Tag: mangaluru

DAKSHINA KANNADA HOME LATEST NEWS

ಆರ್ಥಿಕ ಸಮಸ್ಯೆಯಿಂದ ನೊಂದು ಯುವಕ ನೇಣಿಗೆ ಶರಣು

ಮಂಗಳೂರು: ಆರ್ಥಿಕ ಸಮಸ್ಯೆಯಿಂದ ನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಡಿಕಲ್‌ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ವಿವರ ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ.  ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ  […]

DAKSHINA KANNADA HOME LATEST NEWS

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ- ವೆಬ್‌ಸೈಟ್‌ ಮೇಲೆ ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. Gadinadadhwani.online ಎಂಬ ವೆಬ್‌ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

DAKSHINA KANNADA HOME LATEST NEWS

ವಿಟ್ಲ: ವಾಹನ ದಟ್ಟನೆ ನಿಯಂತ್ರಿಸಲು ಫ್ಲೆಕ್ಸ್ ಮತ್ತು ತಳ್ಳುಗಾಡಿ ತೆರವು

ವಿಟ್ಲ: ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆ ನಿಯಂತ್ರಿಸಲು ಇಲ್ಲಿನ ಪಟ್ಟಣ ಪಂಚಾಯತ್ ಅಧಿಕಾರಿಗಳು ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸಿದರು. ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಶನಿವಾರ ಪಟ್ಟಣ ಪಂಚಾಯತ್ ವತಿಯಿಂದ ಪೊಲೀಸ್, ಇಲಾಖೆ ಮತ್ತು ವಾಹನ ಚಾಲಕ ಸಭೆ ಕರೆಯಲಾಗಿತ್ತು. ಈ ವೇಳೆ ಈ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಅಳವಡಿಸಲಾಗಿದ್ದ ಪ್ರಚಾರದ ಫ್ಲೆಕ್ಸ್ […]

LATEST NEWS

ಸೈಂಟ್ ಅಲೋಶಿಯಸ್ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಫೇರ್‌ವೆಲ್‌

ಮಂಗಳೂರು: ಸೈಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ) ಯ ಎಐಎಂಐಟಿ ಕೇಂದ್ರದ ಎಂ.ಬಿ.ಎ ವಿಭಾಗವು ಜೂನ್ 19ರಂದು  ಆರ್ಥರ್ ಶೆಣೈ ಆಡಿಯಟೋರಿಯಂನಲ್ಲಿ 2023–2025 ಎಂ.ಬಿ.ಎ ಬ್ಯಾಚ್ ವಿದ್ಯಾರ್ಥಿಗಳಿಗೆ ಪ್ರಾರ್ಥನಾ ಸೇವೆಯನ್ನು ಆಯೋಜಿಸಿತ್ತು. ಈ ಕಾರ್ಯಕ್ರಮ ವಿದ್ಯಾರ್ಥಿಗಳ ಮುಂದಿನ ಹಂತದ ಶುಭ ಕೋರುವ ಕಾರ್ಯಕ್ರಮವಾಗಿತ್ತು. ಡಾ. ಫಾ. ಮನುಜ್ ಎಸ್‌ಜೆ ಅವರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಎಲ್ಲರನ್ನೂ ತಮ್ಮ ಆಶೀರ್ವಾದಗಳ ಕುರಿತು ಚಿಂತನೆ ಮಾಡಿಕೊಳ್ಳುವಂತೆ ಆಹ್ವಾನಿಸಿದರು. ಅವರ ಸಂದೇಶ ಧನ್ಯತೆಯ ಮಹತ್ವದ ಮೇಲೆ ಕೇಂದ್ರಿತವಾಗಿದ್ದು, […]

DAKSHINA KANNADA HOME LATEST NEWS

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ […]

DAKSHINA KANNADA HOME LATEST NEWS

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ರೇಡ್‌: ಸರ್ವೇಯರ್‌, ದಲ್ಲಾಳಿ ಬಂಧನ

ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್‌ನಲ್ಲಿ ಸರ್ವೆ ನಡೆಸಿ ಲಂಚಕ್ಕೆ […]

DAKSHINA KANNADA HOME LATEST NEWS

ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌ವಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

DAKSHINA KANNADA

ದ.ಕ. ಯುವಜನತೆಯ ಪ್ರತಿಭೆ, ವೃತ್ತಿಜೀವನ, ಉದ್ಯಮಶೀಲತೆ ಉತ್ತೇಜನಕ್ಕಾಗಿ ‘ಯುವ್ವಿಕಾಸ’ ಸಂಕಲ್ಪ: ಸಂಸದ ಕ್ಯಾ. ಚೌಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ ‘ಯುವ್ವಿಕಾಸ್’ ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಸುಳ್ಯದ ತಾಲೂಕು ಪಂಚಾಯತ್‌ನಲ್ಲಿ ಇಂದು ಸಂಸದರ ಕಚೇರಿ ಹಾಗೂ ಸುಂದರ ಭಾರತ ಟ್ರಸ್ಟ್‌ನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ’ಯುವ್ವಿಕಾಸ್ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ. ಜಿಲ್ಲೆಯ ಯುವ ಶಕ್ತಿಗಳನ್ನು ಜಾಗೃತಗೊಳಿಸುವ ಜೊತೆಗೆ ಅವರಿಗೆ ಉಜ್ವಲ ಭವಿಷ್ಯ ರೂಪಿಸುವ ಆಶಯದಡಿ […]

DAKSHINA KANNADA

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ […]

DAKSHINA KANNADA HOME LATEST NEWS

ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

ಮಂಗಳೂರು: ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜೂ.14 ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ […]