ಕಥೋಲಿಕ್ ಚರ್ಚ್ಗಳಲ್ಲಿ ಬ್ರ. ಸಜಿತ್ ಜೋಸೆಫ್ಗೆ ನಿಷೇಧ: ಭಾರೀ ಪರ- ವಿರೋಧ ಚರ್ಚೆ
ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಸುದ್ದಿ ಮಾಡಿ, ತನ್ನ ವಿಶೇಷ ಬೋಧನೆಯಿಂದ ಸಾವಿರಾರು ಭಕ್ತರನ್ನು ಒಂದೆಡೆ ಸೇರಿಸುವ ಮೂಲಕ ಖ್ಯಾತಿ ಪಡೆದಿದ್ದ ಕೇರಳ ಮೂಲದ ಸಜಿತ್ ಜೋಸೆಫ್ ಅವರನ್ನು ಕೇರಳದ ಸಿರಿಯನ್ ಕೆಥೋಲಿಕ್ ಮಲಬಾರ್ ಚರ್ಚ್ ಆಡಳಿತವು ದಿಢೀರ್ ಆಗಿ ಬೋಧಕ ಸ್ಥಾನದಿಂದ ತೆರವು ಮಾಡಿದ್ದು ಆತನನ್ನು ಯಾವುದೇ ಚರ್ಚ್ ಗಳಲ್ಲಿ ಪ್ರಾರ್ಥನೆಗೆ ಬಳಸಿಕೊಳ್ಳದಂತೆ ನಿಷೇಧ ವಿಧಿಸಿದೆ. ಜೊತೆಗೆ ಕರ್ನಾಟಕದಲ್ಲೂ ಕಥೋಲಿಕ ಕ್ರೈಸ್ತರ ಚರ್ಚ್ಗಳಲ್ಲಿ ಆತನಿಗೆ ನಿಷೇಧ ಹೇರಿದ್ದಾರೆ. ಸಿರಿಯನ್ ಕೆಥೋಲಿಕ್ […]











