವಂ. ಪೀಟರ್‌ ಪಾವ್ಲ್‌ ಸಲ್ದಾನ ಅವರು ಶುಭಾಶಯ ಕೋರಿ ಈಸ್ಟರ್‌ ಸಂದೇಶ ನೀಡಿದ್ದಾರೆ. ಆ ಸಂದೇಶ ಹೀಗಿದೆ. “ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ […]

DAKSHINA KANNADA HOME LATEST NEWS

ವಿಶ್ವದಾದ್ಯಂತ ಇಂದು ಕ್ರೈಸ್ತರಿಗೆ ಗುಡ್‌ ಫ್ರೈಡೇ

ಮಂಗಳೂರು: ಕ್ರೈಸ್ತ ಧರ್ಮದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ. ಈ ದಿನವನ್ನು ಪ್ರತಿವರ್ಷ ಈಸ್ಟರ್‌ ಭಾನುವಾರದ ಮೊದಲ ಶುಕ್ರವಾರದಂದು ಆಚರಿಸಲಾಗುತ್ತದೆ. ಇದು ಏಸು ಕ್ರಿಸ್ತನನ್ನು ಶಿಲುಬೆಗೇರಿಸಿದ ದಿನವಾದ್ದರಿಂದ ಗುಡ್‌ ಫ್ರೈಡೇ ತನ್ನ ಹೆಸರಿನಲ್ಲಿ ಸಾಂಕೇತಿಕವಾಗಿ ಶುಭವನ್ನು ಸೂಚಿಸಿದರೂ ಕ್ರಿಶ್ಚಿಯನ್‌ ಸಮುದಾಯಕ್ಕೆ ಇದು ದುಃಖದ ದಿನವಾಗಿದೆ. ಈ ದಿನ ಪ್ರೀತಿ, ಜ್ಞಾನ ಮತ್ತು ಅಹಿಂಸೆಯ ಸಂದೇಶವನ್ನು ನೀಡಿದ ಹಾಗೂ ಮಾನವ ಕುಲದ ಕಲ್ಯಾಣಕ್ಕಾಗಿ ತನ್ನನ್ನು ತಾನೇ ತ್ಯಾಗ ಮಾಡಿದ ಏಸು ಕ್ರಿಸ್ತರ ತ್ಯಾಗವನ್ನು ಸ್ಮರಿಸಲಾಗುತ್ತದೆ. ಕ್ರೈಸ್ತ ಸಮುದಾಯದವರು ಈ […]

HOME LATEST NEWS NATIONAL

ಇಂದು ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ…!

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಭರ್ಜರಿ ಹೆಚ್ಚಳ ಆಗಿದೆ. ಒಂದೇ ದಿನಕ್ಕೆ ಗುರುವಾರ ಸಾವಿರ ರೂಪಾಯಿ ಮೇಲ್ಪಟ್ಟು ಏರಿಕೆ ಆಗಿತ್ತು, ಇದೀಗ ಗುಡ್‌ಫ್ರೈಡೆ ದಿನವೂ 250 ರೂ ಹೆಚ್ಚಳ ಆಗಿದೆ. ಇಂದಿನ ಬೆಲೆ ಎಷ್ಟಿದೆ? ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಂದು ಗ್ರಾಂ ಒಂದಕ್ಕೆ ಬರೋಬ್ಬರಿ 25 ರೂಪಾಯಿ ಹೆಚ್ಚಳ ಆಗಿದೆ. ಇಂದಿನ ಚಿನ್ನದ ದರ 22 ಕ್ಯಾರೆಟ್ 1 ಗ್ರಾಂ ಗೆ 8,945 ರೂ ಇದ್ದು, 24 ಕ್ಯಾರೆಟ್ 1 ಗ್ರಾಂ ಬೆಲೆ 27 […]