Tag: puttur

DAKSHINA KANNADA HOME LATEST NEWS

ಫೇಸ್‌ಬುಕ್‌ನಲ್ಲಿ ಕೋಮುದ್ವೇಷ & ಸುಳ್ಳು ಸುದ್ದಿ ಪ್ರಸಾರ: SDPI ಅಧ್ಯಕ್ಷನ ಮೇಲೆ FIR

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮುದ್ವೇಷ ಹಾಗೂ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪಕ್ಷದ ಅಧ್ಯಕ್ಷನ ಮೇಲೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ವಿವರ ಜು. 14 ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಧ್ಯಕ್ಷ ಆಶ್ರಪ್ ಬಾವು ಎಂಬಾತ ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ […]

DAKSHINA KANNADA HOME LATEST NEWS

ಬಪ್ಪಳಿಗೆ-ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿ ಇದರ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ವೇಳೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿಯ ಗೌರವಾಧ್ಯಕ್ಷ ರಾಮಚಂದ್ರ ಕೆ. ರಾವ್, ಅಧ್ಯಕ್ಷ ಮೋಹನ್ ಗೌಡ ಸಿಂಗಾಣಿ, ಪ್ರಧಾನ ಕಾರ್ಯದರ್ಶಿ ಲಿಖಿತ್ ರಾಜ್ ಅರಸ್, ಮಾಜಿ ಅಧ್ಯಕ್ಷ ರವಿ […]

DAKSHINA KANNADA HOME LATEST NEWS

ಪುತ್ತೂರು: ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ  2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು,  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]

DAKSHINA KANNADA HOME LATEST NEWS

ನೈತಿಕ ಪೊಲೀಸ್‌ಗಿರಿ ಮಾಡುವವರ ಬಾಲಕ್ಕೆ ಕತ್ತರಿ ಹಾಕಿ: ಪೊಲೀಸರಿಗೆ ಶಾಸಕ ಅಶೋಕ್‌ ರೈ ಸೂಚನೆ

ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಬಂದಿದ್ದ ಯುವಕ-ಯುವತಿ ಮೇಲೆ ಕಿಡಿಗೇಡಿಗಳಿಂದ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ವಿಚಾರ ನನ್ನ‌ಗಮನಕ್ಕೆ ಬಂದಿದ್ದು, ಆರೋಪಿತರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪುತ್ತೂರು ಶಾಸಕ ಅಶೋಕ್‌ ರೈ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಘಟನೆಗೆ ಸಂಬಂಧಿಸಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ‌ಸಮಯಗಳಿಂದ ನಿಂತು ಹೋಗಿದ್ದ ಈ ರೀತಿಯ ಕೆಟ್ಟ ಘಟನೆಗಳು ಪುತ್ತೂರಿನಲ್ಲಿ ನಡೆದಿದೆ. ಬಾಲ ಮುದುಡಿಕೊಂಡಿದ್ದ ಸಮಾಜಘಾತುಕ ಕಿಡಿಗೇಡಿಗಳ ಬಾಲ ಕತ್ತರಿಸುವ ಕೆಲಸ ಮಾಡಲಾಗುತ್ತದೆ. […]

DAKSHINA KANNADA HOME LATEST NEWS

ಪುತ್ತೂರು: ಅಪ್ರಾಪ್ತ ಬಾಲಕ-ಬಾಲಕಿಯನ್ನು ತಡೆದು ವೀಡಿಯೋಗೈದ ಪ್ರಕರಣ; ಇಬ್ಬರ ಬಂಧನ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಬಾಲಕಿಯನ್ನು ತಡೆದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತೇವೆಂದು ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪ್ರಕರಣದ ವಿವರ ಪ್ರಕರಣದ ಸಂತ್ರಸ್ಥ ಬಾಲಕನ ತಂದೆ ನೀಡಿದ ದೂರಿನಂತೆ, ಅಪ್ರಾಪ್ತ ಪ್ರಾಯದ ಮಗನು, ಮೋಟಾರು ಸೈಕಲ್ ನಲ್ಲಿ ಜು.5 ರ ಮಧ್ಯಾಹ್ನದ ವೇಳೆ, ಆತನ ಪರಿಚಯದ ಬಾಲಕಿಯೊಂದಿಗೆ ಪುತ್ತೂರು ಕಸ್ಬಾ ಗ್ರಾಮದ ಬೀರಮಲೆ ಬೆಟ್ಟ ಎಂಬಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸ್ಥಳಕ್ಕೆ ಬಂದು […]

DAKSHINA KANNADA HOME LATEST NEWS

ಪುತ್ತೂರು: ಕ್ರೈಸ್ತ ಧಫನ ಭೂಮಿಯಿಂದ ಕಳೇಬರದ ಎಲುಬು ಕಳ್ಳತನ

ಪುತ್ತೂರು: ಪುತ್ತೂರಿನ ಕ್ರೈಸ್ತ ಧಫನ ಭೂಮಿಯಿಂದ ಕಳೇಬರದ ಎಲುಬು ಕಳ್ಳತನ ಮಾಡಿದ ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರಿನ ಬನ್ನೂರು ಸಂತ ಅಂತೋಣಿ ಚರ್ಚ್‌ನ ಅಧೀನದಲ್ಲಿರುವ ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿದ್ದಾರೆ. ಈ ಬಗ್ಗೆ ಜೂ.14 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಧರ್ಮಗುರುಗಳು ಫಾ.ಬಾಲ್ತಿಜಾರ್ ಪಿಂಟೋ ನೀಡಿದ ದೂರಿನ ಮೇರೆಗೆ, ದೂರರ್ಜಿಯನ್ನು ದಾಖಲಿಸಿಕೊಂಡಿದ್ದು, ಘಟನಾಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ […]

DAKSHINA KANNADA HOME LATEST NEWS

ಪುತ್ತೂರು ಶಾಸಕ ಹಾರೆ ಹಿಡಿದ ಎಫೆಕ್ಟ್‌: ಮಾಣಿ- ಸಂಪಾಜೆ ಹೆದ್ದಾರಿ ಚರಂಡಿ ದುರಸ್ಥಿ ಆರಂಭ

ಪುತ್ತೂರು: ಭಾನುವಾರದಂದು ಪುತ್ತೂರು ಶಾಅಕ ಅಶೋಕ್ ರೈ ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಲೆಯ ಬಳಿ ಚರಂಡಿ ಇಲ್ಲದೆ ರಸ್ತೆ ಮೇಲೆ ಮಳೆ ನೀರು ಹರಿಯುತ್ತಿರುವುದನ್ನು ಗಮನಿಸಿ ಸ್ವಯಂ ಆಗಿ ಹಾರೆ ಹಿಡಿದು ಚರಂಡಿ ಬಿಡಿಸುವ ಕೆಲಸವನ್ನು ಮಾಡಿದ್ದು ಇದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ರಸ್ತೆ ಬದಿ ಯಲ್ಲಿ ಚರಂಡಿಯಲ್ಲಿ ಹೂಳು ತುಂಬಿದ್ದು ಅದನ್ನು ತೆರವು ಮಾಡದ ವಿಚಾರ ಇಂಜಿನಿಯರ್ ಗಳ ಗಮನಕ್ಕೂ ಬರುವಂತಾಗಿತ್ತು. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು. […]

DAKSHINA KANNADA HOME

17 ಬಡ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ ಯವರಿಂದ ಪುಸ್ತಕ ವಿತರಣೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕ ಸಂಕಷ್ಟದಲ್ಲಿರುವ ಒಟ್ಟು 17 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ಶಾಸಕ ಅಶೋಕ್ ರೈ ಅವರು ನೀಡಿದ್ದಾರೆ. ತೀರಾ ಬಡತನದಲ್ಲಿರುವ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಶಾಸಕರು ತನ್ನ ಸ್ವಂತ‌ನಿಧಿಯಿಂದ ಪುಸ್ತಕವನ್ನು ನೀಡಿದ್ದಾರೆ. ಈ‌ಸಂಧರ್ಭದಲ್ಲಿ‌ಮಾತನಾಡಿದ ಶಾಸಕರು ತನ್ನ ಕ್ಷೇತ್ರದಲ್ಲಿ ಅನೇಕ ಸಂಕಷ್ಟದಲದಲಿರುವ ಕುಟುಂಬಗಳು, ಅನಾರೋಗ್ಯದಿಂದ ಮನೆ ಯಜಮಾನ ಕೆಲಸಕ್ಕೂ ಹೋಗಲಾರದೆ ಕಷ್ಟದಲ್ಲಿರುವ ಕುಟುಂಬದ ಮಕ್ಕಳಿಗೆ ಬರೆಯುವ ಪುಸ್ತಕವನ್ನು ನೀಡಲಾಗಿದೆ. ಬಡವರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣಕ್ಕೆ […]

DAKSHINA KANNADA HOME LATEST NEWS

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣು..!

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ […]

DAKSHINA KANNADA HOME LATEST NEWS

ಪುತ್ತೂರು ಜಾತ್ರೆ ಪ್ರಯುಕ್ತ-ಸಂಚಾರ ಮಾರ್ಗ ಬದಲಾವಣೆ

ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ಎಪ್ರಿಲ್ 16 ಮತ್ತು 17 ರಂದು ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ. ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678