Tag: manila

DAKSHINA KANNADA HOME LATEST NEWS

ಕರ್ನಾಟಕ-ಕೇರಳ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕೊಟ್ಟ ಮಾತು ಉಳಿಸಿದ ಶಾಸಕ ರೈ

ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಶೋಕ್ ರೈ ಕೂಡಾ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಅಶೋಕ್ ರೈ ಮಾತುಕೊಟ್ಟು ೨ ವರ್ಷದಲ್ಲೇ ಅದನ್ನು ಪೂರ್ಣಗೊಳಿಸಿದ್ದಾರೆ. ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ೨೦ ಕೋಟಿ ಅನುದಾನ ಮಂಜೂರಾಗಿದೆ. ಸಂಪರ್ಕ ಸೇತುವೆಯಾಗಲಿದೆ ಸಿರಿಯ […]

DAKSHINA KANNADA HOME LATEST NEWS

ಅಪ್ರಾಪ್ತೆಗೆ ಕಿರುಕುಳ ನೀಡಿದ ಪ್ರಕರಣ: ಅರೋಪಿ ಮಹೇಶ್ ಭಟ್‌ಗೆ ಜಾಮೀನು

ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ದಲಿತ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಸ್.ಟಿ.ಎಸ್.ಸಿ.-1 (ಪೊಕ್ಸೊ ನ್ಯಾಯಾಲಯ) ಸೋಮವಾರ ಶರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. ಆರೋಪಿ ಮಹೇಶ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ವಿಶೇಷ ಸರಕಾರಿ ಅಭಯೋಜಕರ, ಅರ್ಜಿದಾರ ಪರ ವಕೀಲರ ಮತ್ತು ಪಿರ್ಯಾದಿದರಾರರು ಮತ್ತಾಕೆಯ ಹೆತ್ತವರನ್ನು ನ್ಯಾಯಾಧೀಶರು ವಿಚಾರಣೆಗೊಳಪಡಿಸಿದ್ದರು. ಕೃತ್ಯ ನಡೆಸಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ, ಆತನನ್ನು ಬಂಧಿಸುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ […]

DAKSHINA KANNADA HOME LATEST NEWS

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಆರೋಪಿ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಮಾಣಿಲ ಗ್ರಾಮದ ಮುರುವದಲ್ಲಿ ದಲಿತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ನಿವಾಸಿ ಮಹೇಶ್ ಭಟ್ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಸೆಕ್ಷನ್ ಹಾಗೂ ದಲಿತ ದೌರ್ಜನ್ಯ ಕಾಯಿದೆಯ ಅನ್ವಯ ಪ್ರಕರಣ ದಾಖಲಾಗಿದ್ದರೂ ಕೂಡ ಪೊಲೀಸ್ ಇಲಾಖೆ ಈ ಕುರಿತು ಕ್ರಮ ಜರುಗಿಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಈ ಕುರಿತು ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ […]